ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ.
ಸಾರ್ವಜನಿಕರು ಕುತೂಹಲ ಭರಿತರಾಗಿ ಆ ಜೋಪಡಿಗೆ ಭೇಟಿ ನೀಡಿದರೆ ನಿಮಗೆ ಆ ಕಾಯಿಲೆ ಇದೆ ಈ ಕಾಯಿಲೆ ಇದೆ ಎಂದು ಹೇಳಿ ಅದರ ಉಪಶಮನಕ್ಕಾಗಿ ನಾವು ಈ ಗಿಡಮೂಲಿಕೆಯ ಔಷಧಿಯನ್ನು ನಿಮಗೆ ಕೊಡುತ್ತೇವೆ, ತಕ್ಷಣದಲ್ಲಿ ಪರಿಹಾರವಾಗುವುದೆಂದು ನಂಬಿಸುತ್ತಾರೆ. ಕೆಲವೊಮ್ಮೆ ಅಡ್ಡ ಪರಿಣಾಮ ಉಂಟಾದರೆ ಸ್ಥಳಾಂತರ ಮಾಡುವ ಇವರನ್ನು ಹುಡುಕಲು ಸಾಧ್ಯವಾಗುವುದಿಲ್ಲ.
ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಅನಽಕೃತವಾಗಿ ಚಿಕಿತ್ಸೆ ನೀಡುತ್ತಿರುವ ಇಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…
ಪ್ರತಿವರ್ಷ ಆಷಾಢ, ಶ್ರಾವಣ ಮಾಸದ ಸಮಯದಲ್ಲಿ ಎಲ್ಲ ಮಠಾಧೀಶರೂ ಚಾತುರ್ಮಾಸ ವ್ರತವನ್ನು ಆಚರಿಸುವುದು ವಾಡಿಕೆ. ಚಾತುರ್ಮಾಸ ಎಂದರೆ ನಾಲ್ಕು ತಿಂಗಳು.…
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವು ನಮ್ಮ ನಾಡಿನ ಸಾಂಸ್ಕೃತಿಕ ಅನನ್ಯತೆಯನ್ನು ಎತ್ತಿ ಹಿಡಿಯುತ್ತದೆ. ಕಲೆ, ಸಾಹಿತ್ಯ, ಸಂಸ್ಕೃತಿಯ ಮೂಲಕ…
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯು ಯಶಸ್ವಿಯಾಗಿ ಮೂರು ವರ್ಷಗಳನ್ನು ಪೂರೈಸಿದೆ. ಗ್ರಾಮೀಣ ಆರ್ಥಿಕತೆಗೆ ನವಚೈತನ್ಯ ತುಂಬಿದೆ. ಮಹಿಳೆಯರಿಗೆ ಆರ್ಥಿಕ…
ನವೀನ್ ಡಿಸೋಜ ಶೀತ, ಕೆಮ್ಮು, ಜ್ವರ ಸಂಬಂಧ ೩,೭೬೨ ಪ್ರಕರಣ ದಾಖಲು; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಮನವಿ ಮಡಿಕೇರಿ:…
ಮಹಾದೇಶ್ ಎಂ.ಗೌಡ ಹನೂರು: ಕುಡಿಯುವ ನೀರು, ಮೇವಿಗೂ ತೀವ್ರ ಹಾಹಾಕಾರ ಹನೂರು: ತಾಲ್ಲೂಕಿನಲ್ಲಿ ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದ್ದು,…