ಮೈಸೂರು ನಗರದ ಹೊರವಲಯಗಳಲ್ಲಿ ಹಾಗೂ ಕೆಲವೊಮ್ಮೆ ಮಧ್ಯಭಾಗದಲ್ಲಿ ಅನಧಿಕೃತವಾಗಿ ವೈದ್ಯ ಜೋಪಡಿಗಳು ತಲೆ ಎತ್ತುತ್ತಿವೆ. ಈ ನಾಟಿ ವೈದ್ಯರು ಆರೋಗ್ಯ ಇಲಾಖೆಯ ಪರವಾನಗಿಯನ್ನೂ ಪಡೆದಿರುವುದಿಲ್ಲ. ಅಲ್ಲಿ ಎಲ್ಲ ರೋಗಗಳಿಗೂ ಮದ್ದನ್ನು ನೀಡಲಾಗುವುದು ಎಂದು ಜಾಹೀರಾತು ಫಲಕಗಳನ್ನು ಪ್ರದರ್ಶನ ಮಾಡುತ್ತಾರೆ.
ಸಾರ್ವಜನಿಕರು ಕುತೂಹಲ ಭರಿತರಾಗಿ ಆ ಜೋಪಡಿಗೆ ಭೇಟಿ ನೀಡಿದರೆ ನಿಮಗೆ ಆ ಕಾಯಿಲೆ ಇದೆ ಈ ಕಾಯಿಲೆ ಇದೆ ಎಂದು ಹೇಳಿ ಅದರ ಉಪಶಮನಕ್ಕಾಗಿ ನಾವು ಈ ಗಿಡಮೂಲಿಕೆಯ ಔಷಧಿಯನ್ನು ನಿಮಗೆ ಕೊಡುತ್ತೇವೆ, ತಕ್ಷಣದಲ್ಲಿ ಪರಿಹಾರವಾಗುವುದೆಂದು ನಂಬಿಸುತ್ತಾರೆ. ಕೆಲವೊಮ್ಮೆ ಅಡ್ಡ ಪರಿಣಾಮ ಉಂಟಾದರೆ ಸ್ಥಳಾಂತರ ಮಾಡುವ ಇವರನ್ನು ಹುಡುಕಲು ಸಾಧ್ಯವಾಗುವುದಿಲ್ಲ.
ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಗಳು ಇತ್ತ ಗಮನ ಹರಿಸಿ ಅನಽಕೃತವಾಗಿ ಚಿಕಿತ್ಸೆ ನೀಡುತ್ತಿರುವ ಇಂಥ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು.
-ಎ.ಎಸ್.ಗೋವಿಂದೇಗೌಡ, ಅರೇನಹಳ್ಳಿ, ಪಿರಿಯಾಪಟ್ಟಣ ತಾ.
ಟಿ.ಕೆ.ಹರೀಶ್ (ಲೇಖಕರು ಹಿರಿಯ ಸಹಾಯಕ ನಿರ್ದೇಶಕರು) ಬಾಲ್ಯದಿಂದಲೇ ಶಿಕ್ಷಣದ ಜೊತೆಗೆ ಪರಿಸರ ಜಾಗೃತಿ ಮೂಡಿಸಬೇಕು ಮೈಸೂರು ತನ್ನದೇ ಆದ ಸುಂದರವಾದ…
ನೆರೆಯ ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್ ವಿಜಯ್ರವರು, ರಾಜ್ಯದ ಎಲ್ಲ ಖಾಸಗಿ ಶಾಲೆಗಳ ಪ್ರವೇಶಕ್ಕಾಗಿ ಸರ್ಕಾರ ನಿಗದಿಪಡಿಸಿರುವ ಶುಲ್ಕವನ್ನು ಶಾಲೆಯ…
ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ಪ್ರಯಾಣಿಕರಿಗೆ ತೊಂದರೆಯಾಗಿದೆ. ಶನಿವಾರ, ಭಾನುವಾರಗಳಂದು ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ…
ನವೀನ್ ಡಿಸೋಜ ವಿದ್ಯುತ್ ತಂತಿ ತಗುಲಿ ಬಾಲಕಿ ಗಂಭೀರವಾಗಿ ಗಾಯಗೊಂಡ ಘಟನೆ ಬೆನ್ನಲ್ಲೇ ಸಾರ್ವಜನಿಕರಿಗೆ ಅರಿವು ಮೂಡಿಸಲು ಮುಂದಾದ ಇಲಾಖೆ …
ದಿನೇಶ್ಕುಮಾರ್ ಎಚ್.ಎಸ್. ಮಧುಮೇಹಿಗಳಿಗೆ ಬಲು ಪ್ರೀತಿ; ಕೆಜಿ ನೇರಳೆ ಹಣ್ಣು ೨೦೦ ರೂ.ನಿಂದ ೨೫೦ ರೂ.ವರೆಗೆ ಮಾರಾಟ ಮೈಸೂರು: ಅಪಾರ…