ಭಾರತೀಯ ಜೀವ ವಿಮಾ ನಿಗಮದ ವೆಬ್ಸೈಟ್ ಹಿಂದಿ ಮಯವಾಗಿದ್ದು, ಕೇಂದ್ರ ಸರ್ಕಾರ ತನ್ನ ಅಧೀನ ಸಂಸ್ಥೆಗಳ ವೆಬ್ಸೈಟ್ಗಳನ್ನು ಹಿಂದಿ ಹೇರಿಕೆಯ ಸಾಧನವಾಗಿ ಬಳಸುತ್ತಿದೆಯೇನೋ ಅನಿಸುತ್ತದೆ. ಈ ವೆಬ್ಸೈಟ್ನಲ್ಲಿ ಹಿಂದಿ ಬಿಟ್ಟರೆ ಇಂಗ್ಲಿಷ್ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಆಯ್ಕೆಗೆ ಅವಕಾಶವಿಲ್ಲದಿರುವುದು ದೇಶದ ಭಾಷಾ ವೈವಿಧ್ಯತೆಯನ್ನು ಕಡೆಗಣಿಸಿದಂತಾಗಿದೆ. ಎಲ್ಐಸಿಯ ಈ ನಡೆಯನ್ನು ಖಂಡಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಎಚ್ಚೆತ್ತುಕೊಂಡ ಭಾರತೀಯ ಜೀವ ವಿಮಾ ನಿಗಮವು ‘ಇದು ತಾಂತ್ರಿಕ ದೋಷವಾಗಿದ್ದು, ಇದರ ಹಿಂದೆ ಹಿಂದಿ ಹೇರುವ ಯಾವುದೇ ಉದ್ದೇಶವಿಲ್ಲ’ ಎಂದು ಸ್ಪಷ್ಟೀಕರಣ ನೀಡಿದೆ. ತಮಿಳುನಾಡಿನ ಮಾಧ್ಯಮಗಳು ಇದನ್ನು ಹಿಂದಿ ಹೇರಿಕೆ ಎಂದೇ ಬಿಂಬಿಸಿ ಸುದ್ದಿ ಬಿತ್ತರಿಸಿದವು. ತಮಿಳುನಾಡಿನ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಂಸದರೂ ಹಾಗೂ ಜನಸಾಮಾನ್ಯರೂ ಈ ಬಗ್ಗೆ ಸಂಘಟಿತ ಹೋರಾಟ ಮಾಡಿದರು. ಪರಿಣಾಮ ನಿಗಮ ತನ್ನ ನಡೆಯನ್ನು ಬದಲಿಸಿಕೊಂಡಿದೆ. ಇಂಥಹ ಸಂಘಟಿತ ಪ್ರತಿಕ್ರಿಯೆಗಳು ನಮ್ಮ ಕರ್ನಾಟಕದಲ್ಲಿಯೂ ಆಗಬೇಕು. ಆಗ ಮಾತ್ರ ಸ್ಥಳೀಯ ಭಾಷೆಗಳ ಉಳಿವು ಸಾಧ್ಯ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…