ಓದುಗರ ಪತ್ರ
ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು ಮುಂಜಾನೆ 7.00 ಗಂಟೆ ಸುಮಾರಿಗೆ ಹಾಲು ತರಲು ಹೋಗಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಖದೀಮರು ಅವರ ಕೊರಳಿನಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಇವರ ಮನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿವಾಸದಿಂದ ಕೇವಲ 200 ಮೀಟರ್ ದೂರದಲ್ಲಿದ್ದು, ಇಲ್ಲಿಯೇ ಮಹಿಳೆಯರಿಗೆ ರಕ್ಷಣೆ ಇಲ್ಲ ಎಂದಾದರೆ ಉಳಿದ ಭಾಗಗಳಲ್ಲಿ ಮಹಿಳೆಯರು ಓಡಾಡುವುದಾದರೂ ಹೇಗೆ? ಪೊಲೀಸ್ ಇಲಾಖೆಯು ಈ ಬಗ್ಗೆ ತುರ್ತಾಗಿ ಕ್ರಮಕೈಗೊಂಡು ಸರಗಳ್ಳರ ಎಡೆಮುರಿಕಟ್ಟಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಡಾ.ಕೆ.ಪಿ.ಸಿದ್ಧಲಿಂಗಸ್ವಾಮಿ ಇಂದು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ೧೧೧ನೇ ಜಯಂತಿ ಕೆಲವರು ತಮ್ಮ ಕಾಲದಲ್ಲಿ ಬದುಕುತ್ತಾರೆ; ಕೆಲವರು ತಮ್ಮ ಕಾಲವನ್ನೇ…
ಆತ್ಮಬಲ ಅಸ್ತ್ರದಿಂದ ಬ್ರಿಟಿಷರ ಮಣಿಸಿದ ಗಾಂಧಿ ಗಾಂಧಿಜಿ ಕಲ್ಪನೆಯ ಸರ್ವೋದಯ ಸಮಾಜದಲ್ಲಿ ಎಲ್ಲರೂ ಸ್ವತಂತ್ರವಾಗಿರುತ್ತಾರೆ. ಇಲ್ಲಿ ಜಾತಿ, ವರ್ಗ, ಶೋಷಣೆ…
ರೋಹಿಣಿ ಸಂಗಪ್ಪ ದಳವಾಯಿ ಮೈಸೂರು ರಾಜ್ಯ ಕಂಡ ಅಪ್ರತಿಮ ಹೋರಾಟಗಾರ್ತಿ ಮತ್ತು ಜನಸೇವಕಿ ಯಶೋಧರಾ ದಾಸಪ್ಪ. ತಮ್ಮ ದಿಟ್ಟ ನಿಲುವು,…
ನಲವತ್ತು ವರುಷಗಳ ಕೆಳಗೆ ಇಂಗ್ಲೆಂಡಿನಲ್ಲಿ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಈಗ ಇರುವುದಕ್ಕಿಂತ ಬಹಳ ಕಡಿಮೆಯಾಗಿತ್ತು. ತಾವು ಮದುವೆಯಾದವರಾಗಿದ್ದರೂ, ಬ್ರಹ್ಮಚಾರಿಗಳೆಂದು ನಟಿಸುವುದು…
ಭೇರ್ಯ ಮಹೇಶ್ ಮಳೆ ಅಭಾವದಿಂದ ಬಿತ್ತನೆ ಮಾಡಿದ್ದ ಬೆಳೆಗಳು ಒಣಗಿ, ರೈತರಿಗೆ ಸಾಕಷ್ಟು ನಷ್ಟ ಕೆ.ಆರ್.ನಗರ: ಕೆ.ಆರ್.ನಗರ ಮತ್ತು ಸಾಲಿಗ್ರಾಮ…