ಓದುಗರ ಪತ್ರ
ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಿದೆ. ಶಿಕ್ಷಕರ ವರ್ಗಾವಣೆಗೂ ಮುನ್ನ ಆಯಾ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ, ಅಗತ್ಯ ಇರುವ ಶಾಲೆಗಳಿಗೆ ಶಿಕ್ಷಕರನ್ನು ಮರು ಹೊಂದಾಣಿಕೆ ಮಾಡಲಾಗುತ್ತಿದೆ.
ಹೆಚ್ಚುವರಿ ಶಿಕ್ಷಕರನ್ನು ಶಾಲೆಯಲ್ಲಿ ಗುರುತಿಸುವಾಗ ಆಯಾ ಶಾಲೆಗಳಲ್ಲಿ ಕಳೆದ ಡಿಸೆಂಬರ್ ೨೦೨೪ರ ಅಂತ್ಯಕ್ಕೆ ಇದ್ದ ಮಕ್ಕಳ ದಾಖಲಾತಿಯನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಪಟ್ಟಿ ತಯಾರಿಸಲು ಸರ್ಕಾರ ಮುಂದಾಗಿದೆ. ಅದರಂತೆ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ (೧ರಿಂದ ೫) ೧೧ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಇಬ್ಬರು ಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (೬ ರಿಂದ ೭) ೧೧ ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಇಬ್ಬರು ಶಿಕ್ಷಕರು, ಒಂದು ವೇಳೆ ೧೧ಕ್ಕಿಂತ ಮಕ್ಕಳ ಸಂಖ್ಯೆ ಕಡಿಮೆ ಇದ್ದರೆ ಒಬ್ಬರೇ ಶಿಕ್ಷಕರು ಎಂಬ ನಿಯಮ ರೂಪಿಸಲಾಗಿದೆ. ಆದರೆ ಪ್ರಸ್ತುತ ಜೂನ್ ತಿಂಗಳ ದಾಖಲಾತಿ ಸಮಯದಲ್ಲಿ ಮಕ್ಕಳ ಸಂಖ್ಯೆ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗುವುದರಿಂದ, ಹೆಚ್ಚುವರಿ ಶಿಕ್ಷಕರ ಪ್ರಕ್ರಿಯೆಗೆ ಮಾನದಂಡವಾಗಿರುವ ಕಳೆದ ವರ್ಷದ ೨೦೨೪ ಡಿಸೆಂಬರ್ ತಿಂಗಳ ಅಂತ್ಯದ ಮಕ್ಕಳ ದಾಖಲಾತಿಯನ್ನು ಕೈಬಿಟ್ಟು, ಪ್ರಸ್ತುತ ಶೈಕ್ಷಣಿಕ ವರ್ಷದ ಜೂನ್ ತಿಂಗಳ ಮಕ್ಕಳ ದಾಖಲಾತಿಯನ್ನು ಮಾನದಂಡವಾಗಿ ಇಟ್ಟುಕೊಂಡು ಅದರಂತೆ ಸರ್ಕಾರ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿದರೆ ರಾಜ್ಯದ ನಾನಾ ಕಡೆ ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚುವರಿ ಪ್ರಕ್ರಿಯೆಯಿಂದ ದೂರ ಉಳಿದು ಆಯಾ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ನೆರವಾದಂತಾಗುತ್ತದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…
ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…
ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…
ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್ಗೆ ಗ್ಯಾಸ್ ತುಂಬುವಾಗ ಹೀಲಿಯಂ ಸಿಲಿಂಡರ್ ಸ್ಫೋಟಗೊಂಡು…
ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…