Andolana originals

ಓದುಗರ ಪತ್ರ: ಕಲಾಮಂದಿರವೇನು ಧಾರ್ಮಿಕ ಸ್ಥಳವೇ?

ಕಳೆದ ಗುರುವಾರ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರನ್ನು ಅಭಿನಂದಿಸಲು ಮೈಸೂರಿನ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೋಜನಕ್ಕೆ ಮಾಂಸಾಹಾರವನ್ನು ಉಣಬಡಿಸಿರುವುದಾಗಿ ವರದಿಯಾಗಿದ್ದು, ಇದಕ್ಕೆ ಕೆಲವರಿಂದ ಆಕ್ಷೇಪಗಳೂ ಕೇಳಿಬರುತ್ತಿವೆ.

ಕಲಾಮಂದಿರ ಸಭಾಂಗಣದ ಒಳಾವರಣದಲ್ಲಿ ಯಾವುದೇ ರೀತಿಯ ಭೋಜನ ಅಥವಾ ಆಹಾರ ನೀಡುವ ವ್ಯವಸ್ಥೆಯ ವಿರುದ್ಧ ಹಿಂದೆಯೂ ಆಕ್ಷೇಪ ವ್ಯಕ್ತವಾಗಿತ್ತು. ಶುಚಿತ್ವದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ ಒಳಾವರಣದ ಬದಲಿಗೆ ಹೊರ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲು ಸೂಚಿಸಲಾಗಿತ್ತು. ಕಲಾಮಂದಿರ ರಾಜ್ಯದ ಸಂಸ್ಕೃತಿ ಇಲಾಖೆಗೆ ಸೇರಿದ್ದು, ಇದು ಈಗಾಗಲೇ ಮೂರೂ ದಿಕ್ಕುಗಳಿಂದ ಈ ಸಂಪ್ರದಾಯವಾದಿಗಳ ದಾಳಿಯಿಂದ
ಸಂಕುಚಿತವಾಗಿರುವ ‘ಸಂಸ್ಕೃತಿ’ ಎಂಬ ಪದವನ್ನು ಇಲ್ಲಿಗೂ ವಿಸ್ತರಿಸಿ, ಈ ಆವರಣದಲ್ಲಿ, ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಮಾಂಸಾಹಾರ ಒದಗಿಸುವುದು ಸೂಕ್ತವಲ್ಲ ಎಂದು ಹೇಳುವುದು, ಬಹು ಸಂಸ್ಕೃತಿಗೆ ವಿರುದ್ಧವಾಗಿದೆ. ಇಲ್ಲಿನ ಬಹುತೇಕ ಕಾರ್ಯಕ್ರಮಗಳಿಗೆ ಎಲ್ಲ ಸಮುದಾಯದವರು ಬರುವುದರಿಂದಲೇ ರುಚಿಸುವ ಆಹಾರ ನೀಡುವ ವಿಶಾಲ ಮನೋಭಾವ ನಮ್ಮೊಳಗಿರಬೇಕಲ್ಲವೇ? ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಸಹಭೋಜನ’ದ ಕರೆ ಕೇವಲ ಒಟ್ಟಿಗೆ ಕುಳಿತು ಊಟ ಮಾಡುವುದಕ್ಕೆ ಸೀಮಿತವಾಗಿರುವುದಲ್ಲ. ಅದರ ಹಿಂದೆ ಎಲ್ಲ ವಿಧದ ಆಹಾರಗಳನ್ನೂ ಒಟ್ಟಿಗೆ ಕುಳಿತು ಸೇವಿಸುವ ಒಂದು ವಿಶಾಲ ಚಿಂತನ ಇದೆ.

ಇಷ್ಟಕ್ಕೂ ಕಲಾಮಂದಿರದಲ್ಲಿ ಮಾಂಸಾಹಾರ ನೀಡುವುದರಿಂದ ಯಾವ/ಯಾರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ? ಸಸ್ಯಾಹಾರವನ್ನಷ್ಟೇ ನೀಡಬೇಕು ಎಂದು ಶಾಸನ ವಿಧಿಸಲು ಅದೇನು ಧಾರ್ಮಿಕ ಕ್ಷೇತ್ರವೇ? ಅದು ನಾಡಿನ ಸಾಂಸ್ಕೃತಿಕ ವೈವಿಧ್ಯತೆಗೆ ಬೌದ್ಧಿಕ ನೆಲೆ ಒದಗಿಸುವ ಒಂದು ಜಾಗ. ಅಲ್ಲಿ ಬಹುಸಂಸ್ಕೃತಿಯ ಚಿಂತನೆಗಳು ಮೊಳೆಯಬೇಕೇ ಹೊರತು ಸಮಾಜವನ್ನು ಹಿಂದಕ್ಕೆ ಎಳೆದೊಯ್ಯುವ ಮನಸ್ಥಿತಿಯನ್ನು ಸೃಷ್ಟಿಸುವಂತಾಗಬಾರದು.
-ನಾ.ದಿವಾಕರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೇರಳದಲ್ಲಿ ಉಚಿತ ಶಿಕ್ಷಣ ಶ್ಲಾಘನೀಯ

ಇಂದು ಶಿಕ್ಷಣ ಎನ್ನುವುದು ವ್ಯಾಪಾರೀಕರಣವಾಗಿದ್ದು, ಪೋಷಕರು ದುಡಿಮೆಯ ಬಹುತೇಕ ಆದಾಯವನ್ನು ಮಕ್ಕಳ ಶಿಕ್ಷಣಕ್ಕೆ ಖರ್ಚು ಮಾಡುವುದು ಅನಿವಾರ್ಯವಾಗಿದೆ. ಕೇರಳ ಸರ್ಕಾರ…

4 mins ago

ಓದುಗರ ಪತ್ರ: ಬಸ್ ತಂಗುದಾಣ ನಿರ್ಮಿಸಿ

ನಂಜನಗೂಡು ತಾಲ್ಲೂಕು ಬೆಳಗುಂದ ಗ್ರಾಮದಲ್ಲಿ ಬಸ್ ತಂಗುದಾಣವಿಲ್ಲದೆ ಪ್ರತಿದಿನ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲಿಯೇ…

12 mins ago

ಓದುಗರ ಪತ್ರ: ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ ಸ್ವಾಗತಾರ್ಹ

ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಬಸ್‌ಗಳ ಮೇಲೆ ಅಳವಡಿಸಿರುವ ಗುಟ್ಕಾ ಹಾಗೂ ತಂಬಾಕು…

23 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: 24 ರೂ. ಹಿಡಿದು ಮುಂಬೈಗೆ ಬಂದ ಮುನ್ನಾ ಈಗ ಸೆಲೆಬ್ರೆಟಿ ಫೋಟೋಗ್ರಾಫರ್!

ಪ್ರಸಿದ್ಧ ಬಾಲಿವುಡ್ ತಾರೆಗಳ ಜೊತೆಯಲ್ಲಿ ಕೆಲಸ ಮಾಡಿದ ಅನುಭವ ಮುಂಬೈ ಎಂಬ ಮಾಯಾನಗರಿಗೆ ಪ್ರತಿ ದಿನ ಬದುಕು ಹುಡುಕಿಕೊಂಡು, ಕನಸುಗಳನ್ನು…

3 hours ago

ಟಿ-20 ವಿಶ್ವಕಪ್: ಕೌಂಟ್‌ಡೌನ್ ಶುರು

ಆರ್.ಎಲ್.ಮಂಜುನಾಥ್ ಮೈಸೂರು: ಕ್ರಿಕೆಟ್ ಪ್ರಿಯರಿಗೆ ಈಗ ಹಬ್ಬವೋ ಹಬ್ಬ. ಅದರಲ್ಲೂ ಕ್ರಿಕೆಟ್‌ನ ಭಾಷ್ಯವನ್ನೇ ಬದಲಿಸುತ್ತಿರುವ ಟಿ-೨೦ ಪಂದ್ಯಗಳು ಎಲ್ಲರಿಗೂ ಅಚ್ಚುಮೆಚ್ಚು.…

3 hours ago

ಕೊಡಗು ಜಿಲ್ಲೆಯಲ್ಲಿ ಹೆಚ್ಚುತ್ತಿದೆ ಸೈಬರ್ ವಂಚನೆ..!

ಕೃಷ್ಣ ಸಿದ್ದಾಪುರ ಪೊಲೀಸರು ಜಾಗೃತಿ ಮೂಡಿಸಿದರೂ ಎಚ್ಚೆತ್ತುಕೊಳ್ಳದ ಜನರು ಹೂಡಿಕೆ ಹಣ ದೋಚುತ್ತಿರುವ ಖದೀಮರು  ಸಿದ್ದಾಪುರ: ಸೈಬರ್ ಅಪರಾಧ ಪ್ರಕರಣಗಳ…

3 hours ago