Andolana originals

ಓದುಗರ ಪತ್ರ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಅಗತ್ಯ

ಇತ್ತೀಚಿನ ದಿನಗಳಲ್ಲಿ ದೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸ್ಟಾರ್ ಹೋಟೆಲ್‌ಗಳು, ಪ್ರಭಾವಿಗಳ ಫಾರ್ಮ್ ಹೌಸ್‌ಗಳಲ್ಲಿ ನಡೆಯುತ್ತಿದ್ದ ಇಂತಹ ಪಾರ್ಟಿಗಳು ಈಗ ಮೈಸೂರಿನ ಕೆಆರ್ಎಸ್ ಹಿನೀರಿನ ಪ್ರದೇಶ ದಲ್ಲಿಯೂ ನಡೆದಿರುವುದು ಅಘಾತಕಾರಿ ಸಂಗತಿ. ಕ್ಷಣಿಕ ಸುಖ ಹಾಗೂ ಮತ್ತಿನ ಅಮಲಿಗೆ ಜೋಶು ಬಿದ್ದು, ಯುವಸಮೂಹ ಇಂತಹ ಪಾರ್ಟಿಗಳತ್ತ ವಾಲುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಕೆಆ‌ರ್ಎಸ್ ಹಿನ್ನೀರಿನ ಪ್ರದೇಶ ನಿರ್ಬಂಧಿತ ಪ್ರದೇಶವಾಗಿದ್ದರೂ ಇಲ್ಲಿ ಬಹಿರಂಗವಾಗಿಯೇ ಇಂತಹ ಮೋಜು-ಮಸ್ತಿಯ ಕೂಟಗಳು ಆಯೋಜನೆಯಾಗುತ್ತವೆ ಎಂದರೆ ಅದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಈ ಹಿನ್ನೀರಿನ ಪ್ರದೇಶದಲ್ಲಿ ಇತ್ತೀಚೆಗೆ ಮದ್ಯವ್ಯಸನಿಗಳ ಹಾವಳಿಯೂ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಮದ್ಯಪಾನ ಮಾಡಿ ಬಾಟಲಿಗಳನ್ನು ಬೀಸಾಡುವುದು, ಕುಡಿದ ಅಮಲಿನಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಸಾಕಷ್ಟು ಉದಾಹರಣೆಗಳಿವೆ. ಆದಾಗ್ಯೂ ಕೆಆರ್‌ಎಸ್‌ನಲ್ಲಿ ಸೆಕ್ಯುರಿಟಿಗಳನ್ನು ನಿಯೋಜಿಸುವುದಾಗಲಿ, ಪೊಲೀಸ್ ಇಲಾಖೆಯೇ ಆಗಾಗ್ಗೆ ಗಸ್ತು ತಿರುಗಿ ಇಂತಹ ಕೂಟಗಳಿಗೆ ಕಡಿವಾಣ ಹಾಕುವ ಕೆಲಸವನ್ನಾಗಲಿ ಮಾಡಿಲ್ಲ. ಇದರ ಪರಿಣಾಮ ಈಗ ರೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳೂ ಇಲ್ಲಿ ನಡೆಯಲು ಆರಂಭಿಸಿವೆ. ಮುಂದಿನ ದಿನಗಳಲ್ಲಾದರೂ ಪೊಲೀಸ್ ಇಲಾಖೆ ಎಚ್ಚತ್ತುಕೊಂಡು ಕಆರ್‌ನ್‌ ಹಿನ್ನೀರಿನ ಪ್ರದೇಶದಲ್ಲಿ ಆಗಾಗ್ಗೆ ಮತ್ತು ಕಿರುಗುವ ಮೂಲಕ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಿ.
-ಪರಳಹಳ್ಳಿ ವುಟ್ಟರಾಜು, ತಾಂಡವವುರ

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 mins ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

30 mins ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

2 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

2 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

3 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

4 hours ago