Andolana originals

ಓದುಗರ ಪತ್ರ: ಗ್ಯಾರಂಟಿ ಯೋಜನೆಗಳ ಬಗ್ಗೆ ಸುಪ್ರೀಂಕೋರ್ಟ್ ಅಭಿಪ್ರಾಯ ಸಾಗತಾರ್ಹ

ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಎಲ್ಲ ರಾಜಕೀಯ ಪಕ್ಷಗಳು ಜನರಿಗೆ ಉಚಿತ ಗ್ಯಾರಂಟಿ ಯೋಜನೆಗಳನ್ನು ನೀಡಲು ಮುಂದಾಗುತ್ತಿದ್ದು, ಈ ಗ್ಯಾರಂಟಿ ಯೋಜನೆಗಳು ಜನರು ಕೆಲಸ ಮಾಡುವುದನ್ನೇ ಮರೆಯುವಂತೆ ಮಾಡಿವೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಅಗಸ್ಟಿನ್ ಜಾರ್ಜ್ ಅವರನ್ನು ಒಳಗೊಂಡ ಪೀಠ ದೇಶದ ಹಲವು ರಾಜ್ಯಗಳಲ್ಲಿ ಜಾರಿಯಲ್ಲಿರುವ ಉಚಿತ ಗ್ಯಾರಂಟಿ ಯೋಜನೆಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಯೋಜನೆಗಳು ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತವೆ. ಹೇಗಿದ್ದರೂ ಉಚಿತ ರೇಷನ್, ತಿಂಗಳಿಗೆ ಒಂದಿಷ್ಟು ಹಣ ಸಿಗುತ್ತಿದೆ. ಹೀಗಿರುವಾಗ ಕೆಲಸ ಏಕೆ ಮಾಡಬೇಕು ಎಂಬ ಮನೋಭಾವನೆಯನ್ನು ಜನರು ಬೆಳೆಸಿಕೊಳ್ಳುತ್ತಿದ್ದಾರೆ. ಇಂತಹ ಉಚಿತ ಯೋಜನೆಗಳು ಅಪಾಯಕಾರಿ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಗ್ಯಾರಂಟಿ ಯೋಜನೆಗಳಿಂದಾಗಿ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿರುವುದು ಚಿಂತನಾರ್ಹವಾಗಿದೆ.

ಚುನಾವಣೆಯ ಸಮಯದಲ್ಲಿ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡುತ್ತವೆ. ಈ ಗ್ಯಾರಂಟಿ ಯೋಜನೆಗಳು ರಾಜ್ಯ ಹಾಗೂ ದೇಶದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರುತ್ತವೆ. ಈ ಹಿಂದೆ ಒಂದೆರಡು ರಾಜ್ಯಗಳಿಗೆ ಸೀಮಿತವಾಗಿದ್ದ ಉಚಿತ ಗ್ಯಾರಂಟಿ ಯೋಜನೆಗಳು ದೇಶಾದ್ಯಂತ ಮತದಾರರನ್ನು ಸೆಳೆಯುವ ಅಸ್ತ್ರಗಳಾಗಿ ಬದಲಾಗಿರುವುದು ದುರಂತವೇ ಸರಿ.

ರಾಜಕೀಯ ಪಕ್ಷಗಳು ಆದಾಯ ಹೆಚ್ಚಳ ಹಾಗೂ ಉದ್ಯೋಗಾವಕಾಶಗಳನ್ನು ಸೃಷ್ಟಿಸಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮುಂದಾಗಬೇಕೇ ವಿನಾ ಉಚಿತ ಯೋಜನೆಗಳನ್ನು ನೀಡಿ ರಾಜ್ಯದ ಆರ್ಥಿಕ ವ್ಯವಸ್ಥೆ ಹಳ್ಳ ಹಿಡಿಯುವಂತೆ ಮಾಡಬಾರದು. ಹೀಗಾಗಿ ಎಲ್ಲ ರಾಜ್ಯಗಳ ಸರ್ಕಾರಗಳು ಉಚಿತ ಗ್ಯಾರಂಟಿ ಯೋಜನೆಗಳ ಮೂಲಕ ಮತದಾರರಿಗೆ ಆಮಿಷ ಒಡ್ಡುವುದನ್ನ ನಿಲ್ಲಿಸಬೇಕು. ಮತದಾರರೂ ಕೂಡ ಗ್ಯಾರಂಟಿ ಯೋಜನೆಗಳ ಬಗ್ಗೆ ಅವಲೋಕಿಸಿ ನಂತರ ಅಭಿವೃದ್ಧಿಗಾಗಿ ಶ್ರಮಿಸುವ ಪಕ್ಷಕ್ಕೆ ಮತ ನೀಡಬೇಕು. ಗ್ಯಾರಂಟಿ ಯೋಜನೆಗಳನ್ನು ನೀಡುತ್ತಿರುವ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿರುವುದು ಸ್ವಾಗತಾರ್ಹ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಸಚ್ಚಿದಾನದ ಶ್ರೀಗಳ ನೇತೃತ್ವದಲ್ಲಿ ಹನುಮಾನ್‌ ಚಾಲೀಸಾ ಪಾರಾಯಣ ಯಜ್ಞ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಬೃಹತ್ ಸಾಮೂಹಿಕ ಹನುಮಾನ್…

9 mins ago

ಓದುಗರ ಪತ್ರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸೌಲಭ್ಯ ಕಲ್ಪಿಸಿ

ಚಾಮರಾಜನಗರ ಜಿಲ್ಲೆಯ ಎಲ್ಲಾ ಗ್ರಾಮಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ಅಪಘಾತ ಮೊದಲಾದ ತುರ್ತು ಸಂದರ್ಭಗಳಲ್ಲಿ ರೋಗಿಗಳು ಹಾಗೂ…

49 mins ago

ಭಾರತ – ಅಮೆರಿಕ ವ್ಯಾಪಾರ ಒಪ್ಪಂದ : ಹಿನ್ನೆಲೆ ಮತ್ತು ಪರಿಣಾಮ

• ರಮಾನಂದ ಶರ್ಮಾ, ಅರ್ಥಿಕ, ರಾಜಕೀಯ ವಿಶ್ಲೇಷಕರು ಭಾರೀ ಹಗ್ಗಜಗ್ಗಾಟದ ನಂತರ ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದಕ್ಕೆ ಸಹಿ…

1 hour ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ…

1 hour ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ…

1 hour ago

ಮ.ಬೆಟ್ಟ ಮಾರ್ಗ ಮಧ್ಯೆ ಚಿರತೆ ಪ್ರತ್ಯಕ್ಷ : ಸಾರ್ವಜನಿಕರಲ್ಲಿ ಆತಂಕ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಮಾರ್ಗ ಮಧ್ಯದಲ್ಲಿ ಶುಕ್ರವಾರ ತಡರಾತ್ರಿ ಚಿರತೆ ಕಾಣಿಸಿಕೊಂಡಿದ್ದು ಭಕ್ತರಲ್ಲಿ ಆತಂಕ…

1 hour ago