Andolana originals

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ ಇದು. ಇಲ್ಲಿ ಏನಿದೆ ಏನಿಲ್ಲ ಎಂದು ಹೇಳುವಂತಿಲ್ಲ. ಎಲ್ಲ ಚಿತ್ರಕಲೆಗಳು, ನಾಟಕಗಳು, ದನಗಳ ಜಾತ್ರೆ, ಸಾಮೂಹಿಕ ವಿವಾಹ, ಧಾರ್ಮಿಕ ಗೋಷ್ಠಿಗಳು ಸೇರಿದಂತೆ ಎಲ್ಲ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗಳ ಮುಂದೆ ಜನಜಂಗುಳಿ ಇದ್ದೇ ಇರುತ್ತದೆ.

ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಅಪೂರ್ವ ಮಿಲನವೂ ಈ ಜಾತ್ರೆಯಲ್ಲಿ ಎದ್ದುಕಾಣುತ್ತಿತ್ತು. ಇದೆಲ್ಲವನ್ನೂ ಮೀರಿಸಿ ‘ಕೃಷಿ ಬ್ರಹ್ಮಾಂಡ’ ಜನರನ್ನು ಬಹಳಷ್ಟು ಆಕರ್ಷಿಸಿತ್ತು. ಸ್ವಾತಂತ್ರ್ಯಾನಂತರ ೧೯೫೦-೧೯೬೦ರ ದಶಕದಲ್ಲಿ ಕುಗ್ರಾಮಗಳಲ್ಲಿ ಶಾಲೆಗಳನ್ನು ಸ್ಥಾಪಿಸಿ ನಿರಕ್ಷರಕುಕ್ಷಿಗಳನ್ನು ಅಕ್ಷರಸ್ಥರನ್ನಾಗಿ ಮಾಡಿದ ಕೀರ್ತಿ ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಲ್ಲುತ್ತದೆ.

೧೯೬೦ರ ದಶಕದಲ್ಲಿ ಹುಲ್ಲಹಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆದ ಸುತ್ತೂರು ಕ್ಷೇತ್ರದಿಂದಾಗಿ ಗ್ರಾಮದ ಹೆಣ್ಣುಮಕ್ಕಳು ಕನಿಷ್ಠ ಪ್ರೌಢಶಾಲೆ ಮೆಟ್ಟಿಲು ಏರುವುದು ಸಾಧ್ಯವಾಯಿತು. ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸದ ಕಾಲದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಶಾಲೆ ಆರಂಭಿಸಿದ ನಂತರ ಗ್ರಾಮೀಣ ಮಹಿಳೆಯರು ಶಿಕ್ಷಣವಂತರಾದರು.

ಹುಲ್ಲಹಳ್ಳಿಯಲ್ಲಿ ಆ ಕಾಲದಲ್ಲಿ ಪ್ರೌಢಶಾಲೆ ತೆರೆಯದೇ ಇದ್ದಿದ್ದರೆ ನನ್ನ ಶಿಕ್ಷಣ ಮಿಡ್ಲ್‌ಸ್ಕೂಲ್‌ಗೆ ಮೊಟಕಾಗಿ ಹೋಗುತ್ತಿತ್ತು. ಶಿಕ್ಷಣದಲ್ಲಿ ಕ್ರಾಂತಿ ಮಾಡಿದಂತೆ ಶ್ರೀ ಕ್ಷೇತ್ರದಿಂದಲೇ ಸ್ಥಾಪಿಸಿರುವ ‘ಕೃಷಿ ವಿಜ್ಞಾನ ಕೇಂದ್ರ’ದ ಮೂಲಕ ಅನ್ನದಾತರ ಬದುಕಿನಲ್ಲಿ ಭರವಸೆಯ ಬೆಳಕನ್ನು ಸುತ್ತೂರು ಕ್ಷೇತ್ರ ಮೂಡಿಸಲಿ. ಮುಂದಿನ ಜಾತ್ರೆಗಳಲ್ಲಿ ‘ಕೃಷಿಮೇಳ’ಕ್ಕೆ ಹೆಚ್ಚಿನ ಆದ್ಯತೆ ನೀಡಲಿ.

ಪ್ರಗತಿಪರ ರೈತರೊಡನೆ, ಕೃಷಿ ವಿಜ್ಞಾನಿಗಳೊಡನೆ ಚರ್ಚಾ ಕಾರ್ಯ ಕ್ರಮಗಳು ಇನ್ನಷ್ಟು ಹೆಚ್ಚಾಗಬೇಕು. ಕೃಷಿ ಬ್ರಹ್ಮಾಂಡದಲ್ಲಿ ಜನಸಾಮಾನ್ಯರಿಗೆ ಸ್ವಯಂ ಸೇವಕರ ಬದಲು ತಜ್ಞರು ಮಾಹಿತಿ ನೀಡುವಂತಾಗಬೇಕು.

-ರತ್ನ ಹುಲ್ಲಹಳ್ಳಿ, ವಕೀಲರು, ನಂಜನಗೂಡು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚರಂಡಿ ಸ್ವಚ್ಛಗೊಳಿಸಿ

ಮೈಸೂರಿನ ಹೆಬ್ಬಾಳು ಬಡಾವಣೆಯ ಸೂರ್ಯಬೇಕರಿ ಸಮೀಪ ಎರಡನೇ ಅಡ್ಡರಸ್ತೆಯ ಬಳಿ ಇರುವ ಚರಂಡಿಯನ್ನು ಕಳೆದ ಎರಡು-ಮೂರು ತಿಂಗಳಿನಿಂದ ಸ್ವಚ್ಛಗೊಳಿಸದೇ ಇರುವುದರಿಂದ…

2 hours ago

ಓದುಗರ ಪತ್ರ: ಪೌರಕಾರ್ಮಿಕರ ವಿಶ್ರಾಂತಿಗೃಹ ಸದ್ಭಳಕೆಯಾಗಲಿ

ಮೈಸೂರಿನ ಲಷ್ಕರ್ ಮೊಹಲ್ಲಾದ ಪುಲಿಕೇಶಿ ರಸ್ತೆಯಲ್ಲಿರುವ ವೀರನಗೆರೆಯಲ್ಲಿ ೨-೯-೧೯೮೫ ರಂದು ಉಚಿತ ವಾಚನಾಲಯವನ್ನು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಅಂದಿನ…

2 hours ago

ಓದುಗರ ಪತ್ರ: ಲಿಂಗದೇವರಕೊಪ್ಪಲಿನಲ್ಲಿ ಬಸ್ ನಿಲುಗಡೆಯಾಗಲಿ

ಮೈಸೂರಿನ ಲಿಂಗದೇವರಕೊಪ್ಪಲು ಗ್ರಾಮದಲ್ಲಿರುವ ಗಾರ್ಮೆಂಟ್ಸ್, ಕಾರ್ಖಾನೆಗಳಿಗೆ ಸುತ್ತಮುತ್ತಲಿನ ಕಾರ್ಮಿಕರು ಬರುತ್ತಾರೆ. ಆದರೆ ಈ ಸ್ಥಳದಲ್ಲಿ ಮೈಸೂರಿನಿಂದ ಮಡಿಕೇರಿ, ಹಾಸನ ಕಡೆಗೆ…

2 hours ago

ಜಯಪುರ ಜೇಡಿಕಟ್ಟೆ ಮಹದೇಶ್ವರ ಸ್ವಾಮಿ ಜಾತ್ರೆ

ಕೊಂಡೋತ್ಸವಕ್ಕೆ ೫ ಎತ್ತಿನ ಗಾಡಿಗಳಲ್ಲಿ ಖಗ್ಗಲಿ ಸೌದೆ ತಂದ ಗ್ರಾಮಸ್ಥರು ಮೈಸೂರು: ತಾಲ್ಲೂಕಿನ ಜಯಪುರ ಗ್ರಾಮದ ಶ್ರೀ ಜೇಡಿಕಟ್ಟೆ ಮಹದೇಶ್ವರ…

2 hours ago

ಮೂಲಸೌಲಭ್ಯ ವಂಚಿತ ಯಳಂದೂರು ಸಂತೆ ಮೈದಾನ

ಎಂ.ಗೂಳೀಪುರ ನಂದೀಶ್ ಕೊಳೆತ ಪದಾರ್ಥಗಳಿಂದ ದುರ್ನಾತ; ಹಲವು ಅಂಗಡಿಗಳು ನಿರುಪಯುಕ್ತ ಯಳಂದೂರು: ಪಟ್ಟಣದ ಕೇಂದ್ರಸ್ಥಾನದಲ್ಲಿನ ಸಂತೆ ಮೈದಾನವು ಮೂಲಸೌಲಭ್ಯಗಳಿಂದ ವಂಚಿತವಾಗಿದೆ.…

2 hours ago

ಮನಸೂರೆಗೊಳ್ಳುತ್ತಿರುವ ಸುತ್ತೂರು ಜಾತ್ರೆಯಲ್ಲಿನ ಕಲಾವೈಭವ

ಎಸ್.ಎಸ್.ಭಟ್ ನಂಜನಗೂಡು: ಶ್ರೀ ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದಲ್ಲಿನ ಕಲಾ ವೈಭವ ಕಲಾಸಕ್ತರೂ ಸೇರಿದಂತೆ ಎಲ್ಲರ ಮನಸೂರೆಗೊಂಡಿತು. ಅನೇಕ ವರ್ಷಗಳಿಂದ…

3 hours ago