ಓದುಗರ ಪತ್ರ
ಖ್ಯಾತ ಬಾಲಿವುಡ್ ನಟ ಅಮಿತಾಭ್ ಬಚ್ಚನ್ರವರು ಖಾಸಗಿ ಮನರಂಜನಾ ಟಿವಿ ಚಾನಲ್ನಲ್ಲಿ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ ಸೀಸನ್- ೧೭’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗುಜರಾತ್ ರಾಜ್ಯದ ಗಾಂಧಿ ನಗರದ ಐದನೇ ತರಗತಿ ವಿದ್ಯಾರ್ಥಿ ಇಶಿತ್ ಭಟ್ ವರ್ತನೆ ಬೇಸರ ತರಿಸಿತು.
ಮೊದಲಿಗೆ ಅಮಿತಾಭ್ ಬಚ್ಚನ್ರವರು ಕಾರ್ಯಕ್ರಮದ ನಿಯಮಗಳನ್ನು ಹೇಳಲು ಪ್ರಾರಂಭಿಸಿದಾಗ ಈ ನಿಯಮಗಳನ್ನು ನನಗೆ ಹೇಳಬೇಡಿ, ನನಗೆ ಎಲ್ಲಾ ಗೊತ್ತು ಎಂದು ಅಸಡ್ಡೆಯಿಂದ ಉತ್ತರಿಸಿದ್ದಾನೆ. ಒಂದು ಪ್ರಶ್ನೆಯನ್ನು ಕೇಳಿ ನಾಲ್ಕು ಪರ್ಯಾಯ ಉತ್ತರಗಳನ್ನು ನೀಡಲು ಪ್ರಾರಂಭಿಸಿದಾಗಲೂ ಅದೆಲ್ಲವೂ ಗೊತ್ತು ಎಂದು ಉಡಾ-ಯಿಂದ ಉತ್ತರಿಸಿದ್ದಾನೆ. ಕೊನೆಯ ಪ್ರಶ್ನೆಯಾದ ವಾಲ್ಮೀಕಿ ರಾಮಾಯಣದಲ್ಲಿ ಪ್ರಥಮ ಕಾಂಡ ಯಾವುದು ಎಂದು ಕೇಳಿದಾಗ ಆತ ಆಯ್ಕೆಗಳನ್ನು ನೀಡಿ ಎಂದು ಏರು ದನಿಯಲ್ಲಿ ಹೇಳಿ ಅಲವತ್ತುಕೊಂಡಿದ್ದಾನೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರಲ್ಲೂ ಅಮಿತಾಭ್ ಬಚ್ಚನ್ರಂತಹ ಹಿರಿಯ ನಟರ ಮುಂದೆ ಬಾಲಕನ ವರ್ತನೆ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನೂ ನೀಡದಿದ್ದರೆ ಏನಾಗುತ್ತದೆ ಎಂಬುದಕ್ಕೆ ಈ ಬಾಲಕನ ವರ್ತನೆ ನಿದರ್ಶನ .
ಪೋಷಕರು ತಮ್ಮ ಮಕ್ಕಳನ್ನು ಪ್ರೀತಿಸಬೇಕು ಹಾಗೆಯೇ ತಪ್ಪು ಮಾಡಿದಾಗ, ಉದ್ಧಟತನದಿಂದ ವರ್ತಿಸಿದಾಗ ದಂಡಿಸಬೇಕು. ವಿದ್ಯೆಯ ಜತೆ ವಿನಯವನ್ನೂ ಕಲಿಸಿದಾಗ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ.
-ಪುಂಡಲೀಕ ಲಮಾಣಿ, ಮೈಸೂರು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್ಮೆಂಟ್ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…