Andolana originals

ಓದುಗರ ಪತ್ರ: ಸುತ್ತೂರು ಜಾತ್ರೆ ಬಹುಮುಖ ಸಾಂಸ್ಕೃತಿಕ ಸಂಗಮ

ಸುತ್ತೂರು ಜಾತ್ರಾ ಮಹೋತ್ಸವ ನಿಜಕ್ಕೂ ಸಾಂಸ್ಕೃತಿಕ ಉತ್ಸವವೇ ಆಗಿದೆ. ಎಲ್ಲ ರೀತಿಯ ಮನರಂಜನೆಗಳ ಜೊತೆಗೆ ಮನೋವಿಕಾಸವನ್ನು ಮೂಡಿಸುವ ವಿಶಿಷ್ಟ ಜಾತ್ರೆ ಇದು. ಇಲ್ಲಿ ಏನಿದೆ ಏನಿಲ್ಲ ಎಂದು ಹೇಳುವಂತಿಲ್ಲ. ಎಲ್ಲ ಚಿತ್ರಕಲೆಗಳು, ನಾಟಕಗಳು, ದನಗಳ ಜಾತ್ರೆ, ಸಾಮೂಹಿಕ ವಿವಾಹ, ಧಾರ್ಮಿಕ ಗೋಷ್ಠಿಗಳು ಸೇರಿದಂತೆ ಎಲ್ಲ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗಳ ಮುಂದೆ ಜನಜಂಗುಳಿ ಇದ್ದೇ ಇರುತ್ತದೆ.

ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಅಪೂರ್ವ ಮಿಲನವೂ ಈ ಜಾತ್ರೆಯಲ್ಲಿ ಎದ್ದುಕಾಣುತ್ತಿತ್ತು. ಇದೆಲ್ಲವನ್ನೂ ಮೀರಿಸಿ ‘ಕೃಷಿ ಬ್ರಹ್ಮಾಂಡ’ ಜನರನ್ನು ಬಹಳಷ್ಟು ಆಕರ್ಷಿಸಿತ್ತು. ಸ್ವಾತಂತ್ರ್ಯಾನಂತರ ೧೯೫೦-೧೯೬೦ರ ದಶಕದಲ್ಲಿ ಕುಗ್ರಾಮಗಳಲ್ಲಿ ಶಾಲೆಗಳನ್ನು ಸ್ಥಾಪಿಸಿ ನಿರಕ್ಷರಕುಕ್ಷಿಗಳನ್ನು ಅಕ್ಷರಸ್ಥರನ್ನಾಗಿ ಮಾಡಿದ ಕೀರ್ತಿ ಸುತ್ತೂರು ಶ್ರೀ ಕ್ಷೇತ್ರಕ್ಕೆ ಸಲ್ಲುತ್ತದೆ.

೧೯೬೦ರ ದಶಕದಲ್ಲಿ ಹುಲ್ಲಹಳ್ಳಿ ಗ್ರಾಮದಲ್ಲಿ ಪ್ರೌಢಶಾಲೆ ತೆರೆದ ಸುತ್ತೂರು ಕ್ಷೇತ್ರದಿಂದಾಗಿ ಗ್ರಾಮದ ಹೆಣ್ಣುಮಕ್ಕಳು ಕನಿಷ್ಠ ಪ್ರೌಢಶಾಲೆ ಮೆಟ್ಟಿಲು ಏರುವುದು ಸಾಧ್ಯವಾಯಿತು. ಹೆಣ್ಣುಮಕ್ಕಳನ್ನು ಮನೆಯಿಂದ ಹೊರಗೆ ಕಳುಹಿಸದ ಕಾಲದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಶಾಲೆ ಆರಂಭಿಸಿದ ನಂತರ ಗ್ರಾಮೀಣ ಮಹಿಳೆಯರು ಶಿಕ್ಷಣವಂತರಾದರು.

ಹುಲ್ಲಹಳ್ಳಿಯಲ್ಲಿ ಆ ಕಾಲದಲ್ಲಿ ಪ್ರೌಢಶಾಲೆ ತೆರೆಯದೇ ಇದ್ದಿದ್ದರೆ ನನ್ನ ಶಿಕ್ಷಣ ಮಿಡ್ಲ್‌ಸ್ಕೂಲ್‌ಗೆ ಮೊಟಕಾಗಿ ಹೋಗುತ್ತಿತ್ತು. ಶಿಕ್ಷಣದಲ್ಲಿ ಕ್ರಾಂತಿ ಮಾಡಿದಂತೆ ಶ್ರೀ ಕ್ಷೇತ್ರದಿಂದಲೇ ಸ್ಥಾಪಿಸಿರುವ ‘ಕೃಷಿ ವಿಜ್ಞಾನ ಕೇಂದ್ರ’ದ ಮೂಲಕ ಅನ್ನದಾತರ ಬದುಕಿನಲ್ಲಿ ಭರವಸೆಯ ಬೆಳಕನ್ನು ಸುತ್ತೂರು ಕ್ಷೇತ್ರ ಮೂಡಿಸಲಿ. ಮುಂದಿನ ಜಾತ್ರೆಗಳಲ್ಲಿ ‘ಕೃಷಿಮೇಳ’ಕ್ಕೆ ಹೆಚ್ಚಿನ ಆದ್ಯತೆ ನೀಡಲಿ.

ಪ್ರಗತಿಪರ ರೈತರೊಡನೆ, ಕೃಷಿ ವಿಜ್ಞಾನಿಗಳೊಡನೆ ಚರ್ಚಾ ಕಾರ್ಯ ಕ್ರಮಗಳು ಇನ್ನಷ್ಟು ಹೆಚ್ಚಾಗಬೇಕು. ಕೃಷಿ ಬ್ರಹ್ಮಾಂಡದಲ್ಲಿ ಜನಸಾಮಾನ್ಯರಿಗೆ ಸ್ವಯಂ ಸೇವಕರ ಬದಲು ತಜ್ಞರು ಮಾಹಿತಿ ನೀಡುವಂತಾಗಬೇಕು.

-ರತ್ನ ಹುಲ್ಲಹಳ್ಳಿ, ವಕೀಲರು, ನಂಜನಗೂಡು

 

 

ಆಂದೋಲನ ಡೆಸ್ಕ್

Recent Posts

ಪ್ರಮಾಣ ವಚನ ಸಮಾರಂಭಕ್ಕೆ ವಿಜಯ್‌ ಪತ್ನಿ, ಮಕ್ಕಳು ಗೈರು

ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…

9 hours ago

ಮಡಿಕೇರಿ | ನೀರಿನಲ್ಲಿ ಮುಳುಗಿ ಯುವಕ ಸಾವು

ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…

9 hours ago

ಗಡಿ ಜಿಲ್ಲೆಯಲ್ಲೂ ತಮಿಳು ಸಿಎಂ ವಿಜಯ್‌ ಹವಾ!

ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…

9 hours ago

ಪ್ರಧಾನಿ ಸಂಚಾರ ಮಾರ್ಗದಲ್ಲಿ ಜಿಲಿಟೆನ್ ಕಡ್ಡಿ ಪತ್ತೆ ; ಕೆಲಕಾಲ ಆತಂಕ ; ಓರ್ವ ವಶಕ್ಕೆ

ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…

10 hours ago

ತಮಿಳುನಾಡು | ತಿರುಚಿರಾಪಳ್ಳಿ ಕ್ಷೇತ್ರಕ್ಕೆ ವಿಜಯ್ ರಾಜೀನಾಮೆ

ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…

11 hours ago

ಹುಣಸೂರು | ಭಾರೀ ಗಾಳಿ-ಮಳೆಗೆ ಹಾರಿಹೋದ ಚಾವಣಿ

ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…

11 hours ago