Andolana originals

ಓದುಗರ ಪತ್ರ: ಕಲಾಮಂದಿರವೇನು ಧಾರ್ಮಿಕ ಸ್ಥಳವೇ?

ಕಳೆದ ಗುರುವಾರ ದಸರಾ ಸಾಂಸ್ಕೃತಿಕ ಉಪಸಮಿತಿಯ ಅಧಿಕಾರೇತರ ಸದಸ್ಯರನ್ನು ಅಭಿನಂದಿಸಲು ಮೈಸೂರಿನ ಕಲಾಮಂದಿರದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಭೋಜನಕ್ಕೆ ಮಾಂಸಾಹಾರವನ್ನು ಉಣಬಡಿಸಿರುವುದಾಗಿ ವರದಿಯಾಗಿದ್ದು, ಇದಕ್ಕೆ ಕೆಲವರಿಂದ ಆಕ್ಷೇಪಗಳೂ ಕೇಳಿಬರುತ್ತಿವೆ.

ಕಲಾಮಂದಿರ ಸಭಾಂಗಣದ ಒಳಾವರಣದಲ್ಲಿ ಯಾವುದೇ ರೀತಿಯ ಭೋಜನ ಅಥವಾ ಆಹಾರ ನೀಡುವ ವ್ಯವಸ್ಥೆಯ ವಿರುದ್ಧ ಹಿಂದೆಯೂ ಆಕ್ಷೇಪ ವ್ಯಕ್ತವಾಗಿತ್ತು. ಶುಚಿತ್ವದ ಸಮಸ್ಯೆ ಎದುರಾಗುತ್ತದೆ ಎಂಬ ಕಾರಣಕ್ಕೆ ಒಳಾವರಣದ ಬದಲಿಗೆ ಹೊರ ಆವರಣದಲ್ಲಿ ಭೋಜನ ವ್ಯವಸ್ಥೆ ಮಾಡಲು ಸೂಚಿಸಲಾಗಿತ್ತು. ಕಲಾಮಂದಿರ ರಾಜ್ಯದ ಸಂಸ್ಕೃತಿ ಇಲಾಖೆಗೆ ಸೇರಿದ್ದು, ಇದು ಈಗಾಗಲೇ ಮೂರೂ ದಿಕ್ಕುಗಳಿಂದ ಈ ಸಂಪ್ರದಾಯವಾದಿಗಳ ದಾಳಿಯಿಂದ
ಸಂಕುಚಿತವಾಗಿರುವ ‘ಸಂಸ್ಕೃತಿ’ ಎಂಬ ಪದವನ್ನು ಇಲ್ಲಿಗೂ ವಿಸ್ತರಿಸಿ, ಈ ಆವರಣದಲ್ಲಿ, ಎಲ್ಲ ಸಮುದಾಯದವರೂ ಬಂದು ಹೋಗುವುದರಿಂದ ಮಾಂಸಾಹಾರ ಒದಗಿಸುವುದು ಸೂಕ್ತವಲ್ಲ ಎಂದು ಹೇಳುವುದು, ಬಹು ಸಂಸ್ಕೃತಿಗೆ ವಿರುದ್ಧವಾಗಿದೆ. ಇಲ್ಲಿನ ಬಹುತೇಕ ಕಾರ್ಯಕ್ರಮಗಳಿಗೆ ಎಲ್ಲ ಸಮುದಾಯದವರು ಬರುವುದರಿಂದಲೇ ರುಚಿಸುವ ಆಹಾರ ನೀಡುವ ವಿಶಾಲ ಮನೋಭಾವ ನಮ್ಮೊಳಗಿರಬೇಕಲ್ಲವೇ? ಡಾ.ಬಿ.ಆರ್.ಅಂಬೇಡ್ಕರ್ ಅವರ ‘ಸಹಭೋಜನ’ದ ಕರೆ ಕೇವಲ ಒಟ್ಟಿಗೆ ಕುಳಿತು ಊಟ ಮಾಡುವುದಕ್ಕೆ ಸೀಮಿತವಾಗಿರುವುದಲ್ಲ. ಅದರ ಹಿಂದೆ ಎಲ್ಲ ವಿಧದ ಆಹಾರಗಳನ್ನೂ ಒಟ್ಟಿಗೆ ಕುಳಿತು ಸೇವಿಸುವ ಒಂದು ವಿಶಾಲ ಚಿಂತನ ಇದೆ.

ಇಷ್ಟಕ್ಕೂ ಕಲಾಮಂದಿರದಲ್ಲಿ ಮಾಂಸಾಹಾರ ನೀಡುವುದರಿಂದ ಯಾವ/ಯಾರ ಭಾವನೆಗಳಿಗೆ ಧಕ್ಕೆ ಉಂಟಾಗುತ್ತದೆ? ಸಸ್ಯಾಹಾರವನ್ನಷ್ಟೇ ನೀಡಬೇಕು ಎಂದು ಶಾಸನ ವಿಧಿಸಲು ಅದೇನು ಧಾರ್ಮಿಕ ಕ್ಷೇತ್ರವೇ? ಅದು ನಾಡಿನ ಸಾಂಸ್ಕೃತಿಕ ವೈವಿಧ್ಯತೆಗೆ ಬೌದ್ಧಿಕ ನೆಲೆ ಒದಗಿಸುವ ಒಂದು ಜಾಗ. ಅಲ್ಲಿ ಬಹುಸಂಸ್ಕೃತಿಯ ಚಿಂತನೆಗಳು ಮೊಳೆಯಬೇಕೇ ಹೊರತು ಸಮಾಜವನ್ನು ಹಿಂದಕ್ಕೆ ಎಳೆದೊಯ್ಯುವ ಮನಸ್ಥಿತಿಯನ್ನು ಸೃಷ್ಟಿಸುವಂತಾಗಬಾರದು.
-ನಾ.ದಿವಾಕರ, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago