ಓದುಗರ ಪತ್ರ
ಪ್ರಜಾಪ್ರಭುತ್ವ ಸರ್ಕಾರ ಎಂದರೆ ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ತಮ್ಮ ಜನರನ್ನು ಪರೋಕ್ಷವಾಗಿ ಪ್ರತಿನಿಧಿಸುವ ಒಂದು ಭಾಗ. ಅದರಂತೆ ಸಂಸತ್ತಿನಲ್ಲೇ ಆಗಲಿ, ವಿಧಾನಸಭೆಯಲ್ಲೇ ಆಗಲಿ, ಸಾಂವಿಧಾನಿಕ ಬಿಕ್ಕಟ್ಟು ಉಂಟಾಗದಂತೆ ಜನಪ್ರತಿನಿಧಿಗಳು ಜಾಗ್ರತೆ ವಹಿಸಬೇಕು. ತಮಿಳುನಾಡಿನ ರಾಜ್ಯಪಾಲರು ೧ ವರ್ಷದಿಂದ ಹಲವು ಮಸೂದೆಗಳನ್ನು ಸರ್ಕಾರಕ್ಕೆ ವಾಪಸ್ ಕಳುಹಿಸದೆ ಅಥವಾ ಅಂಕಿತ ಹಾಕದೆ ತಮ್ಮ ಬಳಿಯೇ ಉಳಿಸಿಕೊಂಡಿದ್ದರು. ಆದರೆ, ಈಗ ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ತಮಿಳುನಾಡು ಜನತೆಯ ಗೆಲುವು ಎನ್ನಬಹುದು.
ಏಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಸರ್ವೋಚ್ಚರು ಮತ್ತು ಅವರಿಂದ ಆಯ್ಕೆಯಾಗುವ ಜನಪ್ರತಿನಿಧಿಗಳ ಸರ್ಕಾರ, ದೇಶ ಅಥವಾ ರಾಜ್ಯದ ಕಾವಲುಗಾರರಾಗಿರುತ್ತಾರೆ. ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಲ್ಲಿನ ಜನರ ಮನಸ್ಥಿತಿಯಿಂದ ಅಲ್ಲಿನ ಜನರ ಪ್ರಾದೇಶಿಕ ಮತ್ತು ದೇಶದ ಒಳಿತು ಕೆಡುಕುಗಳಿರುತ್ತವೆ. ಇದಕ್ಕೆ ತಮಿಳುನಾಡು ಸಾಕ್ಷಿಯಾಗಿ ನಮ್ಮ ಕಣ್ಣಿನ ಮುಂದೆ ಇದೆ.
– ಅಭಿಷೇಕ್, ಶಂಕರಪುರ, ನಂಜನಗೂಡು
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…