ಓದುಗರ ಪತ್ರ
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ.
ಆಡಳಿತ ಪಕ್ಷಕ್ಕೆ ಬಹುಮತವಿರುವುದರಿಂದ ಉಭಯ ಸದನಗಳಲ್ಲೂ ಮಸೂದೆ ಸುಲಭವಾಗಿ ಅಂಗೀಕಾರವಾಗುತ್ತದೆ. ಸದನದಲ್ಲಿ ಸರ್ಕಾರದ ಮಸೂದೆಗಳ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ನಡೆಸಬೇಕು. ಆದರೆ ಯಾವುದೋ ಸಂಬಂಧಪಡದ ವಿಷಯಗಳನ್ನು ಹಿಡಿದು ಚರ್ಚೆಗೆ ಒತ್ತಾಯಿಸುವುದು, ಸರ್ಕಾರ ಒಪ್ಪದಿದ್ದರೆ, ಸದನದಿಂದ ಹೊರ ನಡೆಯುವುದು ಸಾಮಾನ್ಯ ಎನ್ನುವಂತಾಗಿದೆ. ಯಾವುದೇ ಚರ್ಚೆ ಇಲ್ಲದೆ ಧ್ವನಿ ಮತದ ಮೂಲಕ ಮಸೂದೆ ಪಾಸು ಮಾಡುವ ವ್ಯವಸ್ಥೆ ಸರ್ಕಾರಕ್ಕೆ ವರದಾನವಾಗಿದೆ.
ಸದಸ್ಯರು ಸದನಕ್ಕೆ ಹಾಜರಾಗಿ ಭತ್ಯೆ ಪಡೆಯಲು ಅರ್ಹರಾಗುತ್ತಾರೆ. ನಂತರ ಸದನದಿಂದ ಹೊರ ನಡೆಯುತ್ತಾರೆ. ಅಧಿವೇಶನಗಳು ಮಸೂದೆ ಅಂಗೀಕಾರಕ್ಕೆ ಮಾತ್ರ ಸೀಮಿತವಾಗದೇ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ.
-ಮುಳ್ಳೂರು ಪ್ರಕಾಶ, ಕನಕದಾಸ ನಗರ, ಮೈಸೂರು
• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…
ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…
ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…
ಚಾಮರಾಜನಗರ : ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಯುಗಾದಿ, ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಸೌಹಾರ್ದ ಸಭೆ…
ಮಂಡ್ಯ : 2027ರ ಜನಗಣತಿಯು ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ, ಕಾರ್ಯಾಚರಣೆಯನ್ನು ದೋಷರಹಿತವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಕುಮಾರ ಅವರು ತಾಂತ್ರಿಕ…
ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ…