Andolana originals

ಓದುಗರ ಪತ್ರ: ಆಧಾರರಹಿತ ಆರೋಪಗಳಿಗೆ ಕಡಿವಾಣ ಹಾಕಲಿ

ನಮ್ಮ ಪಕ್ಷದ ಮುಖಂಡರೊಬ್ಬರು ಮುಖ್ಯಮಂತ್ರಿಯಾಗಲು 1,200 ಕೋಟಿ ರೂ.ಗಳನ್ನು ಸಿದ್ಧ ಮಾಡಿಟ್ಟುಕೊಂಡಿದ್ದಾರೆ. ಆದರೆ ಅವರ ಆಸ ಈಡೇರುವುದಿಲ್ಲ, ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ಮುಖಂಡರೊಬ್ಬರ ಮೇಲೆಯೇ ಆರೋಪ ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಇಂತಹ ಆರೋಪ ಮಾಡಿರುವ ಯತ್ನಾಳ್‌ರವರು ಆ ಮುಖಂಡರು ಯಾರು ಎಂಬುದನ್ನು ಹೇಳಬಹುದಲ್ಲವೇ? ಎರಡು ವರ್ಷ ವರ್ಷಗಳ ಹಿಂದೆಯೂ ಯತ್ನಾಳ್‌ ಇಂತಹದ್ದೇ ಆರೋಪ ಮಾಡಿದ್ದರು. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು 2,000 ಕೋಟಿ ರೂ. ಹಾಗೂ ಮಂತ್ರಿಯಾಗಲು 100 ಕೋಟಿ ರೂ.ಗಳನ್ನು ಹೈಕಮಾಂಡ್‌ಗೆ ತಲುಪಿಸಬೇಕು ಎಂದು ಮಾಧ್ಯಮಗಳ ಮುಂದೆಯೇ ಹೇಳಿಕೆ ನೀಡಿದ್ದರು. ಹೀಗೆ ತಮ್ಮದೇ ಪಕ್ಷದ ವಿರುದ್ಧ ಇಂತಹ ಆರೋಪಗಳನ್ನು ಮಾಡುವ ಯತ್ನಾಳ್‌ರವರ ಧೈರ್ಯವನ್ನು ಮೆಚ್ಚಲೇಬೇಕು. ಆದರೆ ಇಂತಹ ಹೇಳಿಕೆಗಳು ಜನರಲ್ಲಿ ಗೊಂದಲಗಳನ್ನು ಸೃಷ್ಟಿಸುತ್ತವೆಯೇ ವಿನಾ ಅವುಗಳಿಂದ ಯಾವುದೇ ಪ್ರಯೋಜನವಾಗುವುದಿಲ್ಲ. ಇಂತಹ ಆಧಾರರಹಿತ ಹೇಳಿಕೆಗಳು ಪಕ್ಷದ ಹಿನ್ನಡೆಗೆ ಕಾರಣವಾಗುತ್ತವೆಯಷ್ಟೆ. ಇಷ್ಟಿದ್ದರೂ ಹೈಕಮಾಂಡ್ ಯತ್ನಾಳ್‌ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗುವುದಿಲ್ಲ ಏಕೆ? ಇನ್ನಾದರೂ ಹೈಕಮಾಂಡ್ ಯತ್ನಾಳರ ಇಂತಹ ಹೇಳಿಕೆಗಳಿಗೆ ಕಡಿವಾಣ ಹಾಕಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು,

ಆಂದೋಲನ ಡೆಸ್ಕ್

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 3.39 ಕೋಟಿ ಮೌಲ್ಯದ ಗಾಂಜಾ ಸೀಜ್‌

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 3.39 ಕೋಟಿ ರೂ…

30 mins ago

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್‌ ಮ್ಯಾಚ್‌ ಬಗ್ಗೆ ಸಂಪುಟ ಸಭೆಯಲ್ಲಿ ನಿರ್ಧಾರ: ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಮ್ಯಾಚ್‌ ಆಡಿಸುವ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಂತರ ನಿರ್ಧಾರ ಪ್ರಕಟಿಸುತ್ತೇವೆ ಎಂದು…

40 mins ago

ಹೋಗೇನಕಲ್‌ ಫಾಲ್ಸ್‌ಗೆ ಬರುವ ಪ್ರವಾಸಿಗರ ಅನುಕೂಲಕ್ಕಾಗಿ 50 ಕೋಟಿ ವೆಚ್ಚದಲ್ಲಿ ಸೇತುವೆ ನಿರ್ಮಾಣ: ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರ…

57 mins ago

ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜುಗೆ ಸುಪ್ರೀಂನಲ್ಲೂ ಬಿಗ್‌ ಶಾಕ್‌

ನವದೆಹಲಿ: ರೌಡಿಶೀಟರ್‌ ಬಿಕ್ಲುಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂಕೋರ್ಟ…

1 hour ago

ವರಿಷ್ಠರ ಜೊತೆ ಏನೇನು ಮಾತನಾಡಬೇಕೋ ಮಾತನಾಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ…

2 hours ago

ಕಾವೇರಿ ನೀರು ಪೋಲು ಮಾಡಿದರೆ 5000 ರೂ ದಂಡ

ಬೆಂಗಳೂರು: ಈ ಬಾರಿ ಬೆಂಗಳೂರಿನ ಜನರಿಗೆ ಬೇಸಿಗೆಯಲ್ಲಿ ಕಾವೇರಿ ಕುಡಿಯುವ ನೀರಿನ ಅಭಾವ ಆಗದಂತೆ ಜಲಮಂಡಳಿ ಮುನ್ನೆಚ್ಚರಿಕೆ ವಹಿಸಿದೆ. ಬೆಂಗಳೂರು…

2 hours ago