Andolana originals

ಓದುಗರ ಪತ್ರ: ಕಲಾಮಂದಿರವೇನು ಧಾರ್ಮಿಕ ಸ್ಥಳವೇ?

ಕಳೆದ ಗುರುವಾರ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರನ್ನು ಅಭಿನಂದಿಸಲು ಮೈಸೂರಿನ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೋಜನಕ್ಕೆ ಮಾಂಸಾಹಾರವನ್ನು ಉಣಬಡಿಸಿರುವುದಾಗಿ ವರದಿಯಾಗಿದ್ದು, ಇದಕ್ಕೆ ಕೆಲವರಿಂದ ಆಕ್ಷೇಪಗಳೂ ಕೇಳಿಬರುತ್ತಿವೆ.

ಕಲಾಮಂದಿರ ಸಭಾಂಗಣದ ಒಳಾವರಣದಲ್ಲಿ ಯಾವುದೇ ರೀತಿಯ ಭೋಜನ ಅಥವಾ ಆಹಾರ ನೀಡುವ ವ್ಯವಸ್ಥೆಯ ವಿರುದ್ಧ ಹಿಂದೆಯೂ ಆಕ್ಷೇಪ ವ್ಯಕ್ತವಾಗಿತ್ತು. ಶುಚಿತ್ವದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ ಒಳಾವರಣದ ಬದಲಿಗೆ ಹೊರ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲು ಸೂಚಿಸಲಾಗಿತ್ತು. ಕಲಾಮಂದಿರ ರಾಜ್ಯದ ಸಂಸ್ಕೃತಿ ಇಲಾಖೆಗೆ ಸೇರಿದ್ದು, ಇದು ಈಗಾಗಲೇ ಮೂರೂ ದಿಕ್ಕುಗಳಿಂದ ಈ ಸಂಪ್ರದಾಯವಾದಿಗಳ ದಾಳಿಯಿಂದ
ಸಂಕುಚಿತವಾಗಿರುವ ‘ಸಂಸ್ಕೃತಿ’ ಎಂಬ ಪದವನ್ನು ಇಲ್ಲಿಗೂ ವಿಸ್ತರಿಸಿ, ಈ ಆವರಣದಲ್ಲಿ, ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಮಾಂಸಾಹಾರ ಒದಗಿಸುವುದು ಸೂಕ್ತವಲ್ಲ ಎಂದು ಹೇಳುವುದು, ಬಹು ಸಂಸ್ಕೃತಿಗೆ ವಿರುದ್ಧವಾಗಿದೆ. ಇಲ್ಲಿನ ಬಹುತೇಕ ಕಾರ್ಯಕ್ರಮಗಳಿಗೆ ಎಲ್ಲ ಸಮುದಾಯದವರು ಬರುವುದರಿಂದಲೇ ರುಚಿಸುವ ಆಹಾರ ನೀಡುವ ವಿಶಾಲ ಮನೋಭಾವ ನಮ್ಮೊಳಗಿರಬೇಕಲ್ಲವೇ? ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಸಹಭೋಜನ’ದ ಕರೆ ಕೇವಲ ಒಟ್ಟಿಗೆ ಕುಳಿತು ಊಟ ಮಾಡುವುದಕ್ಕೆ ಸೀಮಿತವಾಗಿರುವುದಲ್ಲ. ಅದರ ಹಿಂದೆ ಎಲ್ಲ ವಿಧದ ಆಹಾರಗಳನ್ನೂ ಒಟ್ಟಿಗೆ ಕುಳಿತು ಸೇವಿಸುವ ಒಂದು ವಿಶಾಲ ಚಿಂತನ ಇದೆ.

ಇಷ್ಟಕ್ಕೂ ಕಲಾಮಂದಿರದಲ್ಲಿ ಮಾಂಸಾಹಾರ ನೀಡುವುದರಿಂದ ಯಾವ/ಯಾರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ? ಸಸ್ಯಾಹಾರವನ್ನಷ್ಟೇ ನೀಡಬೇಕು ಎಂದು ಶಾಸನ ವಿಧಿಸಲು ಅದೇನು ಧಾರ್ಮಿಕ ಕ್ಷೇತ್ರವೇ? ಅದು ನಾಡಿನ ಸಾಂಸ್ಕೃತಿಕ ವೈವಿಧ್ಯತೆಗೆ ಬೌದ್ಧಿಕ ನೆಲೆ ಒದಗಿಸುವ ಒಂದು ಜಾಗ. ಅಲ್ಲಿ ಬಹುಸಂಸ್ಕೃತಿಯ ಚಿಂತನೆಗಳು ಮೊಳೆಯಬೇಕೇ ಹೊರತು ಸಮಾಜವನ್ನು ಹಿಂದಕ್ಕೆ ಎಳೆದೊಯ್ಯುವ ಮನಸ್ಥಿತಿಯನ್ನು ಸೃಷ್ಟಿಸುವಂತಾಗಬಾರದು.
-ನಾ.ದಿವಾಕರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಪ್ರವಾಸಿ ಮಹಿಳೆ ನಾಪತ್ತೆ

ಮಡಿಕೇರಿಗೆ ಬಂದಿದ್ದ ಕೇರಳ ಮೂಲದ ಟ್ರೆಕ್ಕರ್ ಮಡಿಕೇರಿ: ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಚಾರಣಕ್ಕೆ ತೆರಳಿದ್ದಾಗ ನಾಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯ…

47 mins ago

ಓದುಗರ ಪತ್ರ: ಹಿರಿಯ ನಾಗರಿಕರಿಗೆ ರೈಲ್ವೆ ರಿಯಾಯಿತಿ

ಸೌಲಭ್ಯ ಮತ್ತೆ ಮುಂದುವರಿಯಲಿ ಕಳೆದ ಆರ್ಥಿಕ ವರ್ಷದಲ್ಲಿ (೨೦೨೫-೨೬), ನೈಋತ್ಯ ರೈಲ್ವೆಯ ಮೈಸೂರು ವಿಭಾಗವು ರೂ.೪೪೯.೧೩ ಕೋಟಿ ರೂಪಾಯಿಗೂ ಹೆಚ್ಚು…

52 mins ago

ಓದುಗರ ಪತ್ರ: ಮರುಪರಿಶೀಲನೆ ಅತ್ಯಗತ್ಯ

ಇತ್ತೀಚಿನ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ ( ಎಫ್. ಸಿ. ಆರ್. ಎ) ತಿದ್ದುಪಡಿಗಳು ಕೇವಲ ನಿಯಮಗಳಲ್ಲ, ಅವು ದಶಕಗಳಿಂದ…

54 mins ago

ಬಸ್‌ನಲ್ಲಿ ಚಿನ್ನಾಭರಣ ಕಳವು

೧೮ ಲಕ್ಷ ರೂ. ಮೌಲ್ಯದ ಒಡವೆಗಳ ಅಪಹರಣ ಮೈಸೂರು: ನಗರ ಸಾರಿಗೆ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರೊಬ್ಬರ ಬ್ಯಾಗ್‌ನಲ್ಲಿದ್ದ ಸುಮಾರು ೧೮…

1 hour ago

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್ ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

1 hour ago