Categories: Andolana originals

ಓದುಗರ ಪತ್ರ: ಸುಳ್ಳು ಸಮೀಕ್ಷೆಗೆ ಕಡಿವಾಣ ಬೀಳಲಿ

ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಬಿತ್ತರಿಸುತ್ತಿರುವ ಚುನಾವಣಾ ಪೂರ್ವ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗುತ್ತಿದ್ದು, ಸಮೀಕ್ಷೆಗಳ ಫಲಿತಾಂಶಕ್ಕೂ ನೈಜ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಂಬಿಕೊಂಡು ಕೆಲವರು ತಮ್ಮ ಹಣ, ಆಸ್ತಿಗಳನ್ನು ಬೆಟ್ಟಿಂಗ್ ಕಟ್ಟಿ ಸೋಲುತ್ತಿದ್ದಾರೆ. ಇತ್ತೀಚೆಗೆ ನಡೆದ ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭಾ ಚುನಾವಣೆಗಳು ಹಾಗೂ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಲೆಕೆಳಗಾಗುವಂತೆ ಮಾಡಿದೆ. ಇತ್ತೀಚೆಗೆ ನಡೆದ ಎಲ್ಲ ಚುನಾವಣೆ ಸಮೀಕ್ಷೆಗಳು ಸಂಪೂರ್ಣ ಸುಳ್ಳಾಗಿದ್ದು, ಜನರಿಗೆ ಸಮೀಕ್ಷೆಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಅಲ್ಲದೆ ಮತದಾರರ ಮನಸ್ಸನ್ನು ಯಾರೂ ಅರಿಯಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಚುನಾವಣಾ ಪೂರ್ವ ಸಮೀಕ್ಷೆ ಮಾಡುವವರು ವಾಸ್ತವ ಸ್ಥಿತಿಯನ್ನು ಅರಿಯದೆ, ಕ್ಷೇತ್ರಕ್ಕೆ ಭೇಟಿ ನೀಡಿ ಹೆಚ್ಚು ಜನರ ಅಭಿಪ್ರಾಯವನ್ನೂ ಸಂಗ್ರಹಿಸದೇ ಕಾಟಾಚಾರಕ್ಕೆ ತಮ್ಮಿಷ್ಟದಂತೆ ಸಮೀಕ್ಷೆ ವರದಿ ನೀಡುತ್ತಿದ್ದಾರೆ. ಅಲ್ಲದೆ ಆಸೆ, ಆಮಿಷಗಳಿಗೆ ಬಲಿಯಾಗಿ ರಾಜಕೀಯ ಪಕ್ಷಗಳನ್ನು ಮೆಚ್ಚಿಸುವ ಸಲುವಾಗಿ ಅವರ ಪರವಾಗಿಯೂ ಸಮೀಕ್ಷೆ ವರದಿ ನೀಡುತ್ತಿದ್ದಾರೇನೋ ಎಂಬ ಅನುಮಾನ ಮೂಡುತ್ತದೆ. ಇಂತಹ ಮತಗಟ್ಟೆ ಸಮೀಕ್ಷೆಗಳು ಸಾಕಷ್ಟು ಲೋಪದಿಂದ ಕೂಡಿದ್ದು, ಚುನಾವಣಾ ಆಯೋಗ ಇಂತಹ ಸುಳ್ಳು ಸಮೀಕ್ಷೆಗಳಿಗೆ ಕಡಿವಾಣ ಹಾಕಬೇಕು.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

ಆಂದೋಲನ ಡೆಸ್ಕ್

Recent Posts

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

2 mins ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

23 mins ago

ಕೆರೆಯ ನೀರಿಗೆ ಯೂರಿಯಾ ಬೆರಕೆ ; ನೀರು ಕುಡಿದು 7 ಕುರಿಗಳು ಸಾವು

ಹನೂರು : ಜಾನುವಾರುಗಳು ಕುಡಿಯುವ ಕೆರೆಯ ನೀರಿಗೆ ಯೂರಿಯಾ ಬೆರಕೆ ಮಾಡಿದ್ದ ವಿಷಪೂರಿತ ನೀರು ಕುಡಿದು ಏಳು ಕುರಿಗಳು ಮೃತಪಟ್ಟಿರುವ…

56 mins ago

KCET 2026 | ಸಿಇಟಿ ಪರೀಕ್ಷೆಯೆ ವಿಷಯವಾರು ಕೀ ಉತ್ತರ ಪ್ರಕಟಿಸಿದ ಕೆಇಎ

ಬೆಂಗಳೂರು : ಪ್ರಸಕ್ತ-2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯ ಎಲ್ಲ ವಿಷಯಗಳ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ…

2 hours ago

ಹೊರ್ಮುಜ್‌ ಬಿಕ್ಕಟ್ಟು : ಸಂಘರ್ಷ ಶಮನಕ್ಕೆ ಇರಾನ್‌ ಹೊಸ ದಾಳ

ಟೆಹ್ರಾನ್‌ : ಅಮೆರಿಕವು ಶಾಂತಿ ಮಾತುಕತೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಇರಾನ್ ಸಂಘರ್ಷ ಶಮನಕ್ಕೆ ಹೊಸ ದಾಳ ಉರುಳಿಸಿದೆ. ಪಾಕಿಸ್ತಾನದ ಸಂಧಾನಕಾರರ…

2 hours ago

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ…

2 hours ago