Andolana originals

ಓದುಗರ ಪತ್ರ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಅಗತ್ಯ

ಇತ್ತೀಚಿನ ದಿನಗಳಲ್ಲಿ ದೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸ್ಟಾರ್ ಹೋಟೆಲ್‌ಗಳು, ಪ್ರಭಾವಿಗಳ ಫಾರ್ಮ್ ಹೌಸ್‌ಗಳಲ್ಲಿ ನಡೆಯುತ್ತಿದ್ದ ಇಂತಹ ಪಾರ್ಟಿಗಳು ಈಗ ಮೈಸೂರಿನ ಕೆಆರ್ಎಸ್ ಹಿನೀರಿನ ಪ್ರದೇಶ ದಲ್ಲಿಯೂ ನಡೆದಿರುವುದು ಅಘಾತಕಾರಿ ಸಂಗತಿ. ಕ್ಷಣಿಕ ಸುಖ ಹಾಗೂ ಮತ್ತಿನ ಅಮಲಿಗೆ ಜೋಶು ಬಿದ್ದು, ಯುವಸಮೂಹ ಇಂತಹ ಪಾರ್ಟಿಗಳತ್ತ ವಾಲುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಕೆಆ‌ರ್ಎಸ್ ಹಿನ್ನೀರಿನ ಪ್ರದೇಶ ನಿರ್ಬಂಧಿತ ಪ್ರದೇಶವಾಗಿದ್ದರೂ ಇಲ್ಲಿ ಬಹಿರಂಗವಾಗಿಯೇ ಇಂತಹ ಮೋಜು-ಮಸ್ತಿಯ ಕೂಟಗಳು ಆಯೋಜನೆಯಾಗುತ್ತವೆ ಎಂದರೆ ಅದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಈ ಹಿನ್ನೀರಿನ ಪ್ರದೇಶದಲ್ಲಿ ಇತ್ತೀಚೆಗೆ ಮದ್ಯವ್ಯಸನಿಗಳ ಹಾವಳಿಯೂ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಮದ್ಯಪಾನ ಮಾಡಿ ಬಾಟಲಿಗಳನ್ನು ಬೀಸಾಡುವುದು, ಕುಡಿದ ಅಮಲಿನಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಸಾಕಷ್ಟು ಉದಾಹರಣೆಗಳಿವೆ. ಆದಾಗ್ಯೂ ಕೆಆರ್‌ಎಸ್‌ನಲ್ಲಿ ಸೆಕ್ಯುರಿಟಿಗಳನ್ನು ನಿಯೋಜಿಸುವುದಾಗಲಿ, ಪೊಲೀಸ್ ಇಲಾಖೆಯೇ ಆಗಾಗ್ಗೆ ಗಸ್ತು ತಿರುಗಿ ಇಂತಹ ಕೂಟಗಳಿಗೆ ಕಡಿವಾಣ ಹಾಕುವ ಕೆಲಸವನ್ನಾಗಲಿ ಮಾಡಿಲ್ಲ. ಇದರ ಪರಿಣಾಮ ಈಗ ರೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳೂ ಇಲ್ಲಿ ನಡೆಯಲು ಆರಂಭಿಸಿವೆ. ಮುಂದಿನ ದಿನಗಳಲ್ಲಾದರೂ ಪೊಲೀಸ್ ಇಲಾಖೆ ಎಚ್ಚತ್ತುಕೊಂಡು ಕಆರ್‌ನ್‌ ಹಿನ್ನೀರಿನ ಪ್ರದೇಶದಲ್ಲಿ ಆಗಾಗ್ಗೆ ಮತ್ತು ಕಿರುಗುವ ಮೂಲಕ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಿ.
-ಪರಳಹಳ್ಳಿ ವುಟ್ಟರಾಜು, ತಾಂಡವವುರ

 

ಆಂದೋಲನ ಡೆಸ್ಕ್

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

20 seconds ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

56 mins ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

1 hour ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

1 hour ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

2 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

2 hours ago