ಓದುಗರ ಪತ್ರ
ಬೆಳಗಾವಿಯಲ್ಲಿ ವಿಧಾನಸಭಾ ಅಧಿವೇಶನ ಆರಂಭವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಸದನದಲ್ಲಿ ಯಾವುದೇ ವಿಷಯ, ಜನರ ಸಮಸ್ಯೆ, ಮಸೂದೆಗಳ ಬಗ್ಗೆ ರಚನಾತ್ಮಕ ಚರ್ಚೆ ನಡೆದದ್ದೇ ವಿರಳ ಎನ್ನುವಂತಿದೆ.
ಆಡಳಿತ ಪಕ್ಷಕ್ಕೆ ಬಹುಮತವಿರುವುದರಿಂದ ಉಭಯ ಸದನಗಳಲ್ಲೂ ಮಸೂದೆ ಸುಲಭವಾಗಿ ಅಂಗೀಕಾರವಾಗುತ್ತದೆ. ಸದನದಲ್ಲಿ ಸರ್ಕಾರದ ಮಸೂದೆಗಳ ಬಗ್ಗೆ ವಿರೋಧ ಪಕ್ಷಗಳು ಚರ್ಚೆ ನಡೆಸಬೇಕು. ಆದರೆ ಯಾವುದೋ ಸಂಬಂಧಪಡದ ವಿಷಯಗಳನ್ನು ಹಿಡಿದು ಚರ್ಚೆಗೆ ಒತ್ತಾಯಿಸುವುದು, ಸರ್ಕಾರ ಒಪ್ಪದಿದ್ದರೆ, ಸದನದಿಂದ ಹೊರ ನಡೆಯುವುದು ಸಾಮಾನ್ಯ ಎನ್ನುವಂತಾಗಿದೆ. ಯಾವುದೇ ಚರ್ಚೆ ಇಲ್ಲದೆ ಧ್ವನಿ ಮತದ ಮೂಲಕ ಮಸೂದೆ ಪಾಸು ಮಾಡುವ ವ್ಯವಸ್ಥೆ ಸರ್ಕಾರಕ್ಕೆ ವರದಾನವಾಗಿದೆ.
ಸದಸ್ಯರು ಸದನಕ್ಕೆ ಹಾಜರಾಗಿ ಭತ್ಯೆ ಪಡೆಯಲು ಅರ್ಹರಾಗುತ್ತಾರೆ. ನಂತರ ಸದನದಿಂದ ಹೊರ ನಡೆಯುತ್ತಾರೆ. ಅಧಿವೇಶನಗಳು ಮಸೂದೆ ಅಂಗೀಕಾರಕ್ಕೆ ಮಾತ್ರ ಸೀಮಿತವಾಗದೇ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುವುದು ಅಗತ್ಯವಾಗಿದೆ.
-ಮುಳ್ಳೂರು ಪ್ರಕಾಶ, ಕನಕದಾಸ ನಗರ, ಮೈಸೂರು
ಮೈಸೂರು : ಕೆಎಸ್ಆರ್ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…