Categories: Andolana originals

ಓದುಗರ ಪತ್ರ: ಸುಳ್ಳು ಸಮೀಕ್ಷೆಗೆ ಕಡಿವಾಣ ಬೀಳಲಿ

ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಬಿತ್ತರಿಸುತ್ತಿರುವ ಚುನಾವಣಾ ಪೂರ್ವ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗುತ್ತಿದ್ದು, ಸಮೀಕ್ಷೆಗಳ ಫಲಿತಾಂಶಕ್ಕೂ ನೈಜ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಂಬಿಕೊಂಡು ಕೆಲವರು ತಮ್ಮ ಹಣ, ಆಸ್ತಿಗಳನ್ನು ಬೆಟ್ಟಿಂಗ್ ಕಟ್ಟಿ ಸೋಲುತ್ತಿದ್ದಾರೆ. ಇತ್ತೀಚೆಗೆ ನಡೆದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳು ಹಾಗೂ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಲೆಕೆಳಗಾಗುವಂತೆ ಮಾಡಿದೆ. ಇತ್ತೀಚೆಗೆ ನಡೆದ ಎಲ್ಲ ಚುನಾವಣೆ ಸಮೀಕ್ಷೆಗಳು ಸಂಪೂರ್ಣ ಸುಳ್ಳಾಗಿದ್ದು, ಜನರಿಗೆ ಸಮೀಕ್ಷೆಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಅಲ್ಲದೆ ಮತದಾರರ ಮನಸ್ಸನ್ನು ಯಾರೂ ಅರಿಯಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಚುನಾವಣಾ ಪೂರ್ವ ಸಮೀಕ್ಷೆ ಮಾಡುವವರು ವಾಸ್ತವ ಸ್ಥಿತಿಯನ್ನು ಅರಿಯದೆ, ಕ್ಷೇತ್ರಕ್ಕೆ ಭೇಟಿ ನೀಡಿ ಹೆಚ್ಚು ಜನರ ಅಭಿಪ್ರಾಯವನ್ನೂ ಸಂಗ್ರಹಿಸದೇ ಕಾಟಾಚಾರಕ್ಕೆ ತಮ್ಮಿಷ್ಟದಂತೆ ಸಮೀಕ್ಷೆ ವರದಿ ನೀಡುತ್ತಿದ್ದಾರೆ. ಅಲ್ಲದೆ ಆಸೆ, ಆಮಿಷಗಳಿಗೆ ಬಲಿಯಾಗಿ ರಾಜಕೀಯ ಪಕ್ಷಗಳನ್ನು ಮೆಚ್ಚಿಸುವ ಸಲುವಾಗಿ ಅವರ ಪರವಾಗಿಯೂ ಸಮೀಕ್ಷೆ ವರದಿ ನೀಡುತ್ತಿದ್ದಾರೇನೋ ಎಂಬ ಅನುಮಾನ ಮೂಡುತ್ತದೆ. ಇಂತಹ ಮತಗಟ್ಟೆ ಸಮೀಕ್ಷೆಗಳು ಸಾಕಷ್ಟು ಲೋಪದಿಂದ ಕೂಡಿದ್ದು, ಚುನಾವಣಾ ಆಯೋಗ ಇಂತಹ ಸುಳ್ಳು ಸಮೀಕ್ಷೆಗಳಿಗೆ ಕಡಿವಾಣ ಹಾಕಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

ಆಂದೋಲನ ಡೆಸ್ಕ್

Recent Posts

ಬಹುನಿರೀಕ್ಷಿತ ಮಾರ್ಕ್‌ ಹಾಗೂ 45 ಸಿನಿಮಾ ಬಿಡುಗಡೆ

ಸ್ಯಾಂಡಲ್‌ವುಡ್‌ನಲ್ಲಿ ಇಂದು ಕ್ರಿಸ್‌ಮಸ್‌ ಹಬ್ಬದ ಸಡಗರದ ನಡುವೆ ಎರಡು ಬಹುನಿರೀಕ್ಷಿತ ಸಿನಿಮಾಗಳು ಅಬ್ಬರದಿಂದ ತೆರೆಗೆ ಬಂದಿವೆ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್‌,…

3 mins ago

ಕಾಡಾನೆಗಳು ಊರಿಗೆ ಬರದಂತೆ ಎಐ ಆಧಾರಿತ ಕ್ಯಾಮರಾ ಅಳವಡಿಕೆ

ಮೈಸೂರು: ಕಾಡಾನೆಗಳು ಊರಿಗೆ ಬರದಂತೆ ಅರಣ್ಯ ಇಲಾಖೆಯು ಎಐ ಆಧಾರಿರ ಕೂಗು ಕ್ಯಾಮರಾವನ್ನು ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅಳವಡಿಸಿದೆ.…

41 mins ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ…

2 hours ago

ಚಿತ್ರದುರ್ಗದಲ್ಲಿ ಬಸ್‌ ಅಪಘಾತ ಪ್ರಕರಣ: ಹಾಸನ ಮೂಲದ ಇಬ್ಬರು ಟೆಕ್ಕಿಗಳು ಕಣ್ಮರೆ

ಹಾಸನ: ಚಿತ್ರದುರ್ಗ ಜಿಲ್ಲೆ ಹಿರಿಯೂರು ಬಳಿ ಸಂಭವಿಸಿದ ಭೀಕರ ಬಸ್‌ ಅಪಘಾತದಲ್ಲಿ ಹಾಸನದ ಚನ್ನರಾಯಪಟ್ಟಣ ಮೂಲದ ಇಬ್ಬರು ಯುವತಿಯರು ಕಣ್ಮರೆಯಾಗಿದ್ದಾರೆ.…

2 hours ago

ಚಿತ್ರದುರ್ಗದಲ್ಲಿ ಬಸ್‌ ದುರಂತ ಪ್ರಕರಣ: ಕಂಬನಿ ಮಿಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಸಂಭವಿಸಿದ ಕಂಟೇನರ್‌ ಹಾಗೂ ಖಾಸಗಿ ಬಸ್‌ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ…

2 hours ago

ಎಲ್ಲೆಡೆ ಕ್ರಿಸ್‌ಮಸ್ ಹಬ್ಬದ ಸಂಭ್ರಮ: ಗಣ್ಯರಿಂದ ಶುಭಾಶಯಗಳ ಮಹಾಪೂರ

ಬೆಂಗಳೂರು: ಮಧ್ಯರಾತ್ರಿಯಿಂದಲೇ ಎಲ್ಲೆಡೆ ಕ್ರಿಸ್‌ಮಸ್‌ ಸಡಗರ ಮನೆ ಮಾಡಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕ್ರಿಸ್‌ಮಸ್‌ ಹಬ್ಬವು ನಂಬಿಕೆಯೆಂಬ…

2 hours ago