Andolana originals

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ ಇದು. ಇಲ್ಲಿ ಏನಿದೆ ಏನಿಲ್ಲ ಎಂದು ಹೇಳುವಂತಿಲ್ಲ. ಎಲ್ಲ ಚಿತ್ರಕಲೆಗಳು, ನಾಟಕಗಳು, ದನಗಳ ಜಾತ್ರೆ, ಸಾಮೂಹಿಕ ವಿವಾಹ, ಧಾರ್ಮಿಕ ಗೋಷ್ಠಿಗಳು ಸೇರಿದಂತೆ ಎಲ್ಲ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗಳ ಮುಂದೆ ಜನಜಂಗುಳಿ ಇದ್ದೇ ಇರುತ್ತದೆ.

ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಅಪೂರ್ವ ಮಿಲನವೂ ಈ ಜಾತ್ರೆಯಲ್ಲಿ ಎದ್ದುಕಾಣುತ್ತಿತ್ತು. ಇದೆಲ್ಲವನ್ನೂ ಮೀರಿಸಿ ‘ಕೃಷಿ ಬ್ರಹ್ಮಾಂಡ’ ಜನರನ್ನು ಬಹಳಷ್ಟು ಆಕರ್ಷಿಸಿತ್ತು. ಸ್ವಾತಂತ್ರ್ಯಾನಂತರ ೧೯೫೦-೧೯೬೦ರ ದಶಕದಲ್ಲಿ ಕುಗ್ರಾಮಗಳಲ್ಲಿ ಶಾಲೆಗಳನ್ನು ಸ್ಥಾಪಿಸಿ ನಿರಕ್ಷರಕುಕ್ಷಿಗಳನ್ನು ಅಕ್ಷರಸ್ಥರನ್ನಾಗಿ ಮಾಡಿದ ಕೀರ್ತಿ ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಲ್ಲುತ್ತದೆ.

೧೯೬೦ರ ದಶಕದಲ್ಲಿ ಹುಲ್ಲಹಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆದ ಸುತ್ತೂರು ಕ್ಷೇತ್ರದಿಂದಾಗಿ ಗ್ರಾಮದ ಹೆಣ್ಣುಮಕ್ಕಳು ಕನಿಷ್ಠ ಪ್ರೌಢಶಾಲೆ ಮೆಟ್ಟಿಲು ಏರುವುದು ಸಾಧ್ಯವಾಯಿತು. ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸದ ಕಾಲದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಶಾಲೆ ಆರಂಭಿಸಿದ ನಂತರ ಗ್ರಾಮೀಣ ಮಹಿಳೆಯರು ಶಿಕ್ಷಣವಂತರಾದರು.

ಹುಲ್ಲಹಳ್ಳಿಯಲ್ಲಿ ಆ ಕಾಲದಲ್ಲಿ ಪ್ರೌಢಶಾಲೆ ತೆರೆಯದೇ ಇದ್ದಿದ್ದರೆ ನನ್ನ ಶಿಕ್ಷಣ ಮಿಡ್ಲ್‌ಸ್ಕೂಲ್‌ಗೆ ಮೊಟಕಾಗಿ ಹೋಗುತ್ತಿತ್ತು. ಶಿಕ್ಷಣದಲ್ಲಿ ಕ್ರಾಂತಿ ಮಾಡಿದಂತೆ ಶ್ರೀ ಕ್ಷೇತ್ರದಿಂದಲೇ ಸ್ಥಾಪಿಸಿರುವ ‘ಕೃಷಿ ವಿಜ್ಞಾನ ಕೇಂದ್ರ’ದ ಮೂಲಕ ಅನ್ನದಾತರ ಬದುಕಿನಲ್ಲಿ ಭರವಸೆಯ ಬೆಳಕನ್ನು ಸುತ್ತೂರು ಕ್ಷೇತ್ರ ಮೂಡಿಸಲಿ. ಮುಂದಿನ ಜಾತ್ರೆಗಳಲ್ಲಿ ‘ಕೃಷಿಮೇಳ’ಕ್ಕೆ ಹೆಚ್ಚಿನ ಆದ್ಯತೆ ನೀಡಲಿ.

ಪ್ರಗತಿಪರ ರೈತರೊಡನೆ, ಕೃಷಿ ವಿಜ್ಞಾನಿಗಳೊಡನೆ ಚರ್ಚಾ ಕಾರ್ಯ ಕ್ರಮಗಳು ಇನ್ನಷ್ಟು ಹೆಚ್ಚಾಗಬೇಕು. ಕೃಷಿ ಬ್ರಹ್ಮಾಂಡದಲ್ಲಿ ಜನಸಾಮಾನ್ಯರಿಗೆ ಸ್ವಯಂ ಸೇವಕರ ಬದಲು ತಜ್ಞರು ಮಾಹಿತಿ ನೀಡುವಂತಾಗಬೇಕು.

-ರತ್ನ ಹುಲ್ಲಹಳ್ಳಿ, ವಕೀಲರು, ನಂಜನಗೂಡು

 

 

ಆಂದೋಲನ ಡೆಸ್ಕ್

Recent Posts

ಎಲ್‌ಪಿಜಿ ಸಿಲಿಂಡರ್‌ ಸಿಗುತ್ತದೆ, ಜನರಲ್ಲಿ ಭೀತಿ ಬೇಡ : ಕೇಂದ್ರ

ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…

5 hours ago

IPL 2026 | ಮಾ.28ರಿಂದ ಪಂದ್ಯ ಆರಂಭ, ಬೆಂಗಳೂರಿನಲ್ಲಿ ಉದ್ಘಾಟನೆ, ಹೀಗಿದೆ ವೇಳಾಪಟ್ಟಿ

ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…

5 hours ago

“ಸಂಶೋಧನೆಗೆ AI ನಿಂದಲ್ಲ, ಸ್ವಂತಿಕೆಯಿಂದ ಕೂಡಿರಲಿ” : ಕುಲಪತಿ ಶರಣಪ್ಪ ಹಲಸೆ ಸಲಹೆ

ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…

5 hours ago

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…

6 hours ago

ಹಡುಗುಗಳ ಮೇಲೆ ದಾಳಿ : ಇಬ್ಬರು ಭಾರತೀಯರ ಸಾವು

ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…

6 hours ago

ಗುಂಡ್ಲುಪೇಟೆ | ಕತ್ತು ಕೂಯ್ದು ವ್ಯಕ್ತಿಯ ಬರ್ಬರ ಹತ್ಯೆ

ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…

7 hours ago