ಭಾರತೀಯ ಜೀವ ವಿಮಾ ನಿಗಮದ ವೆಬ್ಸೈಟ್ ಹಿಂದಿ ಮಯವಾಗಿದ್ದು, ಕೇಂದ್ರ ಸರ್ಕಾರ ತನ್ನ ಅಧೀನ ಸಂಸ್ಥೆಗಳ ವೆಬ್ಸೈಟ್ಗಳನ್ನು ಹಿಂದಿ ಹೇರಿಕೆಯ ಸಾಧನವಾಗಿ ಬಳಸುತ್ತಿದೆಯೇನೋ ಅನಿಸುತ್ತದೆ. ಈ ವೆಬ್ಸೈಟ್ನಲ್ಲಿ ಹಿಂದಿ ಬಿಟ್ಟರೆ ಇಂಗ್ಲಿಷ್ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಆಯ್ಕೆಗೆ ಅವಕಾಶವಿಲ್ಲದಿರುವುದು ದೇಶದ ಭಾಷಾ ವೈವಿಧ್ಯತೆಯನ್ನು ಕಡೆಗಣಿಸಿದಂತಾಗಿದೆ. ಎಲ್ಐಸಿಯ ಈ ನಡೆಯನ್ನು ಖಂಡಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಎಚ್ಚೆತ್ತುಕೊಂಡ ಭಾರತೀಯ ಜೀವ ವಿಮಾ ನಿಗಮವು ‘ಇದು ತಾಂತ್ರಿಕ ದೋಷವಾಗಿದ್ದು, ಇದರ ಹಿಂದೆ ಹಿಂದಿ ಹೇರುವ ಯಾವುದೇ ಉದ್ದೇಶವಿಲ್ಲ’ ಎಂದು ಸ್ಪಷ್ಟೀಕರಣ ನೀಡಿದೆ. ತಮಿಳುನಾಡಿನ ಮಾಧ್ಯಮಗಳು ಇದನ್ನು ಹಿಂದಿ ಹೇರಿಕೆ ಎಂದೇ ಬಿಂಬಿಸಿ ಸುದ್ದಿ ಬಿತ್ತರಿಸಿದವು. ತಮಿಳುನಾಡಿನ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಂಸದರೂ ಹಾಗೂ ಜನಸಾಮಾನ್ಯರೂ ಈ ಬಗ್ಗೆ ಸಂಘಟಿತ ಹೋರಾಟ ಮಾಡಿದರು. ಪರಿಣಾಮ ನಿಗಮ ತನ್ನ ನಡೆಯನ್ನು ಬದಲಿಸಿಕೊಂಡಿದೆ. ಇಂಥಹ ಸಂಘಟಿತ ಪ್ರತಿಕ್ರಿಯೆಗಳು ನಮ್ಮ ಕರ್ನಾಟಕದಲ್ಲಿಯೂ ಆಗಬೇಕು. ಆಗ ಮಾತ್ರ ಸ್ಥಳೀಯ ಭಾಷೆಗಳ ಉಳಿವು ಸಾಧ್ಯ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…