Andolana originals

ಓದುಗರ ಪತ್ರ: ಅಶ್ವಮೇಧ ಬಸ್‌ಗಳಲ್ಲೂ ವಿದ್ಯಾರ್ಥಿ ಪಾಸ್ ಅನುಮತಿಸಲಿ

ರಾಜ್ಯದಲ್ಲಿ ಶಾಲಾ -ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳನ್ನೇ ಹೆಚ್ಚಾಗಿ ಅವಲಂಬಿಸಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಶಕ್ತಿ ಯೋಜನೆಯ ಪರಿಣಾಮದಿಂದಾಗಿ ಈ ಬಸ್ಸುಗಳಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚು ಜನ ಪ್ರಯಾಣಿಸುತ್ತಿರುವುದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪಾಡು ಹೇಳತೀರದಾಗಿದೆ.

ವಿದ್ಯಾರ್ಥಿನಿಯರಿಗೆ ಶಕ್ತಿ ಯೋಜನೆಯ ಸೌಲಭ್ಯದಿಂದ ಅಶ್ವಮೇಧ ಬಸ್ ಮತ್ತು ತಡೆರಹಿತ ಬಸ್‌ಗಳಲ್ಲಿಯೂ ಉಚಿತ ಪ್ರಯಾಣದ ಅವಕಾಶ ಇದೆ. ಆದರೆ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಅಶ್ವಮೇಧ ಬಸ್ ಮತ್ತು ತಡೆರಹಿತ ಬಸ್ ಗಳಲ್ಲಿ ಪಾಸ್ ಅನುಮತಿಸಲಾಗುತ್ತಿಲ್ಲ.

ಇತ್ತೀಚಿನ ದಿನಗಳಲ್ಲಿ ಅಶ್ವಮೇಧ ಬಸ್‌ಗಳೇ ಹೆಚ್ಚು ಸಂಚರಿಸುವುದರಿಂದ ವಿದ್ಯಾರ್ಥಿಗಳು ಆಗೊಮ್ಮೆ ಈಗೊಮ್ಮೆ ಬರುವ ಸಾಮಾನ್ಯ ಬಸ್‌ಗಳನ್ನೇ ಅವಲಂಬಿಸಿ ಪ್ರಯಾಣಿಸುವುದು ಅನಿವಾರ್ಯವಾಗಿದ್ದು, ಇದರಿಂದಾಗಿ ಅವರು ನಿಗದಿತ ಸಮಯಕ್ಕೆ ಗಮ್ಯಸ್ಥಾನ ತಲುಪಲು ಸಾಧ್ಯವಿಲ್ಲದಂತಾಗಿದೆ.

ಸಾರಿಗೆ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ವಿದ್ಯಾರ್ಥಿಗಳ ಸಮಯಪಾಲನೆ ದೃಷ್ಟಿಯಿಂದ ಅವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ತಡೆರಹಿತ ಮತ್ತು ಅಶ್ವಮೇಧ ಬಸ್‌ಗಳಲ್ಲಿಯೂ ವಿದ್ಯಾರ್ಥಿ ಪಾಸ್‌ಗೆ ಅನುಮತಿ ನೀಡುವಂತೆ ಆದೇಶ ನೀಡಬೇಕಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ.

 – ಎಂ. ಪಿ.ದರ್ಶನ್ ಚಂದ್ರ, ಮುಕ್ಕಡಹಳ್ಳಿ, ಚಾಮರಾಜನಗರ ತಾ.

ಆಂದೋಲನ ಡೆಸ್ಕ್

Recent Posts

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

11 mins ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

43 mins ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

6 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

6 hours ago

ಓದುಗರ ಪತ್ರ: ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆ: ಮನಸ್ಸುಗಳಿಗಿಲ್ಲ ‘ಕೂಲ್‌ಕೂಲ್’

ದೇಶದ ಬಹುತೇಕ ರೈಲು ನಿಲ್ದಾಣದ ಫ್ಲಾಟ್‌ ಫಾರ್ಮ್‌ಗಳಲ್ಲಿ  ಸಾರ್ವಜನಿಕರು ಕುಡಿಯುವ ವಾಟರ್ ಕೂಲರ್‌ಗಳಲ್ಲಿ, ಇ-ಕೊಲಿ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಕಂಟ್ರೋಲರ್…

9 hours ago

ಓದುಗರ ಪತ್ರ: ಕೆಎಸ್‌ಪಿಸಿಬಿಯನ್ನು ರಾಜಕೀಯ ಮುಕ್ತಗೊಳಿಸಿ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉನ್ನತ ಹುದ್ದೆಗಳಿಗೆ ತಜ್ಞರನ್ನು ಬಿಟ್ಟು ರಾಜಕೀಯ ವ್ಯಕ್ತಿಗಳನ್ನು ನೇಮಿಸುತ್ತಿರುವುದು ರಾಜ್ಯದ ಪರಿಸರ ಆಡಳಿತಕ್ಕೆ…

9 hours ago