Andolana originals

ಓದುಗರ ಪತ್ರ: ಜನಮಾನಸದಿಂದ ದೂರಾದ ಹರಿಕಥೆಗಳು!

ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ ಗುರುರಾಜುಲು ನಾಯ್ಡು, ಸಂತ ಭದ್ರಗಿರಿ ಅಚ್ಯುತದಾಸರು, ಭದ್ರಗಿರಿ ಕೇಶವದಾಸ್ ಮುಂತಾದ ಹರಿಕಥಾ ವಿದ್ವಾಂಸರ ಕಥಾಕಾಲಕ್ಷೇಪಗಳಿಲ್ಲದೆ ಯಾವ ಧಾರ್ಮಿಕ ಕಾರ್ಯಕ್ರಮಗಳೂ ಸಂಪನ್ನಗೊಳ್ಳುತ್ತಿರಲಿಲ್ಲ.

ಜನರೂ ಅಷ್ಟೇ, ಹರಿಕಥೆಗಳಿಲ್ಲದ ಕಾರ್ಯಕ್ರಮಗಳು ವ್ಯರ್ಥ ಎಂದೇ ಭಾವಿಸಿದ್ದರು. ಆದರೆ ಕಾಲಕ್ರಮೇಣ ಹರಿಕಥೆಗಳನ್ನು ಕೇಳುವವರ ಸಂಖ್ಯೆ ಕಡಿಮೆಯಾಗುತ್ತಾ ಬಂದ ಹಾಗೆ, ಹರಿಕಥೆಗಳು ಜನರ ಸ್ಮೃತಿ ಪಟಲದಿಂದಲೇ ಮರೆಯಾಗಿರುವುದು ವಿಷಾದಕರ ಸಂಗತಿ. ದಿವಂಗತ ಗುರುರಾಜುಲು ನಾಯ್ಡು ಅವರ ಮಗಳು ಈಗಲೂ ಹರಿಕಥೆಗಳನ್ನು ನಡೆಸಿಕೊಡುತ್ತಾರೆ.

ಅದೇ ರೀತಿ ಎಲೆ ಮರೆ ಕಾಯಿಗಳಂತಿರುವ ಅನೇಕ ಹರಿಕಥಾ ವಿದ್ವಾಂಸರು ಅಲ್ಲಲ್ಲಿ ಕಾಣ ಸಿಗಬಹುದು. ಇಂದಿನ ಡಿಜಿಟಲ್ ಯುಗದಲ್ಲಿ ಹರಿಕಥೆಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ. ಬಹಳ ವರ್ಷಗಳ ಹಿಂದೆ ರಾಮೋತ್ಸವ, ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಹರಿಕಥೆಗಳನ್ನು ಏರ್ಪಡಿಸಲಾಗುತ್ತಿತ್ತು. ಈಗ ಹರಿಕಥೆಯೆಂಬ ವಿಶಿಷ್ಟ ಕಲೆಯು ನಶಿಸಿಹೋಗದಂತೆ ಸರ್ಕಾರ ರಕ್ಷಣಾ ಕ್ರಮಗಳನ್ನು ತೆಗೆದುಕೊಂಡು ಪ್ರೋತ್ಸಾಹ ನೀಡಬೇಕಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

1 hour ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

2 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

2 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

2 hours ago

ಮೈಸೂರಿನ 2 ಹೋಟೆಲ್‌, ಚಾ.ನಗರ ಕೋರ್ಟ್‌ಗೆ ಬಾಂಬ್‌ ಬೆದರಿಕೆ ; ಒಬ್ಬ ವ್ಯಕ್ತಿಯಿಂದಲೇ ಇ-ಮೇಲ್

ಮೈಸೂರು‌ : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…

11 hours ago