ಮೈಸೂರಿನಲ್ಲಿ ೪೦ಕ್ಕೂ ಹೆಚ್ಚು ಮರಗಳ ಹನನ ನಡೆದಿದೆ. ಅಭಿವೃದ್ಧಿ ಹೆಸರಿನಲ್ಲಿ ಮರಗಳನ್ನು ಧರೆಗೆ ಉರುಳಿಸುವ ಮೂಲಕ ಜಗತಿಕ ತಾಪಮಾನಕ್ಕೆ ಮೈಸೂರು ಪಾಲಿಕೆ ಕೊಡುಗೆ ನೀಡಿದೆ. ಸಾರ್ವಜನಿಕರು ರಸ್ತೆಬದಿಯಲ್ಲಿ ಒಣಗಿ ನಿಂತ ಮರಗಳ ಬಗ್ಗೆ ದೂರು ನೀಡಿದರೆ, ಅದಕ್ಕೆ ನೂರೆಂಟು ನಿಯಮಗಳನ್ನು ಹೇಳುವ ನಗರಪಾಲಿಕೆ ಮತ್ತು ಅರಣ್ಯ ಇಲಾಖೆ ಒಟ್ಟಾಗಿಯೇ ೪೦ಕ್ಕೂ ಹೆಚ್ಚು ಬೃಹತ್ ಮರಗಳ ಬುಡಕ್ಕೆ ಕೊಡಲಿ ಹಾಕಿರುವುದು ವಿಪರ್ಯಾಸ.
ರಸ್ತೆ ಅಗಲೀಕರಣಕ್ಕೆ ಪೂರಕವಾಗಿ ಮರಗಳನ್ನು ಕಡಿದಿರುವುದು ನಿಜವಾದರೆ, ಏಕೆ ಸಾರ್ವಜನಿಕರ ಗಮನಕ್ಕೆ ತರಲಿಲ್ಲ. ಪರಿಸರವಾದಿಗಳು, ತಜ್ಞರಿಗೆ ಯಾರಿಗೂ ವಿಷಯ ತಿಳಿಸದೆ ದಿಢೀರ್ ಇಂತಹ ಕ್ರಮ ಕೈಗೊಂಡಿರುವುದು ಹಲವಾರು ಅನುಮಾನಗಳಿಗೆ ಆಸ್ಪದೆ ನೀಡಿದೆ. ಒಂದು ಮರ ಕಡಿದರೆ, ಅದಕ್ಕೆ ಪರ್ಯಾಯವಾಗಿ ೧೦ ಸಸಿಗಳನ್ನು ನೆಡಬೇಕು ಎಂಬ ನಿಯಮ ಇದೆ ಎನ್ನಲಾಗಿದೆ. ಹಾಗಿದ್ದರೆ ನಗರ ಪಾಲಿಕೆ ಮತ್ತು ಅರಣ್ಯಾಧಿಕಾರಿಗಳು ಅಂದಾಜು ೪೦೦ ಸಸಿಗಳನ್ನು ನೆಟ್ಟು ಪೋಷಣೆ ಮಾಡಿರಬೇಕು. ಅವು ಎಲ್ಲಿವೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು. ಇಲ್ಲವಾದರೆ, ಈ ಮರಗಳ ಹನನ ಪ್ರಕರಣ ‘ಬೆಕ್ಕು ಕಣ್ಣುಮುಚ್ಚಿ ಕೊಂಡು ಹಾಲು ಕುಡಿದಂತೆ’ ಎಂಬ ಮಾತನ್ನು ಸಾಬೀತುಪಡಿಸುತ್ತದೆ.
-ಎಸ್.ವಿಶ್ವಜಿತ್, ಕುವೆಂಪುನಗರ, ಮೈಸೂರು.
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…