ಓದುಗರ ಪತ್ರ
ಒಂದು ಕಾಲದಲ್ಲಿ ರಾಜ್ಯದಲ್ಲಿ ಹೆಸರುವಾಸಿಯಾಗಿದ್ದ ಹರಿಕಥಾ ಕಾಲಕ್ಷೇಪಗಳು ಇತ್ತೀಚಿನ ದಶಕಗಳಲ್ಲಿ ಜನಮಾನಸದಿಂದ ಮಾಸಿಹೋಗುತ್ತಿರುವುದು ಬೇಸರದ ಸಂಗತಿಯಾಗಿದೆ. ರಾಜ್ಯಾದ್ಯಂತ ಹೆಸರು ಗಳಿಸಿದ್ದ ಸುಪ್ರಸಿದ್ಧ ಹರಿಕಥಾ ವಿದ್ವಾನ್ ಕೀರ್ತಿ ಶೇಷ ಗುರುರಾಜುಲು ನಾಯ್ಡು, ಸಂತ ಭದ್ರಗಿರಿ ಅಚ್ಯುತದಾಸರು, ಭದ್ರಗಿರಿ ಕೇಶವದಾಸ್ ಮುಂತಾದ ಹರಿಕಥಾ ವಿದ್ವಾಂಸರ ಕಥಾಕಾಲಕ್ಷೇಪಗಳಿಲ್ಲದೆ ಯಾವ ಧಾರ್ಮಿಕ ಕಾರ್ಯಕ್ರಮಗಳೂ ಸಂಪನ್ನಗೊಳ್ಳುತ್ತಿರಲಿಲ್ಲ.
ಜನರೂ ಅಷ್ಟೇ, ಹರಿಕಥೆಗಳಿಲ್ಲದ ಕಾರ್ಯಕ್ರಮಗಳು ವ್ಯರ್ಥ ಎಂದೇ ಭಾವಿಸಿದ್ದರು. ಆದರೆ ಕಾಲಕ್ರಮೇಣ ಹರಿಕಥೆಗಳನ್ನು ಕೇಳುವವರ ಸಂಖ್ಯೆ ಕಡಿಮೆಯಾಗುತ್ತಾ ಬಂದ ಹಾಗೆ, ಹರಿಕಥೆಗಳು ಜನರ ಸ್ಮೃತಿ ಪಟಲದಿಂದಲೇ ಮರೆಯಾಗಿರುವುದು ವಿಷಾದಕರ ಸಂಗತಿ. ದಿವಂಗತ ಗುರುರಾಜುಲು ನಾಯ್ಡು ಅವರ ಮಗಳು ಈಗಲೂ ಹರಿಕಥೆಗಳನ್ನು ನಡೆಸಿಕೊಡುತ್ತಾರೆ.
ಅದೇ ರೀತಿ ಎಲೆ ಮರೆ ಕಾಯಿಗಳಂತಿರುವ ಅನೇಕ ಹರಿಕಥಾ ವಿದ್ವಾಂಸರು ಅಲ್ಲಲ್ಲಿ ಕಾಣ ಸಿಗಬಹುದು. ಇಂದಿನ ಡಿಜಿಟಲ್ ಯುಗದಲ್ಲಿ ಹರಿಕಥೆಗಳನ್ನು ಕೇಳುವವರೇ ಇಲ್ಲವಾಗಿದ್ದಾರೆ. ಬಹಳ ವರ್ಷಗಳ ಹಿಂದೆ ರಾಮೋತ್ಸವ, ಗಣಪತಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಇನ್ನಿತರೆ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭಗಳಲ್ಲಿ ಹರಿಕಥೆಗಳನ್ನು ಏರ್ಪಡಿಸಲಾಗುತ್ತಿತ್ತು. ಈಗ ಹರಿಕಥೆಯೆಂಬ ವಿಶಿಷ್ಟ ಕಲೆಯು ನಶಿಸಿಹೋಗದಂತೆ ಸರ್ಕಾರ ರಕ್ಷಣಾ ಕ್ರಮಗಳನ್ನು ತೆಗೆದುಕೊಂಡು ಪ್ರೋತ್ಸಾಹ ನೀಡಬೇಕಾಗಿದೆ.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…