Andolana originals

ಓದುಗರ ಪತ್ರ: ಆಡಳಿತ ವ್ಯವಸ್ಥೆ ಸುಧಾರಣೆಯಾಗಬೇಕಿದೆ

ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ ಎಸ್‌.ಎನ್‌. ಸುಬ್ರಮಣ್ಯನ್, ವಾರದಲ್ಲಿ 90 ಗಂಟೆಗಳು ಕೆಲಸ ಮಾಡಿ ಎಂದು ಕರೆ ಕೊಟ್ಟಿದ್ದಾರೆ.

ಖಾಸಗಿ ಐಟಿ, ಬಿಟಿ ಕಂಪನಿಗಳಲ್ಲಿ ವಾರದಲ್ಲಿ 40 ಗಂಟೆಗಳು ಕೆಲಸ ಮಾಡಿ ಬಹಳಷ್ಟು ಮಂದಿ ಜೇಬು ತುಂಬಿಸಿಕೊಂಡು ಉಳಿದ ಎರಡು ದಿನಗಳನ್ನು ಮೋಜಿನಲ್ಲಿ ಕಳೆಯುತ್ತಾರೆ. ಇನ್ನೊಂದು ಕಡೆ ಬಹುತೇಕ ಸರ್ಕಾರಿ ಉದ್ಯೋಗಿಗಳು, ಈಗ ಸಾಕಷ್ಟು ತೃಪ್ತಿದಾಯಕ ವೇತನ ಪಡೆದರೂ ವಾರದಲ್ಲಿ 6 ದಿನಗಳು ಕೆಲಸ ಮಾಡಿದರೂ ಲಂಚ ಕೊಡದೆ ಯಾವ ಫೈಲ್ ಕೂಡ ಮುಂದೆ ಹೋಗುವುದಿಲ್ಲ. ಇಂದಿಗೂ ಬಹಳಷ್ಟು ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ, ಹಾಜರಾತಿ ಹಾಕುವ ವ್ಯವಸ್ಥೆಯೇ ಕಡ್ಡಾಯವಾಗಿಲ್ಲ. ಯಾವ ಕೆಲಸದ ನಿಮಿತ್ತ ಕಚೇರಿಗೆ ಹೋದರೂ ನಾಳೆ ಬಾ ಎನ್ನುವುದು ಅವರ ಸಿದ್ಧ ಉತ್ತರವಾಗಿರುತ್ತದೆ. ಕಚೇರಿ ತೆರೆದಿರುತ್ತದೆ, ಆದರೆ ನೌಕರ ಇರುವುದಿಲ್ಲ. ಹಾಗಾಗಿ ಆಡಳಿತದ ವ್ಯವಸ್ಥೆ ಸುಧಾರಣೆಯಾಗದ ಹೊರತು 100 ಗಂಟೆ ಕೆಲಸ ಮಾಡಿದರೂ ಪ್ರಯೋಜನ ಆಗುವುದಿಲ್ಲ.

-ಮುಳ್ಳೂರು ಪ್ರಕಾಶ್, ಮೈಸೂರು.

 

ಆಂದೋಲನ ಡೆಸ್ಕ್

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

2 hours ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

2 hours ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

3 hours ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

3 hours ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

14 hours ago