ಓದುಗರ ಪತ್ರ
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ ಪ್ರಶಸ್ತಿ ನೀಡಿರುವುದು ಪ್ರಶಂಸನೀಯ. ಈ ಬಾರಿ ಇಬ್ಬರು ಚುಟುಕು ಸಾಹಿತಿಗಳಿಗೆ ಈ ಗೌರವ ದೊರೆತಿದೆ. ಈ ನಿಟ್ಟಿನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ ಮೈಸೂರಿನ ಡಾ ಎಂ.ಜಿ.ಆರ್.ಅರಸ್ ರವರು ಚುಟುಕು ಸಾಹಿತ್ಯ ಪರಿಷತ್ ಸ್ಥಾಪಿಸಿ, ಕಳೆದ ಎರಡೂವರೆ ದಶಕಗಳಿಂದಲೂ ಪ್ರತಿ ವರ್ಷವೂ ಚುಟುಕು ಸಾಹಿತ್ಯ ಪರಿಷತ್ ಮೂಲಕ ಚುಟುಕು ಕವಿಗೋಷ್ಠಿಗಳನ್ನು ಅಯೋಜಿಸಿ, ಬೆಳಕಿಗೆ ಬಾರದ ಹಲವಾರು ಸಾಹಿತಿಗಳನ್ನು ಪರಿಚಯಿಸಿದ್ದಾರೆ.
ಹಾಗೆಯೇ ಕಳೆದ ಹಲವಾರು ವರ್ಷಗಳಿಂದಲೂ ಚುಟುಕು ಸಾಹಿತ್ಯ ಪರಿಷತ್ ಧ್ಯೇಯ ವಾಕ್ಯವಾದ ಚುಟುಕು ಸಾಹಿತ್ಯ, ಬದುಕಿಗೆ ಲಾಲಿತ್ಯ ಎಂದು ಪರಿಚಯಿಸಿ, ಬಹಳಷ್ಟು ಚುಟುಕು ಕವನಗಳು, ಚುಟುಕು ಕವನ ಸಂಕಲನಗಳನ್ನು ತಮ್ಮ ಪರಿಷತ್ ಮೂಲಕ ಪ್ರಕಟಿಸಿ, ಪ್ರತಿ ವರ್ಷವೂ ಚುಟುಕು ಸಾಹಿತ್ಯ ಸಮಾವೇಶ ಏರ್ಪಡಿಸಿ, ಚುಟುಕು ಶ್ರೀ, ಇತ್ಯಾದಿ ಬಿರುದುಗಳನ್ನು ನೀಡುತ್ತಾ ಬಂದಿರುವುದು ಮೆಚ್ಚುವಂತಹದ್ದು.
ಪ್ರಸ್ತುತ ಚುಟುಕು ಸಾಹಿತ್ಯದ ಪ್ರಕಾರಕ್ಕೂ ಮನ್ನಣೆ ನೀಡಿ ಕನ್ನಡ ಪುಸ್ತಕ ಪ್ರಾಧಿಕಾರ, ಚುಟುಕು ಸಾಹಿತಿಗಳನ್ನು ಗುರುತಿಸಿ ಗೌರವಿಸಿರುವುದು, ಡಾ. ಅರಸ್ರವರ ಶ್ರಮಕ್ಕೆ ಸಂದ ಗೌರವ ಎಂದೇ ಹೇಳಬೇಕು.
-ವಿಜಯ್ ಹೆಮ್ಮಿಗೆ, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…