ಓದುಗರ ಪತ್ರ
ಸರ್ಕಾರವು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ಜಾತಿಗಳನ್ನು ಗುರ್ತಿಸುವುದರ ಮೂಲಕವೇ ನಡೆಸುತ್ತಿದೆ. ಈ ಸಮೀಕ್ಷೆಗೆ ಪ್ರಮುಖವಾಗಿ ಪಡಿತರ ಚೀಟಿಯನ್ನೇ ಮೂಲ ಆಧಾರವಾಗಿ ಬಳಸಲಾಗುತ್ತಿದೆ. ಆದರೆ ಎಪಿಎಲ್ ಕಾರ್ಡ್ ಹೊಂದಿರುವ ಬಹಳಷ್ಟು ಮಂದಿಯ ಕಾರ್ಡ್ಗಳು ಯಾವುದೇ ಪಡಿತರ ಪಡೆಯದಿರುವ ಕಾರಣದಿಂದ ನಿಷ್ಕ್ರಿಯವಾಗಿವೆ.
ನಿಷ್ಕ್ರಿಯವಾಗಿರುವ ಕಾರ್ಡ್ ಗಳ ಸಂಖ್ಯೆಯನ್ನು ದಾಖಲು ಮಾಡಿದಾಗ ಅಲ್ಲಿ ಕುಟುಂಬದ ಎಲ್ಲಾ ಸದಸ್ಯರ ಮಾಹಿತಿ ದೊರಕದೆ ಕೇವಲ ಕುಟುಂಬದ ಯಜಮಾನರ ಮಾಹಿತಿ ಅಷ್ಟೇ ದಾಖಲಾಗುತ್ತದೆ. ಇನ್ನುಳಿದ ಸದಸ್ಯರ ಮಾಹಿತಿಯನ್ನು ದಾಖಲಿಸಲು ಆಪ್ನಲ್ಲಿ ಸಮೀಕ್ಷೆದಾರರಿಗೆ ಅವಕಾಶವಿಲ್ಲದ ಕಾರಣ ಸದಸ್ಯರ ಮಾಹಿತಿ ಬಿಟ್ಟು ಹೋಗುತ್ತಿದೆ. ಆದ್ದರಿಂದ ಹಿಂದುಳಿದ ವರ್ಗಗಳ ಆಯೋಗವು ಇಂತಹ ಸಂದರ್ಭದಲ್ಲಿ ಉಳಿದ ಸದಸ್ಯರ ಮಾಹಿತಿಯನ್ನು ದಾಖಲಿಸಲು ಸಮೀಕ್ಷೆ ನಡೆಸುವವರಿಗೆ ಅವಕಾಶ ಮಾಡಿಕೊಡಬೇಕು. ಇಲ್ಲದಿದ್ದರೆ ಸಮೀಕ್ಷೆಯ ಉದ್ದೇಶವೇ ವಿಫಲವಾಗುತ್ತದೆ.
-ಮುಳ್ಳೂರು ಪ್ರಕಾಶ್, ಕನಕದಾಸ ನಗರ, ಮೈಸೂರು
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…