Andolana originals

ಓದುಗರ ಪತ್ರ: ಮಹಿಳಾ ಅಧಿಕಾರಿಗಳಿಗೆ ಅಭಿನಂದನೆಗಳು

ಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತುಚಾಮರಾಜನಗರದಲ್ಲಿ ಅಕ್ಟೋಬರ್ ೭ರಿಂದ ಅ. ೯ರವರೆಗೆ ಆಯೋಜಿಸಿದ್ದ ‘ಚೆಲುವ ಚಾಮರಾಜನಗರ ದಸರಾ’ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿದ್ದರಿಂದ ಎಲ್ಲ ವಯೋಮಾನದವರೂ ಕಣ್ತುಂಬಿಕೊಳ್ಳಲು ಸಾಧ್ಯವಾಯಿತು. ಯುವದಸರಾ, ಫಲಪುಷ್ಪ ಪ್ರದರ್ಶನ, ಆಹಾರ ಮೇಳ, ಮಹಿಳಾ ದಸರಾ, ರಂಗೋಲಿ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆಯಲ್ಲಿ ಜಿಲ್ಲಾಡಳಿತ ಶಿಸ್ತು ಕಾಪಾಡಿಕೊಳ್ಳುವ ಜತೆಗೆ ೭೦೦ಕ್ಕೂ ಅಧಿಕ ಸ್ಥಳೀಯ ಕಲಾವಿದರಿಗೆ ಈ ಬಾರಿ ಅವಕಾಶ ನೀಡಿದ್ದು ವಿಶೇಷವೆನಿಸಿತು. ಜಿಲ್ಲೆಯ ಪ್ರಮುಖ ಬೀದಿಗಳಲ್ಲಿ ಅಳವಡಿಸಿದ್ದ ವರ್ಣರಂಜಿತ ದೀಪಾಲಂಕಾರ ಗಮನ ಸೆಳೆಯಿತು. ಕಾರ್ಯಕ್ರಮಗಳ ಯಶಸ್ವಿಗಾಗಿ ಶ್ರಮಿಸಿದ ಮಹಿಳಾ ಅಧಿಕಾರಿಗಳಾದ ಜಿಲ್ಲಾಧಿಕಾರಿ ಸಿ. ಟಿ ಶಿಲ್ಪಾ ನಾಗ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ, ಮುಖ್ಯ ಕಾರ್ಯನಿರ್ವಹಣಾಽಕಾರಿ ಮೋನಾ ರೋತ್, ಅಪಾರ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿ. ಪಂ. ಉಪಕಾರ್ಯದರ್ಶಿ ಲಕ್ಷಿ ಅವರಿಗೆ ಅಭಿನಂದನೆಗಳು. -ಅನುಷಾ ಗಂಗಾಧರ್, ಚಾಮರಾಜನಗರ ತಾ.

 

andolana

Recent Posts

ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗೆ ಮೀಸಲಿಟ್ಟ ಅನುದಾನ ಎಷ್ಟು ಗೊತ್ತಾ.?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳಿಗೆ ಭರ್ಜರಿ ಅನುದಾನ ಹಂಚಿಕೆ ಮಾಡಲಾಗಿದೆ. ಶಿಕ್ಷಣ ಇಲಾಖೆಗೆ…

3 mins ago

ರಾಜ್ಯ ಬಜೆಟ್‌: ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ರೂಪಿಸುವ ಯೋಜನೆ

ಬೆಂಗಳೂರು: ಸಾಂಸ್ಕೃತಿಕ ನಗರಿ ಮೈಸೂರನ್ನು ಕರ್ನಾಟಕದ ಎರಡನೇ ಅತಿದೊಡ್ಡ ಐಟಿ ಸಿಟಿಯನ್ನಾಗಿ ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. 17ನೇ…

12 mins ago

ರಾಜ್ಯ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ರಾಜ್ಯ ಬಜೆಟ್‌ನ್ನು ಮಂಡನೆ ಮಾಡಿದ್ದಾರೆ. ಬಜೆಟ್‌ನಲ್ಲಿ ಮದ್ಯಪ್ರಿಯರಿಗೆ ಶಾಕ್‌ ಕೊಟ್ಟ ಸಿಎಂ…

38 mins ago

ರಾಜ್ಯ ಬಜೆಟ್‌: 16 ವರ್ಷದ ಒಳಗಿನ ಮಕ್ಕಳಿಗೆ ಮೊಬೈಲ್‌ ನಿಷೇಧ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ದಾಖಲೆಯ 17ನೇ ಬಜೆಟ್‌ ಅನ್ನು ಮಂಡಿಸಿದರು. ವಿಧಾನಸೌಧದಲ್ಲಿ ಬಜೆಟ್‌ ಮಂಡಿಸಿದ ಸಿಎಂ ಸಿದ್ದರಾಮಯ್ಯ ಅವರು,…

52 mins ago

ರಾಜ್ಯ ಬಜೆಟ್‌: ಮೈಸೂರಿನ ಜಯದೇವಾ ಆಸ್ಪತ್ರೆ 400 ಬೆಡ್‌ಗಳಿಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಬಜೆಟ್‌ನಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಸರು ಬದಲಾವಣೆ ಮಾಡಲಾಗಿದ್ದು, ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಹೆಸರು ಬದಲಾವಣೆ…

59 mins ago

ರಾಜ್ಯ ಬಜೆಟ್: ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ

ಬೆಂಗಳೂರು: ಇಂದು ಮಂಡನೆ ಆದ ರಾಜ್ಯ ಬಜೆಟ್‌ನಲ್ಲಿ ಬೆಂಗಳೂರು ಅಭಿವೃದ್ಧಿಗೆ 7 ಸಾವಿರ ಕೋಟಿ ಅನುದಾನ ಘೋಷಣೆ ಮಾಡಲಾಗಿದೆ. ರಾಜ್ಯ…

1 hour ago