ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಬೆಂಗಳೂರು, ಮೈಸೂರು, ಹೈದರಾಬಾದ್, ಮುಂಬೈನಂತಹ ನಗರ ಪ್ರದೇಶಗಳಲ್ಲಿ ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರೆ ಎಂಬ ಆಪ್ ಗಳ ಮೂಲಕ ಸಾರ್ವಜನಿಕರು ಪ್ರಮುಖವಾಗಿ ರೈಲು, ಬಸ್ ನಿಲ್ದಾಣಗಳು ಸೇರಿದಂತೆ ಇನ್ನಿತರ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪುವುದಕ್ಕಾಗಿ ಆಪ್ಗಳ ಮೂಲಕವೇ ಆಟೋರಿಕ್ಷಾ, ಸ್ಕೂಟರ್, ಕಾರ್ಗಳನ್ನು ಬುಕ್ ಮಾಡುವ ಸಂದರ್ಭದಲ್ಲಿ ಆಪ್ಗಳು ತೋರಿಸುವ ನಿಗದಿತ ದರಕ್ಕೆ ಆಧರಿಸಿ ಬುಕ್ ಮಾಡುವಾಗ ೫-೧೦ ನಿಮಿಷಗಳವರೆಗೂ ಬುಕಿಂಗ್ ಪಡೆಯದೆ ಸಮಯ ವ್ಯರ್ಥ ಮಾಡಿಸುವುದರ ಜೊತೆಗೆ ಅದಕ್ಕನುಣವಾಗಿ ೧೦ರೂ., ೨೦ರೂ., ೩೦ರೂ., ೪೦ರೂ., ೫೦.ರೂಗಳಿಗೂ ಅಧಿಕ ಮೊತ್ತವನ್ನು ಸೇರಿಸಿ ಬುಕ್ ಮಾಡಿದರೆ ತಕ್ಷಣವೇ ಬುಕಿಂಗ್ ಪಡೆಯುವುದಾಗಿ ಸೂಚನೆಗಳನ್ನು ತೋರಿಸುತ್ತಾರೆ.
ದಿನ-ದಿನಕ್ಕೆ ಇದು ಒಂದು ರೀತಿಯಲ್ಲಿ ಹಗಲು ದರೋಡೆಯಂತಾಗುತ್ತಿದೆ. ಆಮೂಲಕ ಸಾರ್ವಜನಿಕರಿಂದ ಹೆಚ್ಚಿನ ಹಣವನ್ನು ಪಡೆಯುತ್ತಿದ್ದಾರೆ. ಆದ್ದರಿಂದ ಜಿಲ್ಲಾಧಿಕಾರಿಗಳು ಮತ್ತು ಸಾರಿಗೆ ಇಲಾಖೆ ಅಧಿಕಾರಿಗಳು ಕೂಡಲೇ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸಾರ್ವಜನಿಕರಿಗೆ ಆಗುತ್ತಿರುವ ಅನ್ಯಾಯವನ್ನು ಸರ್ಕಾರದ ಗಮನಕ್ಕೆ ತಂದು ಹಿಂದೆ ಇದ್ದಂತಹ ಮೀಟರ್ಗಳ ದರದ ಮೂಲಕವೇ ಆಟೋರಿಕ್ಷಾದಿಂದ ಅನುಕೂಲ ಪಡೆಯಲು ಸೂಚನೆ ನೀಡುವುದರೊಂದಿಗೆ, ಕಾರು ಮತ್ತು ಸ್ಕೂಟರ್ಗಳಿಗೆ ಪ್ರತಿ ಕಿಲೋ ಮೀಟರ್ಗೆ ನಿಗದಿತ ದರ ನಿಗದಿಪಡಿಸಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗಮನ ಹರಿಸಬೇಕಾಗಿದೆ.
-ನಾಗೇಶ್ , ಮಾನಸಗಂಗೋತ್ರಿ, ಮೈಸೂರು
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…