ಓದುಗರ ಪತ್ರ
ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಮತ್ತು ಅಖಿಲ ಭಾರತ ವಿಮಾ ನೌಕರರ ಸಂಘದ ಅಮೃತ ಮಹೋತ್ಸವದ ವರ್ಷಾಚರಣೆ ಪ್ರಯುಕ್ತ ‘ಸಂವಿಧಾನ ಒಂದು-ಜೀವಂತ ದಸ್ತಾವೇಜು’ ಕುರಿತು, ಹಮ್ಮಿಕೊಂಡಿದ್ದ ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಮೈಸೂರು ವಿವಿ ಗಾಂಧಿ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಎಸ್.ನರೇಂದ್ರ ಕುಮಾರ್ ಅವರು, ಯಾವುದೇ ಅಸಮಾನತೆ ತೊಡೆಯಲು ಮಕ್ಕಳಿಗೆ ಮನೆಗಳಲ್ಲಿಯೇ ಸಂವಿಧಾನ ಕುರಿತು ತಿಳಿವಳಿಕೆ ನೀಡುವುದು ಅಗತ್ಯ ಎಂದು ಹೇಳಿರುವುದು ಶ್ಲಾಘನೀಯ.
ಸಂವಿಧಾನದ ಮೂಲಕ ದೇಶದಲ್ಲಿ ಮಾನವೀಯತೆ, ಸಮಾನತೆ ಮತ್ತು ಭ್ರಾತೃತ್ವ ಸೃಷ್ಟಿಸಲು ಸಾಧ್ಯವಾಗಿದೆ. ಸಂವಿಧಾನ ಜಾರಿಯಾದ ದಿನ ಕುವೆಂಪು ಅವರು ಸಂವಿಧಾನ ಕುರಿತು ‘ಶ್ರೀಸಾಮಾನ್ಯನಿಗೆ ದೀಕ್ಷಾ ಗೀತೆ’ ಕವಿತೆಯಲ್ಲಿ ‘ಇದು ಸರ್ವರ ಕಾಲ’ ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿಸಿದ ಡಾ.ಎಸ್.ನರೇಂದ್ರಕುಮಾರ್ ಅವರ ಮಾತುಗಳು ಮೆಚ್ಚುವಂತಹದ್ದು.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…