Andolana originals

ಓದುಗರ ಪತ್ರ: ಶಿಕ್ಷಕರ ವರ್ಗಾವಣೆ ; ಮಾನದಂಡ ಬದಲಾಗಲಿ

ರಾಜ್ಯ ಸರ್ಕಾರ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸಿದೆ. ಶಿಕ್ಷಕರ ವರ್ಗಾವಣೆಗೂ ಮುನ್ನ ಆಯಾ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ, ಅಗತ್ಯ ಇರುವ ಶಾಲೆಗಳಿಗೆ ಶಿಕ್ಷಕರನ್ನು ಮರು ಹೊಂದಾಣಿಕೆ ಮಾಡಲಾಗುತ್ತಿದೆ.

ಹೆಚ್ಚುವರಿ ಶಿಕ್ಷಕರನ್ನು ಶಾಲೆಯಲ್ಲಿ ಗುರುತಿಸುವಾಗ ಆಯಾ ಶಾಲೆಗಳಲ್ಲಿ ಕಳೆದ ಡಿಸೆಂಬರ್ ೨೦೨೪ರ ಅಂತ್ಯಕ್ಕೆ ಇದ್ದ ಮಕ್ಕಳ ದಾಖಲಾತಿಯನ್ನು ಮಾನದಂಡವನ್ನಾಗಿ ಇಟ್ಟುಕೊಂಡು ಪ್ರಸ್ತುತ ಹೆಚ್ಚುವರಿ ಶಿಕ್ಷಕರ ಪಟ್ಟಿ ತಯಾರಿಸಲು ಸರ್ಕಾರ ಮುಂದಾಗಿದೆ. ಅದರಂತೆ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ (೧ರಿಂದ ೫) ೧೧ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಇಬ್ಬರು ಶಿಕ್ಷಕರು, ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (೬ ರಿಂದ ೭) ೧೧ ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಇಬ್ಬರು ಶಿಕ್ಷಕರು, ಒಂದು ವೇಳೆ ೧೧ಕ್ಕಿಂತ ಮಕ್ಕಳ ಸಂಖ್ಯೆ ಕಡಿಮೆ ಇದ್ದರೆ ಒಬ್ಬರೇ ಶಿಕ್ಷಕರು ಎಂಬ ನಿಯಮ ರೂಪಿಸಲಾಗಿದೆ. ಆದರೆ ಪ್ರಸ್ತುತ ಜೂನ್ ತಿಂಗಳ ದಾಖಲಾತಿ ಸಮಯದಲ್ಲಿ ಮಕ್ಕಳ ಸಂಖ್ಯೆ ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗುವುದರಿಂದ, ಹೆಚ್ಚುವರಿ ಶಿಕ್ಷಕರ ಪ್ರಕ್ರಿಯೆಗೆ ಮಾನದಂಡವಾಗಿರುವ ಕಳೆದ ವರ್ಷದ ೨೦೨೪ ಡಿಸೆಂಬರ್ ತಿಂಗಳ ಅಂತ್ಯದ ಮಕ್ಕಳ ದಾಖಲಾತಿಯನ್ನು ಕೈಬಿಟ್ಟು, ಪ್ರಸ್ತುತ ಶೈಕ್ಷಣಿಕ ವರ್ಷದ ಜೂನ್ ತಿಂಗಳ ಮಕ್ಕಳ ದಾಖಲಾತಿಯನ್ನು ಮಾನದಂಡವಾಗಿ ಇಟ್ಟುಕೊಂಡು ಅದರಂತೆ ಸರ್ಕಾರ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿದರೆ ರಾಜ್ಯದ ನಾನಾ ಕಡೆ ಸರ್ಕಾರಿ ಶಾಲೆಗಳಲ್ಲಿರುವ ಶಿಕ್ಷಕರು ಹೆಚ್ಚುವರಿ ಪ್ರಕ್ರಿಯೆಯಿಂದ ದೂರ ಉಳಿದು ಆಯಾ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಲು ನೆರವಾದಂತಾಗುತ್ತದೆ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

9 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

22 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

22 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

23 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

23 hours ago