Categories: Andolana originals

ಓದುಗರ ಪತ್ರ: ಹಿಂದಿ ಹೇರಿಕೆ ನಿಲ್ಲಲ್ಲಿ

ಭಾರತೀಯ ಜೀವ ವಿಮಾ ನಿಗಮದ ವೆಬ್‌ಸೈಟ್ ಹಿಂದಿ ಮಯವಾಗಿದ್ದು, ಕೇಂದ್ರ ಸರ್ಕಾರ ತನ್ನ ಅಧೀನ ಸಂಸ್ಥೆಗಳ ವೆಬ್‌ಸೈಟ್‌ಗಳನ್ನು ಹಿಂದಿ ಹೇರಿಕೆಯ ಸಾಧನವಾಗಿ ಬಳಸುತ್ತಿದೆಯೇನೋ ಅನಿಸುತ್ತದೆ. ಈ ವೆಬ್‌ಸೈಟ್‌ನಲ್ಲಿ ಹಿಂದಿ ಬಿಟ್ಟರೆ ಇಂಗ್ಲಿಷ್‌ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಆಯ್ಕೆಗೆ ಅವಕಾಶವಿಲ್ಲದಿರುವುದು ದೇಶದ ಭಾಷಾ ವೈವಿಧ್ಯತೆಯನ್ನು ಕಡೆಗಣಿಸಿದಂತಾಗಿದೆ. ಎಲ್‌ಐಸಿಯ ಈ ನಡೆಯನ್ನು ಖಂಡಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಎಚ್ಚೆತ್ತುಕೊಂಡ ಭಾರತೀಯ ಜೀವ ವಿಮಾ ನಿಗಮವು ‘ಇದು ತಾಂತ್ರಿಕ ದೋಷವಾಗಿದ್ದು, ಇದರ ಹಿಂದೆ ಹಿಂದಿ ಹೇರುವ ಯಾವುದೇ ಉದ್ದೇಶವಿಲ್ಲ’ ಎಂದು ಸ್ಪಷ್ಟೀಕರಣ ನೀಡಿದೆ. ತಮಿಳುನಾಡಿನ ಮಾಧ್ಯಮಗಳು ಇದನ್ನು ಹಿಂದಿ ಹೇರಿಕೆ ಎಂದೇ ಬಿಂಬಿಸಿ ಸುದ್ದಿ ಬಿತ್ತರಿಸಿದವು. ತಮಿಳುನಾಡಿನ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಂಸದರೂ ಹಾಗೂ ಜನಸಾಮಾನ್ಯರೂ ಈ ಬಗ್ಗೆ ಸಂಘಟಿತ ಹೋರಾಟ ಮಾಡಿದರು. ಪರಿಣಾಮ ನಿಗಮ ತನ್ನ ನಡೆಯನ್ನು ಬದಲಿಸಿಕೊಂಡಿದೆ. ಇಂಥಹ ಸಂಘಟಿತ ಪ್ರತಿಕ್ರಿಯೆಗಳು ನಮ್ಮ ಕರ್ನಾಟಕದಲ್ಲಿಯೂ ಆಗಬೇಕು. ಆಗ ಮಾತ್ರ ಸ್ಥಳೀಯ ಭಾಷೆಗಳ ಉಳಿವು ಸಾಧ್ಯ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

5 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

6 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

7 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

7 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

7 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

8 hours ago