ಭಾರತೀಯ ಜೀವ ವಿಮಾ ನಿಗಮದ ವೆಬ್ಸೈಟ್ ಹಿಂದಿ ಮಯವಾಗಿದ್ದು, ಕೇಂದ್ರ ಸರ್ಕಾರ ತನ್ನ ಅಧೀನ ಸಂಸ್ಥೆಗಳ ವೆಬ್ಸೈಟ್ಗಳನ್ನು ಹಿಂದಿ ಹೇರಿಕೆಯ ಸಾಧನವಾಗಿ ಬಳಸುತ್ತಿದೆಯೇನೋ ಅನಿಸುತ್ತದೆ. ಈ ವೆಬ್ಸೈಟ್ನಲ್ಲಿ ಹಿಂದಿ ಬಿಟ್ಟರೆ ಇಂಗ್ಲಿಷ್ ಆಯ್ಕೆ ಮಾಡಿಕೊಳ್ಳಬಹುದಾಗಿದ್ದು, ಆಯ್ಕೆಗೆ ಅವಕಾಶವಿಲ್ಲದಿರುವುದು ದೇಶದ ಭಾಷಾ ವೈವಿಧ್ಯತೆಯನ್ನು ಕಡೆಗಣಿಸಿದಂತಾಗಿದೆ. ಎಲ್ಐಸಿಯ ಈ ನಡೆಯನ್ನು ಖಂಡಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಎಚ್ಚೆತ್ತುಕೊಂಡ ಭಾರತೀಯ ಜೀವ ವಿಮಾ ನಿಗಮವು ‘ಇದು ತಾಂತ್ರಿಕ ದೋಷವಾಗಿದ್ದು, ಇದರ ಹಿಂದೆ ಹಿಂದಿ ಹೇರುವ ಯಾವುದೇ ಉದ್ದೇಶವಿಲ್ಲ’ ಎಂದು ಸ್ಪಷ್ಟೀಕರಣ ನೀಡಿದೆ. ತಮಿಳುನಾಡಿನ ಮಾಧ್ಯಮಗಳು ಇದನ್ನು ಹಿಂದಿ ಹೇರಿಕೆ ಎಂದೇ ಬಿಂಬಿಸಿ ಸುದ್ದಿ ಬಿತ್ತರಿಸಿದವು. ತಮಿಳುನಾಡಿನ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಂಸದರೂ ಹಾಗೂ ಜನಸಾಮಾನ್ಯರೂ ಈ ಬಗ್ಗೆ ಸಂಘಟಿತ ಹೋರಾಟ ಮಾಡಿದರು. ಪರಿಣಾಮ ನಿಗಮ ತನ್ನ ನಡೆಯನ್ನು ಬದಲಿಸಿಕೊಂಡಿದೆ. ಇಂಥಹ ಸಂಘಟಿತ ಪ್ರತಿಕ್ರಿಯೆಗಳು ನಮ್ಮ ಕರ್ನಾಟಕದಲ್ಲಿಯೂ ಆಗಬೇಕು. ಆಗ ಮಾತ್ರ ಸ್ಥಳೀಯ ಭಾಷೆಗಳ ಉಳಿವು ಸಾಧ್ಯ.
-ರಮಾನಂದ ಶರ್ಮಾ, ಜೆ.ಪಿ.ನಗರ, ಬೆಂಗಳೂರು.
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ.…
ಬೆಂಗಳೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಕೈಗಾರಿಕೆಗಳ ತ್ಯಾಜ್ಯ, ಒಳಚರಂಡಿ ನೀರು ಸೇರಿ ಸ್ನಾನಘಟ್ಟದ ನೀರು ಕಲ್ಮಶ, ಸ್ನಾನ ಮಾಡುವ ಭಕ್ತರಿಗೆ ರೋಗದ ಭೀತಿ ಎಸ್.ಎಸ್.ಭಟ್ ನಂಜನಗೂಡು…
ಸಾಲಿಗ್ರಾಮ : ಪಟ್ಟಣದ ಹೊರವಲಯದಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸಾವಿಗೀಡಾಗಿ, ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ಪಟ್ಟಣದಿಂದ ಕೇರಳಾಪುರಕ್ಕೆ…
ಕೆ.ಆರ್.ನಗರ : ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯುತ್ ಸ್ಪರ್ಶಕ್ಕೀಡಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಒಂದು ಪ್ರಕರಣದಲ್ಲಿ ಹೊಸ ಅಗ್ರಹಾರ ಹೋಬಳಿಯ…