Andolana originals

ಓದುಗರ ಪತ್ರ: ಕಲಾಮಂದಿರವೇನು ಧಾರ್ಮಿಕ ಸ್ಥಳವೇ?

ಕಳೆದ ಗುರುವಾರ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರನ್ನು ಅಭಿನಂದಿಸಲು ಮೈಸೂರಿನ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೋಜನಕ್ಕೆ ಮಾಂಸಾಹಾರವನ್ನು ಉಣಬಡಿಸಿರುವುದಾಗಿ ವರದಿಯಾಗಿದ್ದು, ಇದಕ್ಕೆ ಕೆಲವರಿಂದ ಆಕ್ಷೇಪಗಳೂ ಕೇಳಿಬರುತ್ತಿವೆ.

ಕಲಾಮಂದಿರ ಸಭಾಂಗಣದ ಒಳಾವರಣದಲ್ಲಿ ಯಾವುದೇ ರೀತಿಯ ಭೋಜನ ಅಥವಾ ಆಹಾರ ನೀಡುವ ವ್ಯವಸ್ಥೆಯ ವಿರುದ್ಧ ಹಿಂದೆಯೂ ಆಕ್ಷೇಪ ವ್ಯಕ್ತವಾಗಿತ್ತು. ಶುಚಿತ್ವದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ ಒಳಾವರಣದ ಬದಲಿಗೆ ಹೊರ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲು ಸೂಚಿಸಲಾಗಿತ್ತು. ಕಲಾಮಂದಿರ ರಾಜ್ಯದ ಸಂಸ್ಕೃತಿ ಇಲಾಖೆಗೆ ಸೇರಿದ್ದು, ಇದು ಈಗಾಗಲೇ ಮೂರೂ ದಿಕ್ಕುಗಳಿಂದ ಈ ಸಂಪ್ರದಾಯವಾದಿಗಳ ದಾಳಿಯಿಂದ
ಸಂಕುಚಿತವಾಗಿರುವ ‘ಸಂಸ್ಕೃತಿ’ ಎಂಬ ಪದವನ್ನು ಇಲ್ಲಿಗೂ ವಿಸ್ತರಿಸಿ, ಈ ಆವರಣದಲ್ಲಿ, ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಮಾಂಸಾಹಾರ ಒದಗಿಸುವುದು ಸೂಕ್ತವಲ್ಲ ಎಂದು ಹೇಳುವುದು, ಬಹು ಸಂಸ್ಕೃತಿಗೆ ವಿರುದ್ಧವಾಗಿದೆ. ಇಲ್ಲಿನ ಬಹುತೇಕ ಕಾರ್ಯಕ್ರಮಗಳಿಗೆ ಎಲ್ಲ ಸಮುದಾಯದವರು ಬರುವುದರಿಂದಲೇ ರುಚಿಸುವ ಆಹಾರ ನೀಡುವ ವಿಶಾಲ ಮನೋಭಾವ ನಮ್ಮೊಳಗಿರಬೇಕಲ್ಲವೇ? ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಸಹಭೋಜನ’ದ ಕರೆ ಕೇವಲ ಒಟ್ಟಿಗೆ ಕುಳಿತು ಊಟ ಮಾಡುವುದಕ್ಕೆ ಸೀಮಿತವಾಗಿರುವುದಲ್ಲ. ಅದರ ಹಿಂದೆ ಎಲ್ಲ ವಿಧದ ಆಹಾರಗಳನ್ನೂ ಒಟ್ಟಿಗೆ ಕುಳಿತು ಸೇವಿಸುವ ಒಂದು ವಿಶಾಲ ಚಿಂತನ ಇದೆ.

ಇಷ್ಟಕ್ಕೂ ಕಲಾಮಂದಿರದಲ್ಲಿ ಮಾಂಸಾಹಾರ ನೀಡುವುದರಿಂದ ಯಾವ/ಯಾರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ? ಸಸ್ಯಾಹಾರವನ್ನಷ್ಟೇ ನೀಡಬೇಕು ಎಂದು ಶಾಸನ ವಿಧಿಸಲು ಅದೇನು ಧಾರ್ಮಿಕ ಕ್ಷೇತ್ರವೇ? ಅದು ನಾಡಿನ ಸಾಂಸ್ಕೃತಿಕ ವೈವಿಧ್ಯತೆಗೆ ಬೌದ್ಧಿಕ ನೆಲೆ ಒದಗಿಸುವ ಒಂದು ಜಾಗ. ಅಲ್ಲಿ ಬಹುಸಂಸ್ಕೃತಿಯ ಚಿಂತನೆಗಳು ಮೊಳೆಯಬೇಕೇ ಹೊರತು ಸಮಾಜವನ್ನು ಹಿಂದಕ್ಕೆ ಎಳೆದೊಯ್ಯುವ ಮನಸ್ಥಿತಿಯನ್ನು ಸೃಷ್ಟಿಸುವಂತಾಗಬಾರದು.
-ನಾ.ದಿವಾಕರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

4 mins ago

ಮುಡಾ ಪ್ರಕರಣ: ಮುಡಾ ಕಚೇರಿಗಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕ ಫೈಲ್‌: ಶ್ರೀವತ್ಸ

ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್‌ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್‌ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್‌.ಶ್ರೀವತ್ಸ…

2 hours ago

ಮುಡಾ ಕಚೇರಿ ಮೇಲೆ ಇಡಿ ದಾಳಿ: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ

ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…

3 hours ago

ಮುಡಾ ಕಚೇರಿಯ ಮೇಲೆ ಇಡಿ ದಾಳಿ ದುರುದ್ದೇಶಪೂರ್ವಕ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್‌.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…

4 hours ago

ಮುಡಾ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಮುಡಾ ಕೇಸ್‌ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…

4 hours ago

ಭವಾನಿ ರೇವಣ್ಣಗೆ ಬಿಗ್‌ ರಿಲೀಫ್:‌ ಹೈಕೋರ್ಟ್‌ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್‌ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್‌ಐಟಿ…

4 hours ago