Andolana originals

ಓದುಗರ ಪತ್ರ: ೪೦ಕ್ಕೂ ಹೆಚ್ಚು ಮರಗಳ ‘ಹತ್ಯೆ’ ಶಂಕಾಸ್ಪದ

ಮೈಸೂರಿನಲ್ಲಿ ೪೦ಕ್ಕೂ ಹೆಚ್ಚು ಮರಗಳ ಹನನ ನಡೆದಿದೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಧರೆಗೆ ಉರುಳಿಸುವ ಮೂಲಕ ಜಗತಿಕ ತಾಪಮಾನಕ್ಕೆ ಮೈಸೂರು ಪಾಲಿಕೆ ಕೊಡುಗೆ ನೀಡಿದೆ. ಸಾರ್ವಜನಿಕರು ರಸ್ತೆಬದಿಯಲ್ಲಿ ಒಣಗಿ ನಿಂತ ಮರಗಳ ಬಗ್ಗೆ ದೂರು ನೀಡಿದರೆ, ಅದಕ್ಕೆ ನೂರೆಂಟು ನಿಯಮಗಳನ್ನು ಹೇಳುವ ನಗರಪಾಲಿಕೆ ಮತ್ತು ಅರಣ್ಯ ಇಲಾಖೆ ಒಟ್ಟಾಗಿಯೇ ೪೦ಕ್ಕೂ ಹೆಚ್ಚು ಬೃಹತ್ ಮರಗಳ ಬುಡಕ್ಕೆ ಕೊಡಲಿ ಹಾಕಿರುವುದು ವಿಪರ್ಯಾಸ.

ರಸ್ತೆ ಅಗಲೀಕರಣಕ್ಕೆ ಪೂರಕವಾಗಿ ಮರಗಳನ್ನು ಕಡಿದಿರುವುದು ನಿಜವಾದರೆ, ಏಕೆ ಸಾರ್ವಜನಿಕರ ಗಮನಕ್ಕೆ ತರಲಿಲ್ಲ. ಪರಿಸರವಾದಿಗಳು, ತಜ್ಞರಿಗೆ ಯಾರಿಗೂ ವಿಷಯ ತಿಳಿಸದೆ ದಿಢೀರ್ ಇಂತಹ ಕ್ರಮ ಕೈಗೊಂಡಿರುವುದು ಹಲವಾರು ಅನುಮಾನಗಳಿಗೆ ಆಸ್ಪದೆ ನೀಡಿದೆ. ಒಂದು ಮರ ಕಡಿದರೆ, ಅದಕ್ಕೆ ಪರ್ಯಾಯವಾಗಿ ೧೦ ಸಸಿಗಳನ್ನು ನೆಡಬೇಕು ಎಂಬ ನಿಯಮ ಇದೆ ಎನ್ನಲಾಗಿದೆ. ಹಾಗಿದ್ದರೆ ನಗರ ಪಾಲಿಕೆ ಮತ್ತು ಅರಣ್ಯಾಧಿಕಾರಿಗಳು ಅಂದಾಜು ೪೦೦ ಸಸಿಗಳನ್ನು ನೆಟ್ಟು ಪೋಷಣೆ ಮಾಡಿರಬೇಕು. ಅವು ಎಲ್ಲಿವೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಇಲ್ಲವಾದರೆ, ಈ ಮರಗಳ ಹನನ ಪ್ರಕರಣ ‘ಬೆಕ್ಕು ಕಣ್ಣುಮುಚ್ಚಿ ಕೊಂಡು ಹಾಲು ಕುಡಿದಂತೆ’ ಎಂಬ ಮಾತನ್ನು ಸಾಬೀತುಪಡಿಸುತ್ತದೆ.

-ಎಸ್.ವಿಶ್ವಜಿತ್, ಕುವೆಂಪುನಗರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕ್ಲಿಂಗ್‌

ಕಾಶ್ಮೀರದಿಂದ ಕನ್ಯಾಕುಮಾರಿಯವರೆಗಿನ ಭಾರತದಲ್ಲಿ ಹಲವಾರು ರಾಜ್ಯ, ಹಲವಾರು ಧರ್ಮ, ಹಲವಾರು ಆಹಾರ ವೈವಿಧ್ಯತೆ, ಹಲವಾರು ಭಾಷೆ, ಹಲವಾರು ಸಂಸ್ಕ ತಿಗಳು…

26 mins ago

ಅಡಕೆಗೆ ಎಲೆಚುಕ್ಕಿ, ಹಳದಿ ರೋಗ ಬಾಧೆ

ಕೊಡಗು ಜಿಲ್ಲೆಯಲ್ಲಿಯೂ ಕಾಣಿಸಿಕೊಳ್ಳುತ್ತಿರುವ ರೋಗ; ಹತೋಟಿಗೆ ಔಷಧಿ ಜೊತೆಗೆ ಸೂಕ್ತ ಪರಿಹಾರಕ್ಕೆ ಒತ್ತಾಯ ಮಡಿಕೇರಿ: ವಾಣಿಜ್ಯ ಬೆಳೆಯಾಗಿ ಕೃಷಿಕರ ಬದುಕಿಗೆ ಆಶ್ರಯವಾಗಿರುವ…

55 mins ago

ಸಾರ್ವಜನಿಕ ಶೌಚಾಲಯ ‘ಎರಡೂ’ ಬಂದ್!

ಚಾ.ನಗರದ ತರಕಾರಿ ಮಾರುಕಟ್ಟೆ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಮುಚ್ಚಿದ ಶೌಚಾಲಯಗಳು; ಜನರಿಗೆ ಸಮಸ್ಯೆ ಚಾಮರಾಜನಗರ: ನಗರದಲ್ಲಿನ ಎರಡು ಸಾರ್ವಜನಿಕ…

1 hour ago

30 ಹಾಡಿಗಳಿಗೂ ಅರಣ್ಯ ಹಕ್ಕು ಪತ್ರಗಳನ್ನು ನೀಡಲು ಆಗ್ರಹ

ಹುಣಸೂರು: ಹಾಡಿಗಳ ಅರಣ್ಯ ಹಕ್ಕು ಸಮಿತಿಗಳ ಪ್ರತಿನಿಧಿಗಳಿಂದ ಅರಣ್ಯ ಪ್ರವೇಶ ಅಭಿಯಾನ ಹುಣಸೂರು: ತಾಲ್ಲೂಕಿನ ಆದಿವಾಸಿಗಳು ೨೦೦೬ರ ಆರಣ್ಯ ಹಕ್ಕು…

4 hours ago

ದಶಕದಿಂದ ಕಾದಿದ್ದ ವಿದ್ಯಾರ್ಥಿಗಳ ವನವಾಸಕ್ಕೆ ಮುಕ್ತಿ!

ಕೆ.ಬಿ.ರಮೇಶ ನಾಯಕ ೨೦೧೩-೧೪, ೨೦೧೪-೧೫ನೇ ಸಾಲಿನಲ್ಲಿ ಪ್ರವೇಶ ಪಡೆದು ಉತ್ತೀರ್ಣರಾದವರಿಗೆ ಪದವಿ ಪ್ರಮಾಣಪತ್ರ ಮುಕ್ತ ವಿವಿಯ ಇನ್‌ಹೌಸ್‌ನಲ್ಲಿ ಪ್ರವೇಶ ಪಡೆದಿದ್ದವರಿಗೆ…

4 hours ago

ಎಚ್.ಡಿ.ಕೋಟೆ ಪೊಲೀಸ್ ಕ್ಯಾಂಟೀನ್ ಬಂದ್

ಕಡಿಮೆ ದರದಲ್ಲಿ ಊಟ, ತಿಂಡಿ ನೀಡುತ್ತಿದ್ದ ಕ್ಯಾಂಟೀನ್ ಮುಚ್ಚಿದ್ದರಿಂದ ಕೂಲಿ ಕಾರ್ಮಿಕರಿಗೆ, ಬಡವರಿಗೆ ತೊಂದರೆ  ಎಚ್.ಡಿ.ಕೋಟೆ: ಅನೇಕ ವಿದ್ಯಾರ್ಥಿಗಳಿಗೆ, ಕೂಲಿ…

4 hours ago