ಓದುಗರ ಪತ್ರ
ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ ಎಸ್.ಎನ್. ಸುಬ್ರಮಣ್ಯನ್, ವಾರದಲ್ಲಿ 90 ಗಂಟೆಗಳು ಕೆಲಸ ಮಾಡಿ ಎಂದು ಕರೆ ಕೊಟ್ಟಿದ್ದಾರೆ.
ಖಾಸಗಿ ಐಟಿ, ಬಿಟಿ ಕಂಪನಿಗಳಲ್ಲಿ ವಾರದಲ್ಲಿ 40 ಗಂಟೆಗಳು ಕೆಲಸ ಮಾಡಿ ಬಹಳಷ್ಟು ಮಂದಿ ಜೇಬು ತುಂಬಿಸಿಕೊಂಡು ಉಳಿದ ಎರಡು ದಿನಗಳನ್ನು ಮೋಜಿನಲ್ಲಿ ಕಳೆಯುತ್ತಾರೆ. ಇನ್ನೊಂದು ಕಡೆ ಬಹುತೇಕ ಸರ್ಕಾರಿ ಉದ್ಯೋಗಿಗಳು, ಈಗ ಸಾಕಷ್ಟು ತೃಪ್ತಿದಾಯಕ ವೇತನ ಪಡೆದರೂ ವಾರದಲ್ಲಿ 6 ದಿನಗಳು ಕೆಲಸ ಮಾಡಿದರೂ ಲಂಚ ಕೊಡದೆ ಯಾವ ಫೈಲ್ ಕೂಡ ಮುಂದೆ ಹೋಗುವುದಿಲ್ಲ. ಇಂದಿಗೂ ಬಹಳಷ್ಟು ಕಚೇರಿಗಳಲ್ಲಿ ಸಮಯಕ್ಕೆ ಸರಿಯಾಗಿ ಹಾಜರಾಗಿ, ಹಾಜರಾತಿ ಹಾಕುವ ವ್ಯವಸ್ಥೆಯೇ ಕಡ್ಡಾಯವಾಗಿಲ್ಲ. ಯಾವ ಕೆಲಸದ ನಿಮಿತ್ತ ಕಚೇರಿಗೆ ಹೋದರೂ ನಾಳೆ ಬಾ ಎನ್ನುವುದು ಅವರ ಸಿದ್ಧ ಉತ್ತರವಾಗಿರುತ್ತದೆ. ಕಚೇರಿ ತೆರೆದಿರುತ್ತದೆ, ಆದರೆ ನೌಕರ ಇರುವುದಿಲ್ಲ. ಹಾಗಾಗಿ ಆಡಳಿತದ ವ್ಯವಸ್ಥೆ ಸುಧಾರಣೆಯಾಗದ ಹೊರತು 100 ಗಂಟೆ ಕೆಲಸ ಮಾಡಿದರೂ ಪ್ರಯೋಜನ ಆಗುವುದಿಲ್ಲ.
-ಮುಳ್ಳೂರು ಪ್ರಕಾಶ್, ಮೈಸೂರು.
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…