ಓದುಗರ ಪತ್ರ
ಕಳೆದ ಮೂರು ವರ್ಷಗಳ ಅವಧಿಯಲ್ಲಿ, ರಾಜ್ಯದಲ್ಲಿ ೨,೮೪೭ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್ಸಿಆರ್ಬಿ) ಇತ್ತೀಚೆಗೆ ವರದಿ ಮಾಡಿದೆ. ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು.
ಬೆಳೆಗಳಿಗೆ ಸೂಕ್ತ ಬೆಲೆ ಸಿಗದಿರುವುದೇ ಬಹುಪಾಲು ರೈತರ ಆತ್ಮಹತ್ಯೆಗೆ ಪ್ರಮುಖ ಕಾರಣವಾಗಿದೆ. ರೈತ ತಾನು ಮಾಡಿದ ಸಾಲವನ್ನು ತೀರಿಸಲಾಗದೇ ಮರ್ಯಾದೆಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ. ಆದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳಿಂದ ನೂರಾರು ಕೋಟಿ ರೂ. ಸಾಲ ಮಾಡಿ ಸರ್ಕಾರಕ್ಕೆ ಮೋಸ ಮಾಡಿದ ಯಾವೊಬ್ಬ ಉದ್ಯಮಿಯೂ ಇದುವರೆಗೂ ಆತ್ಮಹತ್ಯೆ ಮಾಡಿಕೊಂಡ ಉದಾಹರಣೆಗಳಿಲ್ಲ. ರೈತ ದೇಶದ ಬೆನ್ನೆಲುಬು, ಅನ್ನದಾತ ಎಂದೆಲ್ಲಾ ಭಾಷಣ ಮಾಡುವ ನಮ್ಮ ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳು ರೈತರ ಆತ್ಮಹತ್ಯೆಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು, ರೈತರು ಬೆಳೆದ ಎಲ್ಲಾ ರೀತಿಯ ಬೆಳೆಗಳನ್ನು ಸರ್ಕಾರ ಬೆಂಬಲ ಬೆಲೆಯಲ್ಲಿ ಕೊಂಡುಕೊಳ್ಳುವ ವ್ಯವಸ್ಥೆಯಾಗಬೇಕು, ಇದರಿಂದಾಗಿ ರೈತರ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಬಹುದು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಮಳೆ ಕೊರತೆ ಮುಂದುವರಿದಿದ್ದು, ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ. ಈ ಬಾರಿ ಮುಂಗಾರು ಕೊರತೆ…
ಸೋಮವಾರಪೇಟೆ: ತಾಲೂಕಿನ ಮಾದಾಪುರ ಹೋಬಳಿ ವ್ಯಾಪ್ತಿಯ ಕುಂಬಾರಗಡಿಗೆ ಗ್ರಾಮದಲ್ಲಿ ಕೌಟುಂಬಿಕ ಕಲಹ ಶಂಕೆಯಡಿ ವೃದ್ಧ ದಂಪತಿ ಶವವಾಗಿ ಪತ್ತೆಯಾಗಿದ್ದಾರೆ. ಕನ್ನಿಕಂಡ…
ಬೆಂಗಳೂರು: ಬಿಗ್ಬಾಸ್ ಮನೆಯಲ್ಲಿ ಇದ್ದ ಓಂ ಪ್ರಕಾಶ್ ರಾವ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿಂದೆ ಅಪಘಾತವೊಂದರಲ್ಲಿ ಓಂ ಪ್ರಕಾಶ್…
ನವದೆಹಲಿ: 2,000 ರೂ. ವರೆಗೆ ನಡೆಯುವ ಎಲ್ಲಾ UPI ವಹಿವಾಟುಗಳಿಗೆ ಶುಲ್ಕವಿಲ್ಲ. ಅಷ್ಟೇ ಅಲ್ಲ, RuPay ಡೆಬಿಟ್ ಕಾರ್ಡ್ ಮೂಲಕ…
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ…
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ…