ಓದುಗರ ಪತ್ರ
ಪ್ರಜಾಪ್ರಭುತ್ವ ಸರ್ಕಾರ ಎಂದರೆ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಜನರನ್ನು ಪರೋಕ್ಷವಾಗಿ ಪ್ರತಿನಿಧಿಸುವ ಒಂದು ಭಾಗ. ಅದರಂತೆ ಸಂಸತ್ತಿನಲ್ಲೇ ಆಗಲಿ, ವಿಧಾನಸಭೆಯಲ್ಲೇ ಆಗಲಿ, ಸಾಂವಿಧಾನಿಕ ಬಿಕ್ಕಟ್ಟು ಉಂಟಾಗದಂತೆ ಜನಪ್ರತಿನಿಧಿಗಳು ಜಾಗ್ರತೆ ವಹಿಸಬೇಕು. ತಮಿಳುನಾಡಿನ ರಾಜ್ಯಪಾಲರು ೧ ವರ್ಷದಿಂದ ಹಲವು ಮಸೂದೆಗಳನ್ನು ಸರ್ಕಾರಕ್ಕೆ ವಾಪಸ್ ಕಳುಹಿಸದೆ ಅಥವಾ ಅಂಕಿತ ಹಾಕದೆ ತಮ್ಮ ಬಳಿಯೇ ಉಳಿಸಿಕೊಂಡಿದ್ದರು. ಆದರೆ, ಈಗ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಮಿಳುನಾಡು ಜನತೆಯ ಗೆಲುವು ಎನ್ನಬಹುದು.
ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಸರ್ವೋಚ್ಚರು ಮತ್ತು ಅವರಿಂದ ಆಯ್ಕೆಯಾಗುವ ಜನಪ್ರತಿನಿಧಿಗಳ ಸರ್ಕಾರ, ದೇಶ ಅಥವಾ ರಾಜ್ಯದ ಕಾವಲುಗಾರರಾಗಿರುತ್ತಾರೆ. ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಲ್ಲಿನ ಜನರ ಮನಸ್ಥಿತಿಯಿಂದ ಅಲ್ಲಿನ ಜನರ ಪ್ರಾದೇಶಿಕ ಮತ್ತು ದೇಶದ ಒಳಿತು ಕೆಡುಕುಗಳಿರುತ್ತವೆ. ಇದಕ್ಕೆ ತಮಿಳುನಾಡು ಸಾಕ್ಷಿಯಾಗಿ ನಮ್ಮ ಕಣ್ಣಿನ ಮುಂದೆ ಇದೆ.
– ಅಭಿಷೇಕ್, ಶಂಕರಪುರ, ನಂಜನಗೂಡು
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…
ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…
ನವೀನ್ ಡಿಸೋಜ ಮುಂಗಾರು ಆರಂಭದಲ್ಲಿ ವಾಡಿಕೆ ಮಳೆಯಾಗದೆ ಆಯೋಜನೆಗೆ ಹಿಂದೇಟು; ಹಲವೆಡೆ ಕ್ರೀಡಾಕೂಟ ಮುಂದೂಡಿಕೆ ಮಡಿಕೇರಿ: ಪ್ರತಿವರ್ಷ ಮಳೆಗಾಲದಲ್ಲಿ ಕೊಡಗು…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಚುನಾವಣೆ ಗುರುವಾರ (ಆ.೨೦) ನಡೆಯಲಿದ್ದು, ಅಧಿಕಾರ…