Andolana originals

ಓದುಗರ ಪತ್ರ:  ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನೂ ಕಲಿಸಿ

ಖ್ಯಾತ ಬಾಲಿವುಡ್ ನಟ ಅಮಿತಾಭ್ ಬಚ್ಚನ್‌ರವರು ಖಾಸಗಿ ಮನರಂಜನಾ ಟಿವಿ ಚಾನಲ್‌ನಲ್ಲಿ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ ಪತಿ ಸೀಸನ್- ೧೭’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಗುಜರಾತ್ ರಾಜ್ಯದ ಗಾಂಧಿ ನಗರದ ಐದನೇ ತರಗತಿ ವಿದ್ಯಾರ್ಥಿ ಇಶಿತ್ ಭಟ್ ವರ್ತನೆ ಬೇಸರ ತರಿಸಿತು.

ಮೊದಲಿಗೆ ಅಮಿತಾಭ್ ಬಚ್ಚನ್‌ರವರು ಕಾರ್ಯಕ್ರಮದ ನಿಯಮಗಳನ್ನು ಹೇಳಲು ಪ್ರಾರಂಭಿಸಿದಾಗ ಈ ನಿಯಮಗಳನ್ನು ನನಗೆ ಹೇಳಬೇಡಿ, ನನಗೆ ಎಲ್ಲಾ ಗೊತ್ತು ಎಂದು ಅಸಡ್ಡೆಯಿಂದ ಉತ್ತರಿಸಿದ್ದಾನೆ. ಒಂದು ಪ್ರಶ್ನೆಯನ್ನು ಕೇಳಿ ನಾಲ್ಕು ಪರ್ಯಾಯ ಉತ್ತರಗಳನ್ನು ನೀಡಲು ಪ್ರಾರಂಭಿಸಿದಾಗಲೂ ಅದೆಲ್ಲವೂ ಗೊತ್ತು ಎಂದು ಉಡಾ-ಯಿಂದ ಉತ್ತರಿಸಿದ್ದಾನೆ. ಕೊನೆಯ ಪ್ರಶ್ನೆಯಾದ ವಾಲ್ಮೀಕಿ ರಾಮಾಯಣದಲ್ಲಿ ಪ್ರಥಮ ಕಾಂಡ ಯಾವುದು ಎಂದು ಕೇಳಿದಾಗ ಆತ ಆಯ್ಕೆಗಳನ್ನು ನೀಡಿ ಎಂದು ಏರು ದನಿಯಲ್ಲಿ ಹೇಳಿ ಅಲವತ್ತುಕೊಂಡಿದ್ದಾನೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅದರಲ್ಲೂ ಅಮಿತಾಭ್ ಬಚ್ಚನ್‌ರಂತಹ ಹಿರಿಯ ನಟರ ಮುಂದೆ ಬಾಲಕನ ವರ್ತನೆ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವನ್ನೂ ನೀಡದಿದ್ದರೆ ಏನಾಗುತ್ತದೆ ಎಂಬುದಕ್ಕೆ ಈ ಬಾಲಕನ ವರ್ತನೆ ನಿದರ್ಶನ .

ಪೋಷಕರು ತಮ್ಮ ಮಕ್ಕಳನ್ನು ಪ್ರೀತಿಸಬೇಕು ಹಾಗೆಯೇ ತಪ್ಪು ಮಾಡಿದಾಗ, ಉದ್ಧಟತನದಿಂದ ವರ್ತಿಸಿದಾಗ ದಂಡಿಸಬೇಕು. ವಿದ್ಯೆಯ ಜತೆ ವಿನಯವನ್ನೂ ಕಲಿಸಿದಾಗ ಮಾತ್ರ ಮಕ್ಕಳು ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ.

-ಪುಂಡಲೀಕ ಲಮಾಣಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

25 mins ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

33 mins ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

5 hours ago