Andolana originals

ಓದುಗರ ಪತ್ರ: ಶಿಕ್ಷಕರ ವರ್ಗಾವಣೆ ; ಮಾನದಂಡ ಬದಲಾಗಲಿ

ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಿದೆ. ಶಿಕ್ಷಕರ ವರ್ಗಾವಣೆಗೂ ಮುನ್ನ ಆಯಾ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ, ಅಗತ್ಯ ಇರುವ ಶಾಲೆಗಳಿಗೆ ಶಿಕ್ಷಕರನ್ನು ಮರು ಹೊಂದಾಣಿಕೆ ಮಾಡಲಾಗುತ್ತಿದೆ.

ಹೆಚ್ಚುವರಿ ಶಿಕ್ಷಕರನ್ನು ಶಾಲೆಯಲ್ಲಿ ಗುರುತಿಸುವಾಗ ಆಯಾ ಶಾಲೆಗಳಲ್ಲಿ ಕಳೆದ ಡಿಸೆಂಬರ್ ೨೦೨೪ರ ಅಂತ್ಯಕ್ಕೆ ಇದ್ದ ಮಕ್ಕಳ ದಾಖಲಾತಿಯನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಪಟ್ಟಿ ತಯಾರಿಸಲು ಸರ್ಕಾರ ಮುಂದಾಗಿದೆ. ಅದರಂತೆ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ (೧ರಿಂದ ೫) ೧೧ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಇಬ್ಬರು ಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (೬ ರಿಂದ ೭) ೧೧ ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಇಬ್ಬರು ಶಿಕ್ಷಕರು, ಒಂದು ವೇಳೆ ೧೧ಕ್ಕಿಂತ ಮಕ್ಕಳ ಸಂಖ್ಯೆ ಕಡಿಮೆ ಇದ್ದರೆ ಒಬ್ಬರೇ ಶಿಕ್ಷಕರು ಎಂಬ ನಿಯಮ ರೂಪಿಸಲಾಗಿದೆ. ಆದರೆ ಪ್ರಸ್ತುತ ಜೂನ್ ತಿಂಗಳ ದಾಖಲಾತಿ ಸಮಯದಲ್ಲಿ ಮಕ್ಕಳ ಸಂಖ್ಯೆ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗುವುದರಿಂದ, ಹೆಚ್ಚುವರಿ ಶಿಕ್ಷಕರ ಪ್ರಕ್ರಿಯೆಗೆ ಮಾನದಂಡವಾಗಿರುವ ಕಳೆದ ವರ್ಷದ ೨೦೨೪ ಡಿಸೆಂಬರ್ ತಿಂಗಳ ಅಂತ್ಯದ ಮಕ್ಕಳ ದಾಖಲಾತಿಯನ್ನು ಕೈಬಿಟ್ಟು, ಪ್ರಸ್ತುತ ಶೈಕ್ಷಣಿಕ ವರ್ಷದ ಜೂನ್ ತಿಂಗಳ ಮಕ್ಕಳ ದಾಖಲಾತಿಯನ್ನು ಮಾನದಂಡವಾಗಿ ಇಟ್ಟುಕೊಂಡು ಅದರಂತೆ ಸರ್ಕಾರ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿದರೆ ರಾಜ್ಯದ ನಾನಾ ಕಡೆ ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚುವರಿ ಪ್ರಕ್ರಿಯೆಯಿಂದ ದೂರ ಉಳಿದು ಆಯಾ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ನೆರವಾದಂತಾಗುತ್ತದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

4 hours ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

5 hours ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

6 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

11 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

18 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

18 hours ago