ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳು ಬಿತ್ತರಿಸುತ್ತಿರುವ ಚುನಾವಣಾ ಪೂರ್ವ ಮತಗಟ್ಟೆ ಸಮೀಕ್ಷೆಗಳು ಸುಳ್ಳಾಗುತ್ತಿದ್ದು, ಸಮೀಕ್ಷೆಗಳ ಫಲಿತಾಂಶಕ್ಕೂ ನೈಜ ಫಲಿತಾಂಶಕ್ಕೂ ಅಜಗಜಾಂತರ ವ್ಯತ್ಯಾಸ ಕಂಡುಬರುತ್ತಿದೆ. ಮತಗಟ್ಟೆ ಸಮೀಕ್ಷೆಗಳನ್ನು ನಂಬಿಕೊಂಡು ಕೆಲವರು ತಮ್ಮ ಹಣ, ಆಸ್ತಿಗಳನ್ನು ಬೆಟ್ಟಿಂಗ್ ಕಟ್ಟಿ ಸೋಲುತ್ತಿದ್ದಾರೆ. ಇತ್ತೀಚೆಗೆ ನಡೆದ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆಗಳು ಹಾಗೂ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳ ಫಲಿತಾಂಶ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ತಲೆಕೆಳಗಾಗುವಂತೆ ಮಾಡಿದೆ. ಇತ್ತೀಚೆಗೆ ನಡೆದ ಎಲ್ಲ ಚುನಾವಣೆ ಸಮೀಕ್ಷೆಗಳು ಸಂಪೂರ್ಣ ಸುಳ್ಳಾಗಿದ್ದು, ಜನರಿಗೆ ಸಮೀಕ್ಷೆಗಳ ಮೇಲೆ ವಿಶ್ವಾಸ ಇಲ್ಲದಂತಾಗಿದೆ. ಅಲ್ಲದೆ ಮತದಾರರ ಮನಸ್ಸನ್ನು ಯಾರೂ ಅರಿಯಲು ಸಾಧ್ಯವಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.
ಚುನಾವಣಾ ಪೂರ್ವ ಸಮೀಕ್ಷೆ ಮಾಡುವವರು ವಾಸ್ತವ ಸ್ಥಿತಿಯನ್ನು ಅರಿಯದೆ, ಕ್ಷೇತ್ರಕ್ಕೆ ಭೇಟಿ ನೀಡಿ ಹೆಚ್ಚು ಜನರ ಅಭಿಪ್ರಾಯವನ್ನೂ ಸಂಗ್ರಹಿಸದೇ ಕಾಟಾಚಾರಕ್ಕೆ ತಮ್ಮಿಷ್ಟದಂತೆ ಸಮೀಕ್ಷೆ ವರದಿ ನೀಡುತ್ತಿದ್ದಾರೆ. ಅಲ್ಲದೆ ಆಸೆ, ಆಮಿಷಗಳಿಗೆ ಬಲಿಯಾಗಿ ರಾಜಕೀಯ ಪಕ್ಷಗಳನ್ನು ಮೆಚ್ಚಿಸುವ ಸಲುವಾಗಿ ಅವರ ಪರವಾಗಿಯೂ ಸಮೀಕ್ಷೆ ವರದಿ ನೀಡುತ್ತಿದ್ದಾರೇನೋ ಎಂಬ ಅನುಮಾನ ಮೂಡುತ್ತದೆ. ಇಂತಹ ಮತಗಟ್ಟೆ ಸಮೀಕ್ಷೆಗಳು ಸಾಕಷ್ಟು ಲೋಪದಿಂದ ಕೂಡಿದ್ದು, ಚುನಾವಣಾ ಆಯೋಗ ಇಂತಹ ಸುಳ್ಳು ಸಮೀಕ್ಷೆಗಳಿಗೆ ಕಡಿವಾಣ ಹಾಕಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,
ಮೈಸೂರು : ಶಿಷ್ಯವೇತನಕ್ಕೆ ಆಗ್ರಹಿಸಿ ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರು ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲು ಭಾನುವಾರ ಬೆಳಿಗ್ಗೆ 11ಕ್ಕೆ ವಿಶ್ವವಿದ್ಯಾನಿಲಯದ ಕ್ರಾಫರ್ಡ್…
ಮುಂಬೈ : ಇಲ್ಲಿನ ಪರ್ಭಾನಿಯಲ್ಲಿರುವ ನಿರ್ಮಾಣ ಹಂತದ ಹನುಮನ ದೇವಾಲಯದ ಛಾವಣಿ ಕುಸಿದು 7 ಭಕ್ತರು ಸಾವನ್ನಪ್ಪಿದ್ದು, 30ಕ್ಕೂ ಅಧಿಕ…
ಸಿದ್ದಾಪುರ : ಟಿಂಬರ್ ಯೂನಿಯನ್ ಸಭೆಯಲ್ಲಿ ಮಾರಾಮಾರಿ ನಡೆದು ಇಬ್ಬರಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಆರೋಪದಡಿ ಐವರ ವಿರುದ್ಧ ಸಿದ್ದಾಪುರ…
ಹನೂರು : ಅನೇಕ ದಿನಗಳಿಂದ ಸಾಕುಪ್ರಾಣಿಗಳನ್ನು ಕೊಂದು ಗ್ರಾಮಸ್ಥರು ಹಾಗೂ ಅರಣ್ಯ ಇಲಾಖೆಗೆ ತಲೆ ನೋವಾಗಿದ್ದ ಚಿರತೆಯನ್ನು ಕೊನೆಗೂ ಸೆರೆ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…
ಬೈರುತ್: ಲೆಬನಾನ್ ಮೇಲೆ ಇಸ್ರೇಲ್ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…