Mysore
20
clear sky

Social Media

ಶುಕ್ರವಾರ, 06 ಫೆಬ್ರವರಿ 2026
Light
Dark

ಓದುಗರ ಪತ್ರ: ರೈತರ ಆತ್ಮಹತ್ಯೆ ತಡೆಗೆ ಕ್ರಮ ಕೈಗೊಳ್ಳಿ 

ಓದುಗರ ಪತ್ರ

ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ಸಿಆರ್‌ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.

ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದೇ ಬಹುಪಾಲು ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ. ರೈತ ತಾನು ಮಾಡಿದ ಸಾಲವನ್ನು ತೀರಿಸಲಾಗದೇ ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಿಂದ ನೂರಾರು ಕೋಟಿ ರೂ. ಸಾಲ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ ಯಾವೊಬ್ಬ ಉದ್ಯಮಿಯೂ ಇದುವರೆಗೂ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿಲ್ಲ. ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದೆಲ್ಲಾ ಭಾಷಣ ಮಾಡುವ ನಮ್ಮ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳು ರೈತರ ಆತ್ಮಹತ್ಯೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು, ರೈತರು ಬೆಳೆದ ಎಲ್ಲಾ ರೀತಿಯ ಬೆಳೆಗಳನ್ನು ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಂಡುಕೊಳ್ಳುವ ವ್ಯವಸ್ಥೆಯಾಗಬೇಕು, ಇದರಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದು.

-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು

Tags:
error: Content is protected !!