Andolana originals

ಓದುಗರ ಪತ್ರ: ಜನಮಾನಸದಿಂದ ದೂರಾದ ಹರಿಕಥೆಗಳು!

ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ ಗುರುರಾಜುಲು ನಾಯ್ಡು, ಸಂತ ಭದ್ರಗಿರಿ ಅಚ್ಯುತದಾಸರು, ಭದ್ರಗಿರಿ ಕೇಶವದಾಸ್ ಮುಂತಾದ ಹರಿಕಥಾ ವಿದ್ವಾಂಸರ ಕಥಾಕಾಲಕ್ಷೇಪಗಳಿಲ್ಲದೆ ಯಾವ ಧಾರ್ಮಿಕ ಕಾರ್ಯಕ್ರಮಗಳೂ ಸಂಪನ್ನಗೊಳ್ಳುತ್ತಿರಲಿಲ್ಲ.

ಜನರೂ ಅಷ್ಟೇ, ಹರಿಕಥೆಗಳಿಲ್ಲದ ಕಾರ್ಯಕ್ರಮಗಳು ವ್ಯರ್ಥ ಎಂದೇ ಭಾವಿಸಿದ್ದರು. ಆದರೆ ಕಾಲಕ್ರಮೇಣ ಹರಿಕಥೆಗಳನ್ನು ಕೇಳುವವರ ಸಂಖ್ಯೆ ಕಡಿಮೆಯಾಗುತ್ತಾ ಬಂದ ಹಾಗೆ, ಹರಿಕಥೆಗಳು ಜನರ ಸ್ಮೃತಿ ಪಟಲದಿಂದಲೇ ಮರೆಯಾಗಿರುವುದು ವಿಷಾದಕರ ಸಂಗತಿ. ದಿವಂಗತ ಗುರುರಾಜುಲು ನಾಯ್ಡು ಅವರ ಮಗಳು ಈಗಲೂ ಹರಿಕಥೆಗಳನ್ನು ನಡೆಸಿಕೊಡುತ್ತಾರೆ.

ಅದೇ ರೀತಿ ಎಲೆ ಮರೆ ಕಾಯಿಗಳಂತಿರುವ ಅನೇಕ ಹರಿಕಥಾ ವಿದ್ವಾಂಸರು ಅಲ್ಲಲ್ಲಿ ಕಾಣ ಸಿಗಬಹುದು. ಇಂದಿನ ಡಿಜಿಟಲ್ ಯುಗದಲ್ಲಿ ಹರಿಕಥೆಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ. ಬಹಳ ವರ್ಷಗಳ ಹಿಂದೆ ರಾಮೋತ್ಸವ, ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಹರಿಕಥೆಗಳನ್ನು ಏರ್ಪಡಿಸಲಾಗುತ್ತಿತ್ತು. ಈಗ ಹರಿಕಥೆಯೆಂಬ ವಿಶಿಷ್ಟ ಕಲೆಯು ನಶಿಸಿಹೋಗದಂತೆ ಸರ್ಕಾರ ರಕ್ಷಣಾ ಕ್ರಮಗಳನ್ನು ತೆಗೆದುಕೊಂಡು ಪ್ರೋತ್ಸಾಹ ನೀಡಬೇಕಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಟಾಕ್ಸಿಕ್‌ ಚಿತ್ರದ ಬಗ್ಗೆ ಬಿಗ್‌ ಅಪ್‌ಡೇಟ್‌ ಕೊಟ್ಟ ರಾಕಿಂಗ್‌ ಸ್ಟಾರ್‌ ಯಶ್‌

ರಾಕಿಂಗ್‌ ಸ್ಟಾರ್‌ ಯಶ್‌ ತಮ್ಮ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್‌ನ ಹೊಸ ಪೋಸ್ಟರ್‌ ಅನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಬಗ್ಗೆ…

5 mins ago

ಮೈಸೂರು: ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನ ಜಾಗೃತಿ ರಥಯಾತ್ರೆಗೆ ಚಾಲನೆ

ಮೈಸೂರು: ಡ್ರಗ್ಸ್‌ ಮುಕ್ತ ಕರ್ನಾಟಕ ಅಭಿಯಾನ ಜನಜಾಗೃತಿ ಆಂದೋಲನದ ರಥಯಾತ್ರೆಗೆ ಮೈಸೂರಿನಲ್ಲಿ ಇಂದು ಚಾಲನೆ ದೊರೆಯಿತು. ಮೈಸೂರು ನಗರದ ಜೆ.ಕೆ…

20 mins ago

ರಾಜ್ಯದಲ್ಲಿ ಮತ್ತೆ ಟಿಪ್ಪು ಜಯಂತಿ: ಆಡಳಿತಾರೂಢ ಕಾಂಗ್ರೆಸ್‌ ನಡೆಗೆ ವಿಪಕ್ಷ ಬಿಜೆಪಿ ಕಿಡಿ

ಬೆಂಗಳೂರು: ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆ ವಿಚಾರ ಮತ್ತೊಮ್ಮೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕ ಕಾಶಪ್ಪನವರ್‌…

2 hours ago

ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್:‌ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ರಾಜ್ಯದ ಮಹಿಳಾ ನೌಕರರಿಗೆ ಬಿಗ್‌ ಶಾಕ್‌ ಎಂಬಂತೆ ರಾಜ್ಯ ಸರ್ಕಾರದ ಋತುಚಕ್ರ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ.…

2 hours ago

ನಾಳೆ ಕೊಡಗಿನ ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಕೊಡಗು: ಶನಿವಾರಸಂತೆಯಲ್ಲಿ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ಅವಧಿಯ ನಿರ್ವಹಣೆ ಕಾಮಗಾರಿಯನ್ನು ಕೈಗೆತ್ತಿಕೊಂಡಿರುವುದರಿಂದ ನಾಳೆ ಕೊಡಗಿನ ಕೆಲ ಪ್ರದೇಶಗಳಲ್ಲಿ…

2 hours ago

ಇಂಡಿಗೋ ಬಿಕ್ಕಟ್ಟಿನ ನಡುವೆ ಸಚಿವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇಂಡಿಗೋ ವಿಮಾನಯಾ ಸಂಸ್ಥೆಗಳ ಆರ್ಥಿಕ ಬಿಕ್ಕಟ್ಟಿನ ನಡುವೆ ಕಾನೂನು ಮತ್ತು ನಿಯಮಗಳು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವಂತೆ ಪ್ರಧಾನಿ ನರೇಂದ್ರ…

2 hours ago