Andolana originals

ಓದುಗರ ಪತ್ರ: ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ ಅಗತ್ಯ

ಇತ್ತೀಚಿನ ದಿನಗಳಲ್ಲಿ ದೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳು ಹೆಚ್ಚಾಗುತ್ತಿವೆ. ಸ್ಟಾರ್ ಹೋಟೆಲ್‌ಗಳು, ಪ್ರಭಾವಿಗಳ ಫಾರ್ಮ್ ಹೌಸ್‌ಗಳಲ್ಲಿ ನಡೆಯುತ್ತಿದ್ದ ಇಂತಹ ಪಾರ್ಟಿಗಳು ಈಗ ಮೈಸೂರಿನ ಕೆಆರ್ಎಸ್ ಹಿನೀರಿನ ಪ್ರದೇಶ ದಲ್ಲಿಯೂ ನಡೆದಿರುವುದು ಅಘಾತಕಾರಿ ಸಂಗತಿ. ಕ್ಷಣಿಕ ಸುಖ ಹಾಗೂ ಮತ್ತಿನ ಅಮಲಿಗೆ ಜೋಶು ಬಿದ್ದು, ಯುವಸಮೂಹ ಇಂತಹ ಪಾರ್ಟಿಗಳತ್ತ ವಾಲುತ್ತಿದ್ದು, ಮಾದಕ ವಸ್ತುಗಳ ಸೇವನೆಯಿಂದಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಕೆಆ‌ರ್ಎಸ್ ಹಿನ್ನೀರಿನ ಪ್ರದೇಶ ನಿರ್ಬಂಧಿತ ಪ್ರದೇಶವಾಗಿದ್ದರೂ ಇಲ್ಲಿ ಬಹಿರಂಗವಾಗಿಯೇ ಇಂತಹ ಮೋಜು-ಮಸ್ತಿಯ ಕೂಟಗಳು ಆಯೋಜನೆಯಾಗುತ್ತವೆ ಎಂದರೆ ಅದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ. ಈ ಹಿನ್ನೀರಿನ ಪ್ರದೇಶದಲ್ಲಿ ಇತ್ತೀಚೆಗೆ ಮದ್ಯವ್ಯಸನಿಗಳ ಹಾವಳಿಯೂ ಹೆಚ್ಚಾಗಿದೆ. ಎಲ್ಲೆಂದರಲ್ಲಿ ಮದ್ಯಪಾನ ಮಾಡಿ ಬಾಟಲಿಗಳನ್ನು ಬೀಸಾಡುವುದು, ಕುಡಿದ ಅಮಲಿನಲ್ಲಿ ಈಜಲು ಹೋಗಿ ನೀರುಪಾಲಾಗಿರುವ ಸಾಕಷ್ಟು ಉದಾಹರಣೆಗಳಿವೆ. ಆದಾಗ್ಯೂ ಕೆಆರ್‌ಎಸ್‌ನಲ್ಲಿ ಸೆಕ್ಯುರಿಟಿಗಳನ್ನು ನಿಯೋಜಿಸುವುದಾಗಲಿ, ಪೊಲೀಸ್ ಇಲಾಖೆಯೇ ಆಗಾಗ್ಗೆ ಗಸ್ತು ತಿರುಗಿ ಇಂತಹ ಕೂಟಗಳಿಗೆ ಕಡಿವಾಣ ಹಾಕುವ ಕೆಲಸವನ್ನಾಗಲಿ ಮಾಡಿಲ್ಲ. ಇದರ ಪರಿಣಾಮ ಈಗ ರೇವ್‌ ಪಾರ್ಟಿಯಂತಹ ಕಾನೂನುಬಾಹಿರ ಚಟುವಟಿಕೆಗಳೂ ಇಲ್ಲಿ ನಡೆಯಲು ಆರಂಭಿಸಿವೆ. ಮುಂದಿನ ದಿನಗಳಲ್ಲಾದರೂ ಪೊಲೀಸ್ ಇಲಾಖೆ ಎಚ್ಚತ್ತುಕೊಂಡು ಕಆರ್‌ನ್‌ ಹಿನ್ನೀರಿನ ಪ್ರದೇಶದಲ್ಲಿ ಆಗಾಗ್ಗೆ ಮತ್ತು ಕಿರುಗುವ ಮೂಲಕ ಇಂತಹ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಲಿ.
-ಪರಳಹಳ್ಳಿ ವುಟ್ಟರಾಜು, ತಾಂಡವವುರ

 

ಆಂದೋಲನ ಡೆಸ್ಕ್

Recent Posts

ದೈಹಿಕ ಶಿಕ್ಷಣ ಶಿಕ್ಷಕರ ಕೊರತೆಯ ನಡುವೆ ಮಕ್ಕಳ ಕ್ರೀಡಾಭ್ಯಾಸ

ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…

51 seconds ago

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

9 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

10 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

12 hours ago