Andolana originals

ಓದುಗರ ಪತ್ರ: ಆಡಳಿತ ವ್ಯವಸ್ಥೆ ಸುಧಾರಣೆಯಾಗಬೇಕಿದೆ

ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ ಎಸ್‌.ಎನ್‌. ಸುಬ್ರಮಣ್ಯನ್, ವಾರದಲ್ಲಿ 90 ಗಂಟೆಗಳು ಕೆಲಸ ಮಾಡಿ ಎಂದು ಕರೆ ಕೊಟ್ಟಿದ್ದಾರೆ.

ಖಾಸಗಿ ಐಟಿ, ಬಿಟಿ ಕಂಪನಿಗಳಲ್ಲಿ ವಾರದಲ್ಲಿ 40 ಗಂಟೆಗಳು ಕೆಲಸ ಮಾಡಿ ಬಹಳಷ್ಟು ಮಂದಿ ಜೇಬು ತುಂಬಿಸಿಕೊಂಡು ಉಳಿದ ಎರಡು ದಿನಗಳನ್ನು ಮೋಜಿನಲ್ಲಿ ಕಳೆಯುತ್ತಾರೆ. ಇನ್ನೊಂದು ಕಡೆ ಬಹುತೇಕ ಸರ್ಕಾರಿ ಉದ್ಯೋಗಿಗಳು, ಈಗ ಸಾಕಷ್ಟು ತೃಪ್ತಿದಾಯಕ ವೇತನ ಪಡೆದರೂ ವಾರದಲ್ಲಿ 6 ದಿನಗಳು ಕೆಲಸ ಮಾಡಿದರೂ ಲಂಚ ಕೊಡದೆ ಯಾವ ಫೈಲ್ ಕೂಡ ಮುಂದೆ ಹೋಗುವುದಿಲ್ಲ. ಇಂದಿಗೂ ಬಹಳಷ್ಟು ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ, ಹಾಜರಾತಿ ಹಾಕುವ ವ್ಯವಸ್ಥೆಯೇ ಕಡ್ಡಾಯವಾಗಿಲ್ಲ. ಯಾವ ಕೆಲಸದ ನಿಮಿತ್ತ ಕಚೇರಿಗೆ ಹೋದರೂ ನಾಳೆ ಬಾ ಎನ್ನುವುದು ಅವರ ಸಿದ್ಧ ಉತ್ತರವಾಗಿರುತ್ತದೆ. ಕಚೇರಿ ತೆರೆದಿರುತ್ತದೆ, ಆದರೆ ನೌಕರ ಇರುವುದಿಲ್ಲ. ಹಾಗಾಗಿ ಆಡಳಿತದ ವ್ಯವಸ್ಥೆ ಸುಧಾರಣೆಯಾಗದ ಹೊರತು 100 ಗಂಟೆ ಕೆಲಸ ಮಾಡಿದರೂ ಪ್ರಯೋಜನ ಆಗುವುದಿಲ್ಲ.

-ಮುಳ್ಳೂರು ಪ್ರಕಾಶ್, ಮೈಸೂರು.

 

ಆಂದೋಲನ ಡೆಸ್ಕ್

Recent Posts

ಕೇಂದ್ರ ಬಜೆಟ್‌ 2026: 12 ಕ್ಯಾನ್ಸರ್‌ ಔಷಧಗಳಿಗೆ ತೆರಿಗೆ ವಿನಾಯಿತಿ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ತೆರಿಗೆಗೆ ಸಂಬಂಧಿಸಿದಂತೆ ಹಲವು…

34 mins ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ 500 ಹೊಸ ಜಲಾಶಯಗಳ ನಿರ್ಮಾಣಕ್ಕೆ ಯೋಜನೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ದೇಶಾದ್ಯಂತ 500 ಹೊಸ…

50 mins ago

ಕೇಂದ್ರ ಬಜೆಟ್‌ 2026: ಪ್ರತಿ ಜಿಲ್ಲೆಗೊಂದು ಬಾಲಕಿಯರ ಹಾಸ್ಟೆಲ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಪ್ರತಿ ಜಿಲ್ಲೆಗೊಂದು ಬಾಲಕಿಯ…

1 hour ago

ಕೇಂದ್ರ ಬಜೆಟ್‌ 2026: ದೇಶಾದ್ಯಂತ ಐದು ಮೆಡಿಕಲ್‌ ಹಬ್‌ಗಳ ನಿರ್ಮಾಣ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ಕೇಂದ್ರ ಬಜೆಟ್‌-2026: ಬೆಂಗಳೂರಿಗೆ ಹೈಸ್ಪೀಡ್‌ ರೈಲು ಕಾರಿಡಾರ್‌ ಘೋಷಣೆ

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಇದು ಅವರ 9ನೇ…

1 hour ago

ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್‌

ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್‌ ಮಂಡನೆ ಮಾಡಿದರು. ಸೆಮಿಕಂಡಕ್ಟರ್‌ ಮಿಷನ್‌ 2.0…

2 hours ago