Andolana originals

ಓದುಗರ ಪತ್ರ: ತಿ.ನರಸೀಪುರ ರಸ್ತೆಗೆ ಸಿದ್ದರಾಮಯ್ಯ ಹೆಸರಿಡಬಹುದು

ಕೆಆರ್‌ಎಸ್ ರಸ್ತೆಗೆ ‘ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ಎಂಬ ಹೆಸರಿಡಬೇಕು ಎಂದು ಶಾಸಕ ಕೆ.ಹರೀಶ್ ಗೌಡ ಮೈಸೂರು ಮಹಾನಗರ ಪಾಲಿಕೆಗೆ ಸಲಹೆ ನೀಡಿದ್ದಾರೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಸಿದ್ದರಾಮಯ್ಯನವರು ಈ ಹಿಂದೆಯೂ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಂಜೂರಾತಿ ನೀಡಿ, ತಮ್ಮ ಆಡಳಿತಾವಧಿಯೊಳಗೆ ಆಸ್ಪತ್ರೆ ಕಾಮಗಾರಿಯನ್ನೂ ಪೂರ್ಣಗೊಳಿಸಿದರು. ಇದನ್ನು ಮೈಸೂರಿಗರು ಎಂದಿಗೂ ಮರೆತಿಲ್ಲ. ಕೆಆರ್‌ಎಸ್ ರಸ್ತೆಗೆ ‘ಪ್ರಿನ್ಸೆಸ್ ರಸ್ತೆ’ ಎಂಬ ಹೆಸರು ಅಧಿಕೃತವಾಗಿ ಇದೆಯೋ, ಇಲ್ಲವೋ ಎಂಬುದು ತಿಳಿಯದು. ಆದರೆ ನಾನು ಬಾಲಕನಾಗಿದ್ದಾಗ ಕ್ಷಯರೋಗ ಆಸ್ಪತ್ರೆಯಲ್ಲಿದ್ದ ನನ್ನ ತಾಯಿಗೆ ಊಟ ಕೊಟ್ಟು ಬರುವಾಗ ದಾರಿಯಲ್ಲಿ ಎಲ್ಲೋ ‘ಪ್ರಿನ್ಸೆಸ್ ರೋಡ್’ ಎಂಬ ಕಲ್ಲಿನ ಫಲಕವನ್ನು ನೋಡಿದ ನೆನಪು ಇದೆ. ಆದ್ದರಿಂದ ವಿವಾದಗಳನ್ನು ಸೃಷ್ಟಿಸಿಕೊಂಡು ಈ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಡುವ ಬದಲು ಸರ್ವ ಸಮ್ಮತಿ ಪಡೆದು ಹೆಸರಿಡುವುದು ಸೂಕ್ತ ಅನಿಸುತ್ತದೆ. ಮೈಸೂರು ಭಾಗದ ನೂರಾರು ರೈತರ ಬದುಕನ್ನು ಹಸನುಗೊಳಿಸಿದ ವರುಣ ನಾಲೆಯ ನಿರ್ಮಾಣಕ್ಕೆ ಡಿ.ದೇವರಾಜ ಅರಸುರವರು ದಾರಿ ಮಾಡಿಕೊಟ್ಟರಾದರೂ, ಅದು ಪೂರ್ಣಗೊಂಡು ನಾಲೆಯಲ್ಲಿ ನೀರು ಹರಿದು ಬರಲು ಕಾರಣರಾದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಅದೊಂದು ಐತಿಹಾಸಿಕ ಸಂಗತಿ. ಆದ್ದರಿಂದ ಮೈಸೂರು-ತಿ.ನರಸೀಪುರ ರಸ್ತೆ ವರುಣ ಕೆರೆಯನ್ನೂ ಸಂಪರ್ಕಿಸಲಿದ್ದು, ಆ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಟ್ಟರೆ ಯಾರೂ ಕೂಡ ಚಕಾರ ಎತ್ತುವುದಿಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ.

-ಸ.ರ.ಸುದರ್ಶನ, ಪ್ರಧಾನ ಕಾರ್ಯದರ್ಶಿ, ಕನ್ನಡ ಕ್ರಿಯಾ ಸಮಿತಿ, ಮೈಸೂರು.

ಆಂದೋಲನ ಡೆಸ್ಕ್

Recent Posts

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

25 mins ago

ವ್ಯಕ್ತಿಯ ಭೀಕರ ಕೊಲೆ : ಹಳೇ ವೈಷಮ್ಯ ಹಿನ್ನೆಲೆ ಪತಿ,ಪತ್ನಿಯಿಂದ ಕೃತ್ಯ

ಕೊಳ್ಳೇಗಾಲ : ಹಳೇ ವೈಷಮ್ಯ ಹಿನ್ನೆಲೆ ವ್ಯಕ್ತಿಯೋರ್ವನನ್ನು ಪತಿ ಪತ್ನಿ ಇಬ್ಬರು ಮಾರಕಾಸ್ತ್ರದಿಂದ ಹೊಡೆದು ಭೀಕರವಾಗಿ ಹತ್ಯೆಗೈದಿರುವ ಘಟನೆ ತಾಲ್ಲೂಕಿನ…

41 mins ago

ಬಂಧನ್‌ ಬ್ಯಾಂಕ್‌ನಲ್ಲಿ ಕನ್ನಡಿಗರ ವಜಾ : ಕರ್ನಾಟಕ ರಕ್ಷಣಾ ವೇದಿಕೆ ಖಂಡನೆ

ಮೈಸೂರು : ಬಂಧನ್ ಬ್ಯಾಂಕ್‌ನ ವಿದ್ಯಾರಣ್ಯಪುರಂ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ 30 ರಿಂದ 40ಜನ ಕನ್ನಡಿಗರನ್ನು ಏಕಾಏಕಿ ಕೆಲಸದಿಂದ ವಜಾ…

55 mins ago

ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಸಚಿವ ಎಚ್.ಡಿ.ರೇವಣ್ಣಗೆ ಬಿಗ್‌ ರಿಲೀಫ್!

ಬೆಂಗಳೂರು : ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ರೇವಣ್ಣ…

2 hours ago

ಹುಣಸೂರು ಚಿನ್ನಾಭರಣ ದರೋಡೆ ಪ್ರಕರಣ : ತನಿಖೆ ಕುರಿತು ಎಸ್ಪಿ ವಿಷ್ಣುವರ್ಧನ್ ಹೇಳಿದ್ದೇನು?

ಹುಣಸೂರು : ಸದಾ ಜನನಿಬಿಡ ಪ್ರದೇಶವಾದ ಹುಣಸೂರು ಬಸ್‌ ನಿಲ್ದಾಣ ಹಿಂಭಾಗದ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಜ್ಯುಯಲರಿ ಅಂಗಡಿಯಲ್ಲಿ…

2 hours ago

ಮುಡುಕುತೊರೆ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ: ಡಾ.ಹೆಚ್.ಸಿ.ಮಹದೇವಪ್ಪ

ತಿ.ನರಸೀಪುರ : ಮುಡುಕುತೊರೆಯು ಪ್ರಸಿದ್ಧ ಧಾರ್ಮಿಕ ಸ್ಥಳವಾಗಿದ್ದು, ಪ್ರವಾಸೋದ್ಯಮ ಕೇಂದ್ರವೂ ಆಗಿದೆ. ಈ ಹಿನ್ನೆಲೆಯಲ್ಲಿ ಈ ಭಾಗವನ್ನು ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು…

3 hours ago