Mysore
30
scattered clouds

Social Media

ಭಾನುವಾರ, 01 ಮಾರ್ಚ್ 2026
Light
Dark

ಓದುಗರ ಪತ್ರ: ಕಿಡಿಗೇಡಿಗಳಿಂದ ವಿದ್ಯಾರ್ಥಿಗಳು ವಿಚಲಿತರಾಗದಿರಿ

ಫೆ.೨೮ರ ಶನಿವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯಲಿದೆ. ಎಲ್ಲಾ ಕಾಲೇಜುಗಳಲ್ಲಿ ವ್ಯವಸ್ಥಿತವಾಗಿ ಪಾಠವನ್ನು ಮುಗಿಸಿ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಸಿದ್ದಾರೆ.

ಮಕ್ಕಳು ಧೈರ್ಯವಾಗಿ ಪರೀಕ್ಷೆ ಎದುರಿಸಲು ಸಿದ್ಧರಾಗಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಜವಾಬ್ದಾರಿತನದಿಂದ ಈ ವರ್ಷ ಶ್ರಮಪಟ್ಟು ಓದಿದ ವಿದ್ಯಾರ್ಥಿಗಳಿಗೆ ಅನ್ಯಾಯವಾಗದ ಹಾಗೆ ಒಟ್ಟು ಮೂರು ಪರೀಕ್ಷೆಗಳನ್ನು ನಡೆಸಲು ಸಿದ್ಧತೆ ನಡೆಸಿದ್ದಾರೆ. ಆದರೆ ಕೆಲ ಕಿಡಿಗೇಡಿಗಳು ಪರೀಕ್ಷೆಯ ಪಾವಿತ್ರ್ಯತೆ ಹಾಳು ಮಾಡಲು ಸಾಮಾಜಿಕ ಜಾಲತಾಣದಲ್ಲಿ ಹಣಕ್ಕೆ ಬೇಡಿಕೆ ಇಟ್ಟು, ‘ಪ್ರಶ್ನೆ ಪತ್ರಿಕೆ ಬೇಕಾ’ ಎಂಬ ಸಂದೇಶ ಹರಿಯಬಿಡುತ್ತಾರೆ. ಇಂತಹ ತಪ್ಪು ಸಂದೇಶಗಳಿಂದ ಯಾರೂ ಮೋಸಹೋಗಬಾರದು, ವಿದ್ಯಾರ್ಥಿಗಳು ಭ್ರಮನಿರಸನಗೊಳ್ಳಬಾರದು. ಪ್ರಶ್ನೆ ಪತ್ರಿಕೆಗಳು ಅತ್ಯಂತ ಭದ್ರತೆಯಲ್ಲಿ ಇರುತ್ತವೆ. ಪೋಷಕರು ವಿದ್ಯಾರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆಯಲು ಪ್ರೋತ್ಸಾಹಿಸಬೇಕು.

-ಎಂ. ಎಸ್. ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ. ಮೈಸೂರು

Tags:
error: Content is protected !!