Andolana originals

ಓದುಗರ ಪತ್ರ: ಜನಮಾನಸದಿಂದ ದೂರಾದ ಹರಿಕಥೆಗಳು!

ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ ಗುರುರಾಜುಲು ನಾಯ್ಡು, ಸಂತ ಭದ್ರಗಿರಿ ಅಚ್ಯುತದಾಸರು, ಭದ್ರಗಿರಿ ಕೇಶವದಾಸ್ ಮುಂತಾದ ಹರಿಕಥಾ ವಿದ್ವಾಂಸರ ಕಥಾಕಾಲಕ್ಷೇಪಗಳಿಲ್ಲದೆ ಯಾವ ಧಾರ್ಮಿಕ ಕಾರ್ಯಕ್ರಮಗಳೂ ಸಂಪನ್ನಗೊಳ್ಳುತ್ತಿರಲಿಲ್ಲ.

ಜನರೂ ಅಷ್ಟೇ, ಹರಿಕಥೆಗಳಿಲ್ಲದ ಕಾರ್ಯಕ್ರಮಗಳು ವ್ಯರ್ಥ ಎಂದೇ ಭಾವಿಸಿದ್ದರು. ಆದರೆ ಕಾಲಕ್ರಮೇಣ ಹರಿಕಥೆಗಳನ್ನು ಕೇಳುವವರ ಸಂಖ್ಯೆ ಕಡಿಮೆಯಾಗುತ್ತಾ ಬಂದ ಹಾಗೆ, ಹರಿಕಥೆಗಳು ಜನರ ಸ್ಮೃತಿ ಪಟಲದಿಂದಲೇ ಮರೆಯಾಗಿರುವುದು ವಿಷಾದಕರ ಸಂಗತಿ. ದಿವಂಗತ ಗುರುರಾಜುಲು ನಾಯ್ಡು ಅವರ ಮಗಳು ಈಗಲೂ ಹರಿಕಥೆಗಳನ್ನು ನಡೆಸಿಕೊಡುತ್ತಾರೆ.

ಅದೇ ರೀತಿ ಎಲೆ ಮರೆ ಕಾಯಿಗಳಂತಿರುವ ಅನೇಕ ಹರಿಕಥಾ ವಿದ್ವಾಂಸರು ಅಲ್ಲಲ್ಲಿ ಕಾಣ ಸಿಗಬಹುದು. ಇಂದಿನ ಡಿಜಿಟಲ್ ಯುಗದಲ್ಲಿ ಹರಿಕಥೆಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ. ಬಹಳ ವರ್ಷಗಳ ಹಿಂದೆ ರಾಮೋತ್ಸವ, ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಹರಿಕಥೆಗಳನ್ನು ಏರ್ಪಡಿಸಲಾಗುತ್ತಿತ್ತು. ಈಗ ಹರಿಕಥೆಯೆಂಬ ವಿಶಿಷ್ಟ ಕಲೆಯು ನಶಿಸಿಹೋಗದಂತೆ ಸರ್ಕಾರ ರಕ್ಷಣಾ ಕ್ರಮಗಳನ್ನು ತೆಗೆದುಕೊಂಡು ಪ್ರೋತ್ಸಾಹ ನೀಡಬೇಕಾಗಿದೆ.

 -ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

1 hour ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

1 hour ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

3 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

4 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

4 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 hours ago